AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಾಟಾಳ್ ನಾಗರಾಜ್ ವಿರೋಧ

ವಿಧಾನಸೌಧದಲ್ಲಿ ಹೋರಾಟಗಾರ ವಾಟಾಳ್ ನಾಗರಾಜ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ರಾಜ್ಯಪಾಲರ ಬಗ್ಗೆ ಅಪಾರ ಗೌರವವಿದೆ, ಹಿಂದಿ ಭಾಷಣಕ್ಕೆ ವಿರೋಧವಿದೆ. ಶಾಸನಸಭೆಯಲ್ಲಿ ಸಚಿವರು, ಶಾಸಕರು, MLCಗಳು ವಿರೋಧಿಸಲಿಲ್ಲ. ಶಾಸಕರಿಗೆ, ಮಂತ್ರಿಗಳಿಗೆ ಕನ್ನಡ ಬೇಡ್ವಾ? ರಾಜ್ಯಪಾಲರು ಹಿಂದಿಯಲ್ಲೇ ಕನ್ನಡ ಅಭಿವೃದ್ಧಿ ಮಾಡುತ್ತೇವೆ ಅಂದರು. ರಾಜ್ಯದ ಶಾಸನ ಸಭೆಯ ಜಂಟಿ ಅಧಿವೇಶನದಲ್ಲಿ ಕನ್ನಡ ಮಾಯವಾಗಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನ: ರಾಜ್ಯಪಾಲರ ಹಿಂದಿ ಭಾಷಣಕ್ಕೆ ವಾಟಾಳ್ ನಾಗರಾಜ್ ವಿರೋಧ
ಹೋರಾಟಗಾರ ವಾಟಾಳ್ ನಾಗರಾಜ್
Anil Kalkere
| Edited By: |

Updated on:Feb 12, 2024 | 5:57 PM

Share

ಬೆಂಗಳೂರು, ಫೆಬ್ರವರಿ 12: ಕನ್ನಡ ಉಳಿಸುವುದಕ್ಕೆ ಬಹಳ ಪ್ರಮುಖವಾದಂತಹ ರಾಜ್ಯದ ಶಾಸನ ಸಭೆಯ ಜಂಟಿ ಅಧಿವೇಶನದಲ್ಲಿ ಕನ್ನಡ ಮಾಯವಾಗಿದೆ. ಹಿಂದಿಯಲ್ಲಿ ಮಾತನಾಡಿರುವುದು ಖಂಡನೆ. ಶಾಸಕರಿಗೆ, ಮಂತ್ರಿಗಳಿಗೆ ಕನ್ನಡ ಬೇಡ್ವಾ ಎಂದು ಹೋರಾಟಗಾರ ವಾಟಾಳ್ ನಾಗರಾಜ್ (Vatal Nagaraj) ವಾಗ್ದಾಳಿ ಮಾಡಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇವತ್ತು ಕರ್ನಾಟಕ ರಾಜ್ಯದ ವಿಧಾನಮಂಡಲದ ಮೊದಲನೆ ದಿನ. ಇದನ್ನು ಉದ್ದೇಶಿಸಿ ರಾಜ್ಯಪಾಲರು ಹಿಂದೆಯಲ್ಲಿ ಭಾಷಣ ಮಾಡಿದ್ದಾರೆ. ರಾಜ್ಯಪಾಲರ ಬಗ್ಗೆ ನನಗೆ ಗೌರವವಿದೆ. ಆದರೆ ಅವರ ಹಿಂದಿ ಭಾಷಣದ ಬಗ್ಗೆ ವಿರೋಧವಿದೆ. ಶಾಸನ ಸಭೆಯಲ್ಲಿ ಒಬ್ಬ ಶಾಸಕರು, ಎಂಎಲ್​ಸಿ, ಮಂತ್ರಿಗಳು ವಿರೋಧ ಮಾಡಿಲ್ಲ. ರಾಜ್ಯಪಾಲರು ಹಿಂದೆಯಲ್ಲೆ ಕನ್ನಡ ಅಭಿವೃದ್ಧಿ ಮಾಡುತ್ತೇವೆ ಅಂತ ಮಾತಾನಾಡಿದ್ದರು. ನಮ್ಮ ಗೌರವಾನ್ವಿತ ಸದಸ್ಯರನ್ನ ಏನು ಅಂತ ಹೇಳಬೇಕೊ ಗೊತ್ತಿಲ್ಲ. ನಮ್ಮ ಶಾಸಕರು, ಎಂಎಲ್​ಸಿ, ಮಂತ್ರಿಗಳ ಬಗ್ಗೆ ಖಂಡನೆ ಮಾಡುತ್ತೇವೆ ಎಂದು ಹೇಳಿದ್ದಾರೆ.

