ಚಳಿಯೇ ಇರಲಿ, ಬಿಸಿಲೇ ಇರಲಿ ಮಿಂಚಿನಂತೆ ಸೈಕಲ್ ತುಳಿದ ಸೈಕ್ಲಿಸ್ಟ್​ಗಳು

ವಿಜಯಪುರ: ವಿದ್ಯಾರ್ಥಿಗಳಲ್ಲಿ ಹಾಗೂ ಯುವ ಜನರಲ್ಲಿ ಸೈಕ್ಲಿಂಗ್ ಜಾಗೃತಿ ಮೂಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪದವಿ ಪೂರ್ವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಗಳನ್ನು ಆಯೋಜನೆ ಮಾಡಿದೆ. ಸೈಕ್ಲಿಸ್ಟ್ ಗಳ ತವರೂರು ಎಂಬ ಗರಿಮೆಗೆ ಪಾತ್ರವಾದ ವಿಜಯಪುರ ಜಿಲ್ಲೆ ಸೈಕ್ಲಿಂಗ್​ಗೆ ಸಾಕ್ಷಿಯಾಗಿತ್ತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಸೈಕ್ಲಿಂಗ್ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು. ಮೈಕೊರೆಯೋ ಚಳಿಯೇ ಇರಲಿ. ಬಿರು ಬಿಸಿಲೇ ಇರಲಿ. ಯಾವುದೂ ಲೆಕ್ಕಕ್ಕಿಲ್ಲ. ಕಣ್ಮುಂದೆ ಕಾಣೋದು ಗುರಿ ಒಂದೆ. ಆ ಗುರಿ ಬೆನ್ನತ್ತಿರೋ […]

ಚಳಿಯೇ ಇರಲಿ, ಬಿಸಿಲೇ ಇರಲಿ ಮಿಂಚಿನಂತೆ ಸೈಕಲ್ ತುಳಿದ ಸೈಕ್ಲಿಸ್ಟ್​ಗಳು
ಸಾಧು ಶ್ರೀನಾಥ್​

Updated on: Nov 30, 2019 | 7:24 AM

ವಿಜಯಪುರ: ವಿದ್ಯಾರ್ಥಿಗಳಲ್ಲಿ ಹಾಗೂ ಯುವ ಜನರಲ್ಲಿ ಸೈಕ್ಲಿಂಗ್ ಜಾಗೃತಿ ಮೂಡಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ. ಪದವಿ ಪೂರ್ವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗಾಗಿ ರಾಜ್ಯ ಮಟ್ಟದ ಸೈಕ್ಲಿಂಗ್ ಸ್ಪರ್ಧೆಗಳನ್ನು ಆಯೋಜನೆ ಮಾಡಿದೆ. ಸೈಕ್ಲಿಸ್ಟ್ ಗಳ ತವರೂರು ಎಂಬ ಗರಿಮೆಗೆ ಪಾತ್ರವಾದ ವಿಜಯಪುರ ಜಿಲ್ಲೆ ಸೈಕ್ಲಿಂಗ್​ಗೆ ಸಾಕ್ಷಿಯಾಗಿತ್ತು. ವಿವಿಧ ಜಿಲ್ಲೆಗಳಿಂದ ಆಗಮಿಸಿದ ವಿದ್ಯಾರ್ಥಿಗಳು ಸೈಕ್ಲಿಂಗ್ ಸ್ಪರ್ಧೆಗಳಲ್ಲಿ ಭಾಗಿಯಾಗಿದ್ದರು.


ಮೈಕೊರೆಯೋ ಚಳಿಯೇ ಇರಲಿ. ಬಿರು ಬಿಸಿಲೇ ಇರಲಿ. ಯಾವುದೂ ಲೆಕ್ಕಕ್ಕಿಲ್ಲ. ಕಣ್ಮುಂದೆ ಕಾಣೋದು ಗುರಿ ಒಂದೆ. ಆ ಗುರಿ ಬೆನ್ನತ್ತಿರೋ ಸೈಕ್ಲಿಸ್ಟ್​ಗಳು ನಾ ಮುಂದು ತಾ ಮುಂದು ಅಂತಾ ಸೈಕಲ್ ತುಳಿಯುತ್ತಿದ್ದದ್ದು ನೋಡುಗರ ದಿಲ್ ಖುಷ್ ಆಗಿತ್ತು.

ಮಿಂಚಿನಂತೆ ಸೈಕಲ್ ತುಳಿದ ಸ್ಪರ್ಧಾಳುಗಳು:
ವಿಜಯಪುರ ತಾಲೂಕಿನ ಖತಿಜಾಪುರ ಬಳಿ ಸೈಕ್ಲಿಸ್ಟ್​ಗಳ ಅಬ್ಬರ ಜೋರಾಗಿತ್ತು. ಪದವಿ ಪೂರ್ವ ಸ್ಟೂಡೆಂಟ್ಸ್​ಗಾಗಿ ಸೈಕ್ಲಿಂಗ್ ಸ್ಪರ್ಧೆ ಆಯೋಜಿಸಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ನೇತೃತ್ವದಲ್ಲಿ ರಾಜ್ಯಮಟ್ಟದ ಸೈಕ್ಲಿಂಗ್ ಸ್ಪರ್ಧೆ ನಡೆಯಿತು. ವಿಜಯಪುರ, ಬಾಗಲಕೋಟೆ, ಬೆಳಗಾವಿ, ಬೆಂಗಳೂರು ಉತ್ತರ, ತುಮಕೂರು ಹಾಗೂ ಮೈಸೂರು ಜಿಲ್ಲೆಯ ಸೈಕ್ಲಿಸ್ಟ್​ಗಳು ಸ್ಪರ್ಧೆಯಲ್ಲಿ ಭಾಗಿಯಾಗಿದ್ದರು. ಟೈಮ್ ಟ್ರಯಲ್ ಹಾಗೂ ಮಾಸ್ ಸ್ಟಾರ್ಟ್ ಎಂಬ 2 ವಿಧಗಳಲ್ಲಿ ಸೈಕಲ್ ಸ್ಪರ್ಧೆಗಳು ನಡೆದ್ವು. ಈ ವೇಳೆ ಸ್ಪರ್ಧಾಳುಗಳು ಮಿಂಚಿನಂತೆ ಸೈಕಲ್ ತುಳಿದ್ರು.

ಯುವಜನತೆ ಮೊಬೈಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಆಸಕ್ತಿ ವಹಿಸುತ್ತಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳಲ್ಲಿ ಸೈಕ್ಲಿಂಗ್ ಅಭಿವೃದ್ಧಿ ಜೊತೆಗೆ ಕ್ರೀಡಾ ಆಸಕ್ತಿ ಬೆಳೆಸಲು ಇದೊಂದು ಉತ್ತಮ ವೇದಿಕೆಯಾಗಿತ್ತು. ವಿವಿಧ ವಿಭಾಗಗಳಲ್ಲಿ ಭಾಗವಹಿಸಿದ್ದ ಸೈಕ್ಲಿಸ್ಟ್​ಗಳು ಚಳಿಯಲ್ಲೂ ಸೈಕಲ್ ಸವಾರಿ ಮಾಡಿದ್ರು. ವಿನ್ನರ್ಸ್ ಪ್ರಶಸ್ತಿಗೆ ಮುತ್ತಿಕ್ಕಿ ಸಂತಸ ವ್ಯಕ್ತಪಡಿಸಿದ್ರು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us