ನಿಮ್ಮ ನೆಚ್ಚಿನ ಧಾರಾವಾಹಿಗಳು ಶೀಘ್ರವೇ ಮತ್ತೆ ಮೂಡಿಬರಲಿವೆ

ಬೆಂಗಳೂರು: ನಿಮ್ಮ ನೆಚ್ಚಿನ ಸಿಲ್ಲಿ ಲಲ್ಲಿ, ಮಗಳು ಜಾನಕಿ, ಜೊತೆ ಜೊತೆಯಲಿ ಮುಂತಾದ ಧಾರಾವಾಹಿಗಳು ಎಂದಿನಂತೆ ಶೀಘ್ರವೇ ಕಿರುತೆರೆಯಲ್ಲಿ ಪ್ರಸಾರ ಮುಂದುವರಿಸಲಿವೆ. ಲಾಕ್​ಡೌನ್ ಎಫೆಕ್ಟ್​ನಿಂದ ಧಾರಾವಾಹಿಗಳು ಬರ್ತಿಲ್ಲ ಅಂತ ಬೇಜಾರಾಗಿದ್ದ ಗೃಹಣಿಯರಿಗೆ ಹಾಗೂ ಮನೆಯಲ್ಲಿರುವ ಕಿರುತೆರೆ ನಟರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಕಂದಾಯ ಸಚಿವ ಆರ್ ಅಶೋಕ್ ಧಾರಾವಾಹಿಗಳನ್ನು ಚಿತ್ರೀಕರಣ ಮಾಡಬಹುದು ಎಂದಿದ್ದಾರೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದ್ದಾರೆ. ಮನೆಯೊಳಗೆ ಮಾತ್ರ ಧಾರಾವಾಹಿಗಳ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ರಸ್ತೆಯಲ್ಲಿ, ಹೊರಗಡೆ ಚಿತ್ರೀಕರಣ ಮಾಡುವಂತಿಲ್ಲ. ಸಿನಿಮಾ, ರಿಯಾಲಿಟಿ ಶೋ […]

ನಿಮ್ಮ ನೆಚ್ಚಿನ ಧಾರಾವಾಹಿಗಳು ಶೀಘ್ರವೇ ಮತ್ತೆ ಮೂಡಿಬರಲಿವೆ
ಸಾಧು ಶ್ರೀನಾಥ್​

Updated on: May 05, 2020 | 3:16 PM

ಬೆಂಗಳೂರು: ನಿಮ್ಮ ನೆಚ್ಚಿನ ಸಿಲ್ಲಿ ಲಲ್ಲಿ, ಮಗಳು ಜಾನಕಿ, ಜೊತೆ ಜೊತೆಯಲಿ ಮುಂತಾದ ಧಾರಾವಾಹಿಗಳು ಎಂದಿನಂತೆ ಶೀಘ್ರವೇ ಕಿರುತೆರೆಯಲ್ಲಿ ಪ್ರಸಾರ ಮುಂದುವರಿಸಲಿವೆ. ಲಾಕ್​ಡೌನ್ ಎಫೆಕ್ಟ್​ನಿಂದ ಧಾರಾವಾಹಿಗಳು ಬರ್ತಿಲ್ಲ ಅಂತ ಬೇಜಾರಾಗಿದ್ದ ಗೃಹಣಿಯರಿಗೆ ಹಾಗೂ ಮನೆಯಲ್ಲಿರುವ ಕಿರುತೆರೆ ನಟರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

ಕಂದಾಯ ಸಚಿವ ಆರ್ ಅಶೋಕ್ ಧಾರಾವಾಹಿಗಳನ್ನು ಚಿತ್ರೀಕರಣ ಮಾಡಬಹುದು ಎಂದಿದ್ದಾರೆ. ಆದರೆ ಕೆಲ ನಿರ್ಬಂಧಗಳನ್ನು ಹೇರಿದ್ದಾರೆ. ಮನೆಯೊಳಗೆ ಮಾತ್ರ ಧಾರಾವಾಹಿಗಳ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ರಸ್ತೆಯಲ್ಲಿ, ಹೊರಗಡೆ ಚಿತ್ರೀಕರಣ ಮಾಡುವಂತಿಲ್ಲ. ಸಿನಿಮಾ, ರಿಯಾಲಿಟಿ ಶೋ ಮಾಡುವಂತಿಲ್ಲ. ಚಿತ್ರೀಕರಣದ ವೇಳೆ ಕಡಿಮೆ ಸಂಖ್ಯೆಯಲ್ಲಿ ಜನರಿರಬೇಕು ಎಂದು ಆರ್ ಅಶೋಕ್ ತಿಳಿಸಿದ್ದಾರೆ.

ಇಂದು ಕಿರುತರೆ ಕಲಾವಿದರ ನಿಯೋಗ ಸಿಎಂ ಬಿಎಸ್ ಯಡಿಯೂರಪ್ಪರವರನ್ನು ಭೇಟಿಯಾಗಿ ಮನವಿ ಮಾಡಿತ್ತು, ಹಾಗಾಗಿ ಅವರ ಮನವಿಯನ್ನು ಪರಿಶೀಲಿಸಿ, ಸಿಎಂ ನೇತೃತ್ವದಲ್ಲಿ ಒಪ್ಪಿಗೆ ನೀಡಲಾಗಿದೆ. ರಿಯಾಲಿಟಿ ಶೋ ಸೇರಿದಂತೆ ಯಾವುದೇ ಸಿನಿಮಾ ಚಿತ್ರೀಕರಣಕ್ಕೆ ಸರ್ಕಾರ ಸದ್ಯಕ್ಕೆ ಅನುಮತಿ ನೀಡಿಲ್ಲ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us