AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ; ಜೆಡಿಎಸ್ ಕಾರ್ಯಕರ್ತರ ವಿರುದ್ಧ ಆರೋಪ

ಅರಿಸಿಕೆರೆ ಶಾಸಕ ಶಿವಲಿಂಗೇಗೌಡ ಅವರ ಬೆಂಬಲಿಗರು ಗಲಾಟೆ ‌ಮಾಡಿ ತೊಂದರೆ ಕೊಡುತ್ತಿದ್ದಾರೆ. ಈ ರೀತಿಯ ದಾಳಿ ನಡೆಸುವಂತೆ ಶಿವಲಿಂಗೇಗೌಡರು ಕುಮ್ಮಕ್ಕು ನೀಡಿದ್ದಾರೆ ಎಂದು ಶೇಖರಪ್ಪ ಪತ್ನಿ ಆರೋಪ ಮಾಡಿದ್ದಾರೆ.

ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ; ಜೆಡಿಎಸ್ ಕಾರ್ಯಕರ್ತರ ವಿರುದ್ಧ ಆರೋಪ
ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳಿಂದ ದಾಳಿ
Follow us
preethi shettigar
|

Updated on: Apr 12, 2021 | 10:01 AM

ಹಾಸನ: ಬಿಜೆಪಿ ಮುಖಂಡ ಶೇಖರಪ್ಪ ಮನೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ ಘಟನೆ ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಂಪುರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮನೆ ಮೇಲೆ ದಾಳಿ ಮಾಡಿರುವ ಗುಂಪು, ಮನೆಯ ಕಿಟಕಿ ಗಾಜು ಮತ್ತು ಕಾರಿನ ಗಾಜು ಪುಡಿ ಮಾಡಿ ಪರಾರಿಯಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತರೇ ಈ ರೀತಿಯ ದುಷ್ಕೃತ್ಯ ಎಸಗಿದ್ದಾರೆ ಎಂದು ಅವರ ವಿರುದ್ಧ ಆರೋಪ ಮಾಡಲಾಗಿದೆ.

ಅರಿಸಿಕೆರೆ ಶಾಸಕ ಶಿವಲಿಂಗೇಗೌಡ ಅವರ ಬೆಂಬಲಿಗರು ಗಲಾಟೆ ‌ಮಾಡಿ ತೊಂದರೆ ಕೊಡುತ್ತಿದ್ದಾರೆ. ಈ ರೀತಿಯ ದಾಳಿ ನಡೆಸುವಂತೆ ಶಿವಲಿಂಗೇಗೌಡರು ಕುಮ್ಮಕ್ಕು ನೀಡಿದ್ದಾರೆ ಎಂದು ಶೇಖರಪ್ಪ ಪತ್ನಿ ಆರೋಪ ಮಾಡಿದ್ದಾರೆ. ಇನ್ನು ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುರೇಶ್ ಮತ್ತು 20ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರ ವಿರುದ್ಧ ಆರೋಪ ಮಾಡಲಾಗಿದ್ದು, ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎನ್.ಆರ್.ಸಂತೋಷ್​ ಜತೆ ಗುರುತಿಸಿಕೊಂಡಿದ್ದ ಶೇಖರಪ್ಪ, ಇತ್ತೀಚೆಗೆ ಸಕ್ರಿಯವಾಗಿ ಬಿಜೆಪಿ ಸಂಘಟನೆಯಲ್ಲಿ ತೊಡಗಿಕೊಂಡಿದ್ದರು ಎಂಬ ಕಾರಣಕ್ಕೆ ಈ ರೀತಿಯ ದಾಳಿ ನಡೆದಿದೆ ಎಂದು ಆರೋಪಿಸಲಾಗಿದೆ. ಇನ್ನು ರಾಂಪುರ ಗ್ರಾಮ ಪಂಚಾಯತಿ ಅಧ್ಯಕ್ಷ ಸುರೇಶ್ ಕೂಡ​ ಪ್ರತಿ ದೂರು ನೀಡಿದ್ದು, ತಮ್ಮ ಮೇಲೆ ಹಲ್ಲೆ ಮಾಡಿ ವಾಹನ ಜಖಂ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ:

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಮೇಲೆ ದಾಳಿ; ಬಿಜೆಪಿ ಕೈವಾಡ ಎಂದ ಆಪ್​

ಗ್ರಾಮ ಪಂಚಾಯತಿ ಸದಸ್ಯೆ ಮನೆ ಮೇಲೆ ದಾಳಿ; ಮಣ್ಣು ತೆಗೆಯುವ ವಿಚಾರಕ್ಕೆ ಕಿಡಿಗೇಡಿಗಳಿಂದ ದಾಂದಲೆ

(Stone pelt by mischief on the house of BJP leader shekarappa in Hassan)

ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ರಕ್ತ ಸುರಿಯುತ್ತಿದ್ದರೂ ನೊಯ್ಡಾದ ರಸ್ತೆಯಲ್ಲಿ ಯುವಕನ ಥಳಿಸಿದ ವಿಡಿಯೋ ವೈರಲ್
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ
ಶೂಟೌಟ್​​ನಲ್ಲಿ ಬಚಾವ್​ ಆಗಿದ್ದೇಗೆ? ರಿಕ್ಕಿ ರೈ ಬಿಚ್ಚಿಟ್ಟ ಸ್ಫೋಟಕ ಸತ್ಯ