ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗಿಫ್ಟ್: ವರಮಹಾಲಕ್ಷ್ಮೀ ಹಬ್ಬಕ್ಕೆ ದೇವಸ್ಥಾನಗಳಲ್ಲಿ ಅರಿಶಿನ, ಕುಂಕುಮ ನೀಡಲು ಸೂಚನೆ

| Updated By: ಗಂಗಾಧರ​ ಬ. ಸಾಬೋಜಿ

Updated on: Aug 21, 2023 | 10:16 PM

ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಫ್ಟ್ ನೀಡಲು ಮುಂದಾಗಿದೆ. ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬದಂದು ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಅರಿಶಿನ ಮತ್ತು ಕುಂಕುಮ ನೀಡಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ.

ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಗಿಫ್ಟ್: ವರಮಹಾಲಕ್ಷ್ಮೀ ಹಬ್ಬಕ್ಕೆ ದೇವಸ್ಥಾನಗಳಲ್ಲಿ ಅರಿಶಿನ, ಕುಂಕುಮ ನೀಡಲು ಸೂಚನೆ
ಪ್ರಾತಿನಿಧಿಕ ಚಿತ್ರ
Follow us on

ಬೆಂಗಳೂರು, ಆಗಸ್ಟ್​ 21: ಆಗಸ್ಟ್ 25ರಂದು ವರಮಹಾಲಕ್ಷ್ಮೀ ಹಬ್ಬ (Varamahalakshmi Vrata)
ಹಿನ್ನೆಲೆ ಧಾರ್ಮಿಕ ದತ್ತಿ ಇಲಾಖೆಯ  ವ್ಯಾಪ್ತಿಗೆ ಒಳಪಡುವ ದೇವಸ್ಥಾನಗಳಿಗೆ ಬರುವ ಮಹಿಳೆಯರಿಗೆ ಅರಿಶಿನ ಮತ್ತು ಕುಂಕುಮ ನೀಡಲಾಗುವುದು ಎಂದು ಧಾರ್ಮಿಕ ದತ್ತಿ ಇಲಾಖೆ ಸುತ್ತೋಲೆ ಹೊರಡಿಸಿದೆ. ಆ ಮೂಲಕ ಸಿಎಂ ಸಿದ್ಧರಾಮಯ್ಯ ನೇತೃತ್ವದ ಸರ್ಕಾರ ವರಮಹಾಲಕ್ಷ್ಮಿ ಹಬ್ಬಕ್ಕೆ ಮಹಿಳೆಯರಿಗೆ ಗಿಫ್ಟ್ ನೀಡಲು ಮುಂದಾಗಿದೆ. ನಾಡಿನ ಸಮಸ್ತ ಮಹಿಳೆಯರನ್ನು ಗೌರವಿಸುವ ಸಲುವಾಗಿ ಹಾಗೂ ಶ್ರೀ ವರ ಮಹಾಲಕ್ಷ್ಮೀ ಕೃಪಾಕಟಾಕ್ಷವು ಲಭಿಸಲೆಂದು ಈ ದಿನದಂದು ಅಧಿಸೂಚಿತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡುವಂತೆ ಆದೇಶಿಸಲಾಗಿದೆ.

ಪತಿ ವರ್ಷ ಶ್ರೀ ವರಮಹಾಲಕ್ಷ್ಮಿ ವ್ರತ ಇರಲಿದ್ದು, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲಿಯೂ ಸಹ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ಈ ದಿನ ಮಹಿಳೆಯರು ಬಹಳ ಭಕ್ತಿಭಾವಗಳಿಂದ ಮನೆಯಲ್ಲಿ ಶುದ್ಧಿಯಾಗಿ ವರ ಮಹಾಲಕ್ಷ್ಮಿ ಪೂಜೆ ಮಾಡಿ, ದೇವಾಲಯಗಳಿಗೆ ದೇವರ ದರ್ಶನಾರ್ಥಿಯಾಗಿ ಬಂದು ಅರಿಶಿನ, ಕುಂಕುಮ, ಹೂವು ಮುಂತಾದ ಪ್ರಸಾದಗಳನ್ನು ಸ್ವೀಕರಿಸುತ್ತಾರೆ.

ಇದನ್ನೂ ಓದಿ: ನಾಗರ ಪಂಚಮಿ; ಚಂದ್ರಯಾನ-3ರ ಯಶಸ್ಸಿಗಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ, ಕ್ಷೀರಾಭಿಷೇಕ

ಭಾರತೀಯ ಸಂಸ್ಕೃತಿಯಲ್ಲಿ ಸ್ತ್ರೀಯರಿಗೆ, ಹೆಣ್ಣಿಗೆ ಬಹಳ ಮಹತ್ವ ಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದೆ. ಅದರಂತೆ ಪ್ರತಿ ವರ್ಷದ ಶಾವಣ ಮಾಸದ ಶುಕ್ಲಪಕ್ಷದ ಪೌರ್ಣಮಿಯ ಮೊದಲ ಶುಕ್ರವಾರದಂದು ವರಮಹಾಲಕ್ಷ್ಮಿ ವ್ರತ ಆಚರಿಸುವುದು ಪುರಾಣೋಕ್ತವಾಗಿದ್ದು, ಆ ದಿನ ಶ್ರೀವರ ಮಹಾಲಕ್ಷ್ಮಿಯನ್ನು ವಿಶೇಷವಾಗಿ ಪೂಜಿಸಿ ಪ್ರಸಾದವನ್ನು ನೈವೇದ್ಯ ಮಾಡಿ ಪ್ರಸಾದವನ್ನು ಸ್ವೀಕರಿಸಿದಲ್ಲಿ ಸಕಲ ಸೌಭಾಗ್ಯಗಳೂ, ಐಶ್ವರ್ಯ, ಚತುರ್ವಿದ ಫಲಗಳೂ, ಧನ ಧಾನ್ಯಾಧಿಗಳೂ ಲಭಿಸುತ್ತವೆ.

ಇದನ್ನೂ ಓದಿ: ಗೃಹಲಕ್ಷ್ಮೀ ಕಾರ್ಯಕ್ರಮ ಬೆಳಗಾವಿಯಿಂದ ಮೈಸೂರಿಗೆ ಶಿಫ್ಟ್​ ಆಗಿರುವುದರ ಹಿಂದೆ ರಾಜಕೀಯ ಷಡ್ಯಂತ್ರದ ಮಾತು

ಕಳೆದ ವರ್ಷದಲ್ಲಿ ಆಚರಿಸಿದಂತೆ ಆಗಸ್ಟ್​ 25, 2023ರ ಶುಕ್ರವಾರದಂದು ಬರುವ ವರ ಮಹಾಲಕ್ಷ್ಮೀ ವ್ರತದ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಆಯಾಯ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದೆ ಇಟ್ಟು ಪೂಜಿಸಿ, ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡುವುದು ಹಾಗೂ ಅದರ ವೆಚ್ಚವನ್ನು ಆಯಾಯ ದೇವಸ್ಥಾನದ ನಿಧಿಯಿಂದ ನಿಯಮಾನುಸಾರ ಭರಿಸಲು ತಿಳಿಸಲಾಗಿದೆ.

ಪ್ರಸಾದ ರೂಪವಾದ ಅರಿಶಿಣ, ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ, ಲಕೋಟೆಯನ್ನು ತಯಾರಿಸಿಕೊಂಡು ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ನೀಡಲಾಗುತ್ತಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.