Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ, 4,404 ಜನರಿಗೆ ಉದ್ಯೋಗ ಸೃಷ್ಟಿ

ಕರ್ನಾಟಕದಲ್ಲಿ ಹೊಸ ಸರ್ಕಾರ ರಚನೆಯಾದ ನಂತರ ಮೊದಲ ಬಾರಿ ನಡೆದ 140ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಸುಮಾರು 7,659.52 ಕೋಟಿ ಮೌಲ್ಯದ ಒಟ್ಟು 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಮಾನ್ಯ ಬೃಹತ್ ಮತ್ತು ಕೈಗಾರಿಕೆ, ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಸಭೆ ಇದಾಗಿದೆ.

ಕರ್ನಾಟಕದಲ್ಲಿ 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ, 4,404 ಜನರಿಗೆ ಉದ್ಯೋಗ ಸೃಷ್ಟಿ
ಸಚಿವ ಎಂಬಿ ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ಏಕಗವಾಕ್ಷಿ ಅನುಮೋದನಾ ಸಮಿತಿಯು 91 ಹೂಡಿಕೆ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಿತು
Follow us
TV9 Web
| Updated By: Rakesh Nayak Manchi

Updated on: Sep 16, 2023 | 12:36 PM

ಬೆಂಗಳೂರು, ಸೆಪ್ಟೆಂಬರ್ 16: ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆ (Investment) ಮತ್ತು ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿರುವ ರಾಜ್ಯ ಸರ್ಕಾರ, 91 ಯೋಜನೆಗಳ ಒಟ್ಟು 7,659.52 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ (State Level Single Window Approval Committee) ಅನುಮೋದನೆ ನೀಡಿದೆ.

ಬೆಂಗಳೂರಿನ ಕರ್ನಾಟಕ ಉದ್ಯೋಗಮಿತ್ರ ಕಛೇರಿಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ್ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ಏಕಗವಾಕ್ಷಿ ಸಮಿತಿಯ 140ನೇ ಸಭೆಯಲ್ಲಿ ಅನುಮೋದನೆ ನೀಡಲಾಯಿತು. ಈ ಯೋಜನೆಗಳಿಂದ ಸುಮಾರು 18,146 ಜನರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆಯೆಂದು ಸಚಿವ ಎಂ. ಬಿ. ಪಾಟೀಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅನುಮೋದನೆ ನೀಡಿರುವ ಪ್ರಸ್ತಾವನೆಗಳಲ್ಲಿ 50 ಕೋಟಿ ರೂಪಾಯಿಗೂ ಅಧಿಕ ಬಂಡವಾಳ ಹೂಡಿಕೆಯ 25 ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇವುಗಳಿಂದ 5,750.73 ಕೋಟಿ ರೂಪಾಯಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,742 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಸಚಿವರು ಹೇಳಿದರು.

ಇದನ್ನೂ ಓದಿ: ರಾಜ್ಯಕ್ಕೆ ಬರ, ಕೆಲವರಿಗೆ ಅದೇ ವರ; ರೈತರ ಆತ್ಮಹತ್ಯೆಗಳ ಬಗ್ಗೆ ಸರ್ಕಾರದ ವಿರುದ್ಧ ಹೆಚ್​ಡಿ ಕುಮಾರಸ್ವಾಮಿ ವಾಗ್ದಾಳಿ

15 ಕೋಟಿ ರೂಪಾಯಿಯಿಂದ 50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 57 ಹೊಸ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ 1,144.94 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. ಅಂದಾಜು 4,404 ಜನರಿಗೆ ಉದ್ಯೋಗ ಲಭ್ಯವಾಗಲಿದೆ. ಇದಲ್ಲದೇ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇದರಿಂದ ರೂಪಾಯಿ 763.85 ಬಂಡವಾಳ ಹೂಡಿಕೆಯಾಗಲಿದೆ ಎಂದರು.

ಸಭೆಯಲ್ಲಿ ಸರ್ಕಾರದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್ ಸೆಲ್ವಕುಮಾರ್, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಆಯುಕ್ತ ಶ್ರೀಮತಿ ಗುಂಜನ್ ಕೃಷ್ಣ, ಕಾರ್ಮಿಕ ಇಲಾಖೆ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್, ಕೆಐಎಡಿಬಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಂ.ಮಹೇಶ್, ಐಟಿಬಿಟಿ ಇಲಾಖೆಯ ನಿರ್ದೇಶಕ ಎಚ್.ವಿ.ದರ್ಶನ್ ಮತ್ತು ಕರ್ನಾಟಕ ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಇದ್ದರು.

