AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಿಪೋರ್ಟ್‌ಗೆ ಕಾಯದೆ, ಆಸ್ಪತ್ರೆಗೆ ಬರುವ ರೋಗಿಗೆ ಚಿಕಿತ್ಸೆ ಮಾಡಲೇ ಬೇಕು’

ಬೆಂಗಳೂರು: ಇನ್ನುಮುಂದೆ ಕೊವಿಡ್ ರಿಪೋರ್ಟ್​ ಇಲ್ಲದಿದ್ದರೂ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಎಲ್ಲ ಆಸ್ಪತ್ರೆಗಳಿಗೆ ಮಹತ್ವದ ಆದೇಶ ಹೊರಡಿಸಿದೆ. ಈ ಹಿಂದೆ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಮಾಡಿಸಿ ಮನೆಗೆ ಕಳಿಸುತ್ತಿದ್ದರು. ಸ್ಯಾಂಪಲ್ ಸಂಗ್ರಹಿಸಿ ಮನೆಗೆ ಕಳಿಸ್ತಿದ್ದ ಬಗ್ಗೆ ಟಿವಿ9 ನಿರಂತರ ವರದಿ ಮಾಡುತ್ತಲೇ ಬಂದಿತ್ತು. ಈಗ ವರದಿ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೊವಿಡ್ ಲಕ್ಷಣಗಳಿದ್ದರೆ ತಕ್ಷಣ ದಾಖಲಿಸಿಕೊಳ್ಳಲು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಕೊರೊನಾ ಪೇಷಂಟ್ ಎಂದು ಭಾವಿಸಿ ಅವರಿಗೆ ಚಿಕಿತ್ಸೆ ನೀಡಬೇಕು. […]

'ರಿಪೋರ್ಟ್‌ಗೆ ಕಾಯದೆ, ಆಸ್ಪತ್ರೆಗೆ ಬರುವ ರೋಗಿಗೆ ಚಿಕಿತ್ಸೆ ಮಾಡಲೇ ಬೇಕು'
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
| Edited By: |

Updated on: Jul 14, 2020 | 2:16 PM

Share

ಬೆಂಗಳೂರು: ಇನ್ನುಮುಂದೆ ಕೊವಿಡ್ ರಿಪೋರ್ಟ್​ ಇಲ್ಲದಿದ್ದರೂ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರ ಎಲ್ಲ ಆಸ್ಪತ್ರೆಗಳಿಗೆ ಮಹತ್ವದ ಆದೇಶ ಹೊರಡಿಸಿದೆ.

ಈ ಹಿಂದೆ ಆಸ್ಪತ್ರೆಗಳು ಕೊರೊನಾ ಟೆಸ್ಟ್ ಮಾಡಿಸಿ ಮನೆಗೆ ಕಳಿಸುತ್ತಿದ್ದರು. ಸ್ಯಾಂಪಲ್ ಸಂಗ್ರಹಿಸಿ ಮನೆಗೆ ಕಳಿಸ್ತಿದ್ದ ಬಗ್ಗೆ ಟಿವಿ9 ನಿರಂತರ ವರದಿ ಮಾಡುತ್ತಲೇ ಬಂದಿತ್ತು. ಈಗ ವರದಿ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕೊವಿಡ್ ಲಕ್ಷಣಗಳಿದ್ದರೆ ತಕ್ಷಣ ದಾಖಲಿಸಿಕೊಳ್ಳಲು ಆಸ್ಪತ್ರೆಗಳಿಗೆ ಸೂಚನೆ ನೀಡಿದೆ. ಕೊರೊನಾ ಪೇಷಂಟ್ ಎಂದು ಭಾವಿಸಿ ಅವರಿಗೆ ಚಿಕಿತ್ಸೆ ನೀಡಬೇಕು. ಬಳಿಕ ಗಂಟಲು ದ್ರವ ಸಂಗ್ರಹಿಸಿ ಪಾಸಿಟಿವ್ ಬಂದರೆ ಸರ್ಕಾರ ನಿಗದಿಪಡಿಸಿದ ದರವನ್ನೇ ಫಿಕ್ಸ್ ಮಾಡಬೇಕು. ಬಿಯು ಕೋಡ್ ಜನರೇಟ್ ಆಗದಿದ್ರೂ ಚಿಕಿತ್ಸೆ ನೀಡಬೇಕು ಎಂದು ಸೂಚನೆ ನೀಡಿದೆ.

ಸಾರಿ ಕೇಸ್ ಅಥವಾ ಕೊರೊನಾ ಲಕ್ಷಣಗಳಿದ್ದ ವ್ಯಕ್ತಿ 108 ಸಹಾಯವಾಣಿಗೆ ಕರೆ ಮಾಡಿದರೆ ಆಸ್ಪತ್ರೆಗೆ ಶಿಫ್ಟ್ ಮಾಡಬೇಕು. ರೋಗಿ ಹೋದಕೂಡಲೇ ಆಸ್ಪತ್ರೆಯವರು ಚಿಕಿತ್ಸೆ ನೀಡಬೇಕು. ರಿಪೋರ್ಟ್‌ ಬರುವವರೆಗೂ ಕಾಯದೇ ಚಿಕಿತ್ಸೆ ಕೊಡಬೇಕು ಎಂದು ರಾಜ್ಯ ಸರ್ಕಾರದಿಂದ ಎಲ್ಲ ಆಸ್ಪತ್ರೆಗಳಿಗೆ ಆದೇಶ ನೀಡಿದೆ.

ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