1967ರ ಅಂದಿನ ರಾಜ್ಯಪಾಲರ ಇಂಗ್ಲೀಷ್ ಭಾಷಣಕ್ಕೆ ಒಪ್ಪಿರಲಿಲ್ಲ. ಜೆಹೆಚ್ ಪಟೇಲ್ ಸಿಎಂ ಆಗಿದ್ದಾಗ ಸಂಪೂರ್ಣ ಭಾಷಣ ವಿರೋಧ ಮಾಡಿದ್ದೆ. ಖುರ್ಷಿದ್ ಅಲಾಂಖಾನ್ ರಾಜ್ಯಪಾಲರ ಭಾಷಣ ಮಾಡುದಕ್ಕೆ ಆಗದೆ ಕನ್ನಡದಲ್ಲಿ ಭಾಷಣ ಮಾಡಬೇಕಂತ ಹಟ ಹಿಡಿದಾಗ ಸದನದಿಂದ ಹೊರ ಹೋದರು. ಇದು ಐತಿಹಾಸಿಕವಾದ ದಿನ.

ಹಿಂದಿಯಲ್ಲಿ ಮಾತನಾಡಿರುವುದು ಅನ್ಯಾಯ

ಇದು ಗಂಭೀರವಾದ ಪರಿಸ್ಥಿತಿ. ರಾಜ್ಯಕ್ಕೆ ಮಾಡಿದ ದ್ರೋಹ. ಬಿಡಿ ಜತ್ತಿ ಅವರ ಮಗ, ನಾನು ಮತ್ತು ಈಗಿನ ರಾಜ್ಯಪಾಲರು ಸೇರಿದ್ದಾಗ ಕನ್ನಡ ಪಂಡಿತರನ್ನ ನೇಮಿಸಿಕೊಂಡು ಕನ್ನಡ ಕಲಿಯಿರಿ ಅಂತ ರಾಜ್ಯಪಾಲರಿಗೆ ಸಭೆಯಲ್ಲಿ ಹೇಳಿದ್ದೆ. ಬಹಿರಂಗವಾಗಿ ಮಾತನಾಡಿದ್ದೆ ಸಂಪೂರ್ಣವಾಗಿ ಕನ್ನಡದ ಭೂಮಿಯಲ್ಲಿ ಕನ್ನಡದ ಜಂಟಿ ಅಧಿವೇಶನದಲ್ಲಿ ಹಿಂದಿಯಲ್ಲಿ ಮಾತನಾಡಿರುವುದು ಅನ್ಯಾಯ.

ಇದನ್ನೂ ಓದಿ: Karnataka Budget Session: ಇಡೀ ದೇಶಕ್ಕೆ ಕರ್ನಾಟಕದ ಗ್ಯಾರಂಟಿ ಮಾದರಿ; ಬಜೆಟ್​​ ಅಧಿವೇಶನದಲ್ಲಿ ರಾಜ್ಯಪಾಲ ಗೆಹ್ಲೋಟ್

ಫೆ. 24ರ ಒಳಗೆ ಎಲ್ಲೆಲ್ಲೂ ಕನ್ನಡ ನಾಮಫಲಕ ಹಾಕಬೇಕು ಅಂತಾರೆ. ಆದರೆ ಎಲ್ಲೂ ಹಾಕಿಲ್ಲ, ಮಾರ್ವಾಡಿಗರು, ತಮಿಳಿಗರು ತುಂಬಿ ತುಳುಕುತ್ತಿದ್ದಾರೆ. ಫೆ. 24ರ ಒಳಗೆ ಸಂಪೂರ್ಣ ಬದಲಾವಣೆ ಆಗದಿದ್ದರೆ ಸಂಪೂರ್ಣ ಬಂದ್ ಮಾಡುತ್ತೇವೆ. ಸದನದಲ್ಲಿ ಒಪ್ಪಿಗೆ ತಂದು ಜಾರಿಗೆ ಮಾಡಲೇಬೇಕು ಎಂದು ಹೇಳಿದ್ದಾರೆ.

ರಾಜ್ಯಪಾಲರ ಭಾಷಣದಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ: ಆರಗ ಜ್ಞಾನೇಂದ್ರ

ವಿಧಾನಸೌಧದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯಿಸಿದ್ದು, ರಾಜ್ಯಪಾಲರ ಬಾಯಿಂದ ಸರ್ಕಾರದ ಭಾಷಣ ಓದಿಸಿದ್ದಾರೆ. ಇದರಲ್ಲಿ ಉಪ್ಪು, ಹುಳಿ, ಖಾರ ಏನೂ ಇಲ್ಲ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪಿಲ್ಲ.

ಇದನ್ನೂ ಓದಿ: Karnataka Budget 2024: ಬಜೆಟ್​ ಅಧಿವೇಶನದಲ್ಲಿ ಜೈ ಶ್ರೀರಾಮ ಘೋಷಣೆ ಕೂಗಿದ ಬಿಜೆಪಿ, ಕಾಂಗ್ರೆಸ್​ ನಾಯಕರು

ರಾಜ್ಯದ ಜನರಿಗೆ ಗ್ಯಾರಂಟಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದಾರೆ. 8 ತಿಂಗಳಲ್ಲಿ‌ ಅಸಮರ್ಥರಾಗಿದ್ದಾರೆ, ಅಭಿವೃದ್ಧಿ ಕಾರ್ಯ ಮಾಡಿಲ್ಲ. 5-6 ತಿಂಗಳಿಂದ ವೃದ್ಧಾಪ್ಯ ವೇತನ, ವಿಧವಾ ವೇತನ ಬಿಡುಗಡೆ ಆಗಿಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:56 pm, Mon, 12 February 24

ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