AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರಿಂದಲೇ ಕಲ್ಲು ತೂರಾಟ: ಸ್ವಾಮೀಜಿ ಗಂಭೀರ ಆರೋಪ

ಬೆಳಗಾವಿಯಲ್ಲಿ 2ಎ ಮೀಸಲಾತಿಗಾಗಿ ನಡೆದ ಪಂಚಮಸಾಲಿ ಸಮುದಾಯದ ಪ್ರತಿಭಟನೆ ವೇಳೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದು ಚರ್ಚೆಗೆ ಗ್ರಾಸವಾಗಿದೆ. ಬಸವ ಜಯಮೃತ್ಯುಂಜಯ ಸ್ವಾಮೀಜಿ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಮತ್ತು ರಾಜ್ಯ ಸರ್ಕಾರ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದಾರೆ. ಡಿಸೆಂಬರ್ 12 ರಂದು ರಾಜ್ಯಾದ್ಯಂತ ರಸ್ತೆ ತಡೆ ಹೋರಾಟ ನಡೆಸಲು ಕರೆ ನೀಡಿದ್ದಾರೆ.

ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರಿಂದಲೇ ಕಲ್ಲು ತೂರಾಟ: ಸ್ವಾಮೀಜಿ ಗಂಭೀರ ಆರೋಪ
ಪಂಚಮಸಾಲಿ ಪ್ರತಿಭಟನೆಯಲ್ಲಿ ಪೊಲೀಸರಿಂದಲೇ ಕಲ್ಲು ತೂರಾಟ: ಸ್ವಾಮೀಜಿ ಗಂಭೀರ ಆರೋಪ
ಸಹದೇವ್​ ಮಾನೆ
| Edited By: |

Updated on:Dec 11, 2024 | 6:54 PM

Share

ಬೆಳಗಾವಿ, ಡಿಸೆಂಬರ್​ 11: ನಿನ್ನೆ 2A ಮೀಸಲಾತಿಗಾಗಿ ಪಂಚಮಸಾಲಿ (panchamasali reservation) ಸಮುದಾಯ ನಡೆಸಿದ ಹೋರಾಟ ಹಿಂಸಾರೂಪಕ್ಕೆ ತಿರುಗಿತ್ತು. ಬೆಳಗಾವಿಯ ಸುವರ್ಣಸೌಧದ ಬಳಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಈ ವೇಳೆ ಹೋರಾಟಗಾರರ ಮೇಲೆ ಲಾಠಿಚಾರ್ಜ್ ಕೂಡ ಮಾಡಲಾಗಿತ್ತು. ನಮ್ಮವರ ಮೇಲೆ ಪೊಲೀಸರೇ ಕಲ್ಲುತೂರಾಟ ಮಾಡಿದ್ದಾರೆ ಎಂದು ಬಸವ ಜಯಮೃತ್ಯುಂಜಯ ಸ್ವಾಮೀಜಿ ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೊಲೀಸರೇ ಸಿವಿಲ್ ಡ್ರೆಸ್ ಧರಿಸಿ ಬಂದು ಹಲ್ಲೆ ಮಾಡಿದ್ದರು. ದ್ವೇಷದಿಂದ ಕಲ್ಲು ಹೊಡೆಯುವ ಕೆಲಸವನ್ನು ಮಾಡಿದ್ದಾರೆ. ಲಿಂಗಾಯತ ಸಮಾಜದ ಕೋಟ್ಯಂತರ ಜನ ಕಣ್ಣೀರಿಡುತ್ತಿದ್ದಾರೆ. ರಾಜ್ಯ ಸರ್ಕಾರ ಕೂಡಲೇ ಕ್ಷಮೆ ಕೇಳಬೇಕು. ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅವರನ್ನ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಹಿಂಸಾರೂಪಕ್ಕೆ ತಿರುಗಿದ ಪಂಚಮಸಾಲಿ ಹೋರಾಟ, ಲಾಠಿ ಚಾರ್ಜ್, ಕಲ್ಲು ತೂರಾಟ