ಅನುಮೋದನೆ ನೀಡಿರುವ ಪ್ರಮುಖ ಪ್ರಸ್ತಾವನೆಗಳು

1. ಸಂಸ್ಥೆ: ಪ್ರತಿಭಾ ಪಾಟಿಲ್ ಶುಗರ್ ಇಂಡಸ್ಟ್ರೀಸ್ ಪೈವೇಟ್ ಲಿಮಿಟೆಡ್

ಸ್ಥಳ: ಕಣ್ಣೂರ್ ಗ್ರಾಮ, ವಿಜಯಪುರ ತಾಲೂಕು, ವಿಜಯಪುರ ಜಿಲ್ಲೆ

ಹೂಡಿಕೆ: 489.50 ಕೋಟಿ ರೂ.

ಉದ್ಯೋಗ: 275

2. ಸಂಸ್ಥೆ: ಗುರುದೇವ್ ರಿಫೈನರಿಸ್ & ಅಲೈಡ್ ಇಂಡಸ್ಟ್ರೀಸ್

ಸ್ಥಳ: ತಡವಳಗ ಪೋಸ್ಟ್, ವಿಜಯಪುರ ಜಿಲ್ಲೆ

ಹೂಡಿಕೆ: 488.49 ಕೋಟಿ ರೂ.

ಉದ್ಯೋಗ: 255

3. ಸಂಸ್ಥೆ: ದೇವಶ್ರೀ ಇಸ್ಪಾತ್ ಪೈವೇಟ್ ಲಿಮಿಟೆಡ್

ಸ್ಥಳ: ಹಳವರ್ತಿ ಗ್ರಾಮ, ಕೊಪ್ಪಳ ಜಿಲ್ಲೆ

ಹೂಡಿಕೆ: 470 ಕೋಟಿ ರೂ.

ಉದ್ಯೋಗ: 800

4. ಸಂಸ್ಥೆ: ಏಕಸ್ ಕನ್ಸೂಮರ್ ಪ್ರಾಡಕ್ಟಸ್ ಪೈವೇಟ್ ಲಿಮಿಟೆಡ್

ಸ್ಥಳ: ಇತ್ತಿಗಟ್ಟಿ ಗ್ರಾಮ, ಧಾರವಾಡ ಜಿಲ್ಲೆ

ಹೂಡಿಕೆ: 456 ಕೋಟಿ ರೂ.

ಉದ್ಯೋಗ: 1,187

5. ಸಂಸ್ಥೆ: ಇಂಟಿಗ್ರೇಟೆಡ್ ಸೋಲಾರ್ ಪವರ್ ಪೈವೇಟ್ ಲಿಮಿಟೆಡ್

ಸ್ಥಳ: ಮಿಂಡಹಳ್ಳಿ ಗ್ರಾಮ, ಕೋಲಾರ ಜಿಲ್ಲೆ

ಹೂಡಿಕೆ: 441.08 ಕೋಟಿ ರೂ.

ಉದ್ಯೋಗ: 720

6. ಸಂಸ್ಥೆ: ಸೌತ್ ವೆಸ್ಟ್ ಮೈನಿಂಗ್ ಲಿಮಿಟೆಡ್

ಸ್ಥಳ: ಮೂಸಿನಾಯಕನ ಹಳ್ಳಿ ಗ್ರಾಮ, ಬಳ್ಳಾರಿ ಜಿಲ್ಲೆ

ಹೂಡಿಕೆ: 411 ಕೋಟಿ ರೂ.

ಉದ್ಯೋಗ: 65

7. ಸಂಸ್ಥೆ: ಶಶಿ ಅಲೊಯ್ಸ್ ಪೈವೇಟ್ ಲಿಮಿಟೆಡ್

ಸ್ಥಳ: ಭೈರನಾಯಕನಹಳ್ಳಿ ಗ್ರಾಮ, ಚಲ್ಲಕೆರೆ ತಾಲೂಕು, ಚಿತ್ರದುರ್ಗ

ಹೂಡಿಕೆ: 380 ಕೋಟಿ ರೂ.

ಉದ್ಯೋಗ: 400

8. ಸಂಸ್ಥೆ: ಎಸ್​​ಎಫ್ಎಸ್ ಗ್ರೂಪ್ ಇಂಡಿಯಾ ಪೈವೇಟ್ ಲಿಮಿಟೆಡ್

ಸ್ಥಳ: ಬೆಳಗಾವಿ ಜಿಲ್ಲೆ

ಹೂಡಿಕೆ: 250 ಕೋಟಿ ರೂ.

