AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮಡಿದವರಿಗೆ ಸರ್ಕಾರ ಪರಿಹಾರ ನೀಡಲಿದೆ: ಸಿದ್ದರಾಮಯ್ಯ

ಮಹಾ ಕುಂಭಮೇಳದಲ್ಲಿ ನಡೆದ ಕಾಲ್ತುಳಿತ ದುರಂತದಲ್ಲಿ ಮಡಿದವರಿಗೆ ಸರ್ಕಾರ ಪರಿಹಾರ ನೀಡಲಿದೆ: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jan 30, 2025 | 1:44 PM

Share

ಮಹಾಕುಂಭ ಮೇಳದಲ್ಲಿ ಕಾಲ್ತುಳಿತದ ಘಟನೆಯ ನಂತರ ಮಡಿದವರ ಹೊರತಾಗಿ ಇನ್ನೂ ಎಂಟು ಜನ ಕಾಣೆಯಾಗಿರುವ ಸುದ್ದಿಯಿದೆ. ಅವರ ಶೋಧಕ್ಕಾಗಿ ಮತ್ತು ಸುರಕ್ಷಿತವಾಗಿ ವಾಪಸ್ಸು ಕರೆತರಲು ಸರ್ಕಾರ ಏನಾದರೂ ಕ್ರಮ ಕೈಗೊಂಡಿದೆಯೇ ಎಂದು ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ಕಾಣೆಯಾದವರ ಬಗ್ಗೆ ಸರ್ಕಾರಕ್ಕೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದರು.

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್​ರಾಜ್​ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಮಡಿದಿರುವ ನಾಲ್ವರು ಕನ್ನಡಿಗರಿಗೆ ಕರ್ನಾಟಕ ಸರ್ಕಾರ ಸೂಕ್ತ ಪರಿಹಾರ ನೀಡಲಿದೆಯೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಕೆಪಿಸಿಸಿ ಕಚೇರಿಯ ಬಳಿ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತಾಡಿದ ಅವರು ಪಾರ್ಥೀವ ಶರೀರಗಳನ್ನು ಬೆಳಗಾವಿಗೆ ತರಲು ಏರ್ ಅಂಬ್ಯುಲೆನ್ಸ್ ವ್ಯವಸ್ಥೆ ಮಾಡಲಾಗಿದೆ, ಬೆಳಗಾವಿ ಜಿಲ್ಲಾಧಿಕಾರಿ ದೇಹಗಳನ್ನು ರಿಸೀವ್ ಮಾಡಿಕೊಳ್ಳುತ್ತಾರೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಇವತ್ತು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದರಿಂದ ನಾಳೆ ವಾಪಸ್ಸು ಹೋದ ಬಳಿಕ ಪರಿಹಾರ ಘೋಷಣೆ ಮಾಡಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಹಾಕುಂಭ ಕಾಲ್ತುಳಿತ: ಪ್ರಯಾಗ್​ರಾಜ್​ಗೆ ಬರುತ್ತಿದ್ದ ರೈಲುಗಳ ಮಾರ್ಗ ಬದಲಾವಣೆ, ವಿಶೇಷ ರೈಲುಗಳು ರದ್ದು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.