ವಕೀಲರು, ಮಹಿಳಾ ಹೋರಾಟಗಾರರ ಮೇಲೂ ಹಲ್ಲೆಯಾಗಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಹೀಗಾಗಿದ್ದಕ್ಕೆ ಬಹಳ ನೋವಾಯ್ತು. ದೊಡ್ಡ ಲಿಂಗಾಯತ ಸಮುದಾಯದ ಮೇಲೆ ದೌರ್ಜನ್ಯವಾಗಿದೆ. ದೌರ್ಜನ್ಯ ಮಾಡಿದ್ರೂ 2ಎ ಮೀಸಲಾತಿ ನಿಮಗೆ ಕೊಡಲು ಆಗಲ್ಲ ಅಂತಾ ಸಿಎಂ ಹೇಳಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಸೆಂಬರ್ 12ರಂದು ರಸ್ತೆ ತಡೆದು ಹೋರಾಟ ಮಾಡಲು ಕರೆ

ಇನ್ನು ಡಿಸೆಂಬರ್ 12ರಂದು ರಸ್ತೆ ತಡೆದು ಹೋರಾಟ ಮಾಡುವಂತೆ ರಾಜ್ಯಾದ್ಯಂತ ಪಂಚಮಸಾಲಿಗರಿಗೆ ಜಯಮೃತ್ಯುಂಜಯಶ್ರೀ ಕರೆ ನೀಡಿದ್ದಾರೆ. ನಿಮ್ಮ ಊರಲ್ಲಿ ರಸ್ತೆ ತಡದು ಹೋರಾಟ ಮಾಡಿ. ನಾಳೆ ಹಿರೇಬಾಗೇವಾಡಿ ಟೋಲ್ ನಾಕಾ ಬಂದ್ ಮಾಡುತ್ತೇವೆ. ಯಾವುದೇ ಕಾರಣಕ್ಕೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿಚಾರ್ಜ್​: ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ

ಇನ್ಮುಂದೆ ಚೆನ್ನಮ್ಮನಂತೆ ಕ್ರಾಂತಿ ಹೋರಾಟ ಮಾಡುತ್ತೇವೆ. ಈವರೆಗೂ ಲಿಂಗಾಯತ ವಿರೋಧಿ ಮುಖ್ಯಮಂತ್ರಿ ಅಂತಿದ್ರು. ನಾವು ಹಾಗೆ ಅಂದುಕೊಂಡಿರಲಿಲ್ಲ ಆದ್ರೀಗ ಹಾಗೆ ಅನಿಸ್ತಿದೆ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ಲಿಂಗಾಯತ ವಿರೋಧಿ ಎಂದು ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:36 pm, Wed, 11 December 24

Follow Us
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
"ಕಳೆದ 2 ವರ್ಷಗಳಲ್ಲಿ 3000ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ"
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕಾವೇರಿ ಸಂಧಾನ ಸೂತ್ರಕ್ಕೆ‌ ದಿನಾಂಕ ಫಿಕ್ಸ್, ಆ.3ರಂದು ಸಿಎಂಗಳ ಸಭೆ ನಿಗದಿ
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಕೆ.ಆರ್.ಪೇಟೆ ಕಾಂಗ್ರೆಸ್ ಸಭೆಯಲ್ಲಿ ಕಾರ್ಯಕರ್ತರ ಹೈಡ್ರಾಮಾ!
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಪಶುವೈದ್ಯರ ನೇಮಕಾತಿಯಲ್ಲಿ ಅಕ್ರಮ ಪ್ರಕರಣ: CID ತನಿಖೆಗೆ ಆದೇಶ
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಮಳೆ ಅಭಾವ: ತುಮಕೂರಲ್ಲಿ ಸಂಪೂರ್ಣ ಬತ್ತಿದ 300ಕ್ಕೂ ಹೆಚ್ಚು ಕೆರೆಗಳು
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