ಉದ್ಯೋಗ: 844

9. ಸಂಸ್ಥೆ: ಮೈಸೂರ್ ಪೆಟ್ರೋಕೆಮಿಕಲ್ಸ್ ಲಿಮಿಟೆಡ್

ಸ್ಥಳ: ರಾಯಚೂರು ಜಿಲ್ಲೆ

ಹೂಡಿಕೆ: 240 ಕೋಟಿ ರೂ.

ಉದ್ಯೋಗ: 157

10. ಸಂಸ್ಥೆ: ಲಾಮ್ ರಿಸರ್ಚ್ ಇಂಡಿಯಾ ಪೈವೇಟ್ ಲಿಮಿಟೆಡ್

ಸ್ಥಳ: ಬೆಂಗಳೂರು

ಹೂಡಿಕೆ: 235.91 ಕೋಟಿ ರೂ.

ಉದ್ಯೋಗ: 1,724

11. ಸಂಸ್ಥೆ: ಟಾಟ ಸೆಮಿಕಂಡೆಕ್ಟರ್ ಅಸೆಂಬ್ಲಿ ಅಂಡ್ ಟೆಸ್ಟ್ ಪೈವೇಟ್ ಲಿಮಿಟೆಡ್

ಸ್ಥಳ: ಕೊಲಾರ ಜಿಲ್ಲೆ

ಹೂಡಿಕೆ: 200 ಕೋಟಿ ರೂ.

ಉದ್ಯೋಗ: 155

12. ಸಂಸ್ಥೆ: ಮಾರುತಿ ಸುಜುಕಿ ಇಂಡಿಯಾ ಲಿಮಿಟೆಡ್

ಸ್ಥಳ: ಬೆಂಗಳೂರು ಗ್ರಾಮಾಂತರ ಜಿಲ್ಲೆ

ಹೂಡಿಕೆ: 137 ಕೋಟಿ ರೂ.

ಉದ್ಯೋಗ: 1908

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಹೊಸ ದಾಖಲೆ... ಕೇವಲ 26 ರನ್ ಬಾರಿಸಿ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದ ಧೋನಿ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಉತ್ಸವಗಳ ಸಂದರ್ಭ ಪಾನಕ ಹಾಗೂ ಮಜ್ಜಿಗೆ ನೀಡುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚರಿಸುವ ಈ ದಿನದ ಭವಿಷ್ಯ ಇಲ್ಲಿ ತಿಳಿಯಿರಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ಬಂಗಾಳದಲ್ಲಿ ವಕ್ಫ್ ವಿರೋಧಿ ಪ್ರತಿಭಟನೆ; ಪೊಲೀಸ್ ವಾಹನಗಳಿಗೆ ಬೆಂಕಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ದೇವರ ಮೊರೆ ಹೋದ ಸಿಎಸ್​ಕೆ ತಂಡ; ಗೈರಾದ ಧೋನಿ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಸನ್‌ರೈಸರ್ಸ್ ಹೈದರಾಬಾದ್ ತಂಡ ಉಳಿದುಕೊಂಡಿರುವ ಹೋಟೆಲ್‌ನಲ್ಲಿ ಬೆಂಕಿ ದುರಂತ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
ಶಾಸಕರು ಬಯಸಿದರೆ ಶಿವಕುಮಾರ್ ಸಿಎಂ ಆಗುವುದನ್ನು ಯಾರು ತಡೆದಾರು? ರಾಯರೆಡ್ಡಿ
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
‘ಬ್ಯಾಂಕ್ ಕೆಲಸವನ್ನು ಜನಾರ್ದನ್ ಬಿಡಬಾರದಿತ್ತು’: ಕಣ್ಣೀರು ಹಾಕಿದ ಉಮೇಶ್
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
ವಿಧಾನಸೌಧ ಮುಂದೆ ಹಾಕಿದ್ದ ಪೆಂಡಾಲ್​​​ಗಳ ಕೆಳಗೆ ಆಶ್ರಯ ಪಡೆದ ಜನ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ
14 ವರ್ಷದ ಬಳಿಕ ರಾಮಪಾಲ್ ಕಶ್ಯಪ್ ಚಪ್ಪಲಿ ಧರಿಸುವಂತೆ ಮಾಡಿದ ಪಿಎಂ ಮೋದಿ