AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಬಿಜೆಪಿ ಮುಖಂಡ ಅರೆಸ್ಟ್

ಕಲಬುರಗಿಯಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣದ ನಂತರ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಾಟ ಮತ್ತು ಸಾರ್ವಜನಿಕ ಆಸ್ತಿ ಹಾನಿಯ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಗಿದೆ.

ಕಲಬುರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಬಿಜೆಪಿ ಮುಖಂಡ ಅರೆಸ್ಟ್
ಕಲಬುರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಬಿಜೆಪಿ ಮುಖಂಡ ಅರೆಸ್ಟ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 16, 2024 | 5:38 PM

Share

ಕಲಬುರಗಿ, ಡಿಸೆಂಬರ್​ 16: ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಂಜಾರ ಸಮಾಜದ 11 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಓರ್ವ ಶಿಕ್ಷಕ (teacher) ಅತ್ಯಾಚಾರ ಮಾಡಿದ್ದ ಘಟನೆ ನಡೆದಿತ್ತು. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅತ್ಯಾಚಾರ ಖಂಡಿಸಿ ಬಂಜಾರ ಸಮುದಾಯ ಬೀದಿಗಿಳಿದಿತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಕಂಡಕಂಡ ಕಡೆ ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನಲೆ ಬಿಜೆಪಿ‌ ಮುಖಂಡ ಮಣಿಕಂಠ ರಾಠೋಡ್​ರನ್ನು ಪೊಲೀಸರು ಬಂಧಿಸಿದ್ದಾರೆ.

ಬೇಲ್ ಪಡೆದಿದ್ದೇ ತಡ ಮತ್ತೆ ಅರೆಸ್ಟ್​

ಮಣಿಕಂಠ್ ರಾಠೋಡ್ ಚಿತ್ತಾಪುರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ. ಹೋರಾಟದ ವೇಳೆ ಸಾರ್ವಜನಿಕ ಆಸ್ತಿ ಹಾಳು ಹಿನ್ನಲೆ ಬ್ರಹ್ಮಪೂರ ಹಾಗೂ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಸದ್ಯ ಬ್ರಹ್ಮಪೂರ ಠಾಣೆಯಲ್ಲಿ ಮಣಿಕಂಠ್ ರಾಠೋಡ್ ಸ್ಟೇಷನ್ ಬೇಲ್ ಪಡೆದಿದ್ದು, ಸ್ಟೇಷನ್ ಬಜಾರ್ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ

ಅತ್ಯಾಚಾರ ಕೃತ್ಯ ಖಂಡಿಸಿ ಇತ್ತೀಚೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಸವಿತಾ ಸಮಾಜದ ಸವಿತಾನಂದ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬಂಜಾರ ಸಮಾಜ, ಹಿಂದೂಪರ ಸಂಘಟನೆಗಳು ಸೇರಿ ಸಾವಿರಾರು ಜನ ಬೃಹತ್ ಪ್ರತಿಭಟನೆ ಮಾಡಿದ್ದರು. ಅತ್ಯಾಚಾರ ಎಸಗಿರುವ ಶಿಕ್ಷಕ ಹಾಜಿಮಲಂಗ್ ನನ್ನ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದರು.

ಪ್ರತಿಭಟನೆ ವೇಳೆ ಕಲ್ಲುತೂರಾಟ 

ಇನ್ನು ನಗರದ ಬಂಜಾರ ಭವನದಿಂದ ಡಿಸಿ ಕಚೇರಿವರೆಗೆ ನಡೆದ ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಲ ಕಿಡಿಗೆಡಿಗಳು ಕಲ್ಲುತೂರಾಟ ಮಾಡಿದ್ದರು. ಘಟನೆಯಲ್ಲಿ ಇನ್ನೋವಾ ಕಾರ್, ಆಟೋ ಸೇರಿ ಮೂರ್ನಾಲ್ಕು ವಾಹನಗಳಿಗೆ ಹಾನಿ ಅಲ್ಲದೆ ಕೆಲ ಅಂಗಡಿಗಳ ಕಿಡಕಿ, ಗಾಜುಗಳು ಪುಡಿಪುಡಿಯಾಗಿದ್ದವು. ಕಲ್ಲು ತೂರಾಟದಲ್ಲಿ ಆಟೋ ಚಾಲಕನೋರ್ವನ ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದ. ಇದೇ ವೇಳೆ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ಮಾಡಿದ್ದರು. ಡಿಸಿ ಕಚೇರಿ ಎದುರು ಟೈರ್​​ಗೆ ಬೆಂಕಿ ಹಚ್ಚಿ ಪ್ರತಿಭಟನಾ ನಿರತರು ಆಕ್ರೋಶ ಹೊರಹಾಕಿದ್ದರು.

ಇದಕ್ಕೂ ಮುನ್ನ ಬಂಜಾರ ಭವನದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಪ್ರತಿಭಟನಾ ಸಮಾವೇಶ ಮಾಡಲಾಗಿದೆ. ಈ ವೇಳೆ ಮಾತನಾಡಿದ್ದ, ಮಾಶಾಳದ ಮರುಳಾನಂದ ಶಿವಾಚಾರ್ಯರು, ಇನ್ಮುಂದೆ ಮಲಗಿಕೊಳ್ಳಬೇಡಿ ಮಲಗಿಕೊಂಡರೆ, ಹಿಂದೂ ಧರ್ಮ ಸರ್ವನಾಶ ಆಗುತ್ತೆ. ನಮ್ಮ ದೇಶದ ಅನ್ನ ತಿಂದು ಬೇರೆ ದೇಶದ ಬಗ್ಗೆ ಹೊಗಳುವ ಕುನ್ನಿಗಳಿದ್ದಾರೆ. ನಾವು ಸನ್ಯಾಸಿಗಳು, ಎಲ್ಲಿ ಅನ್ಯಾಯ, ಅಧರ್ಮ ನಡೆಯುತ್ತೆ ಅದರ ವಿರುದ್ಧ ಹೋರಾಟ ಅಷ್ಟೇ ಅಲ್ಲ ನಾವು ಜೀವ ಕೊಡಲು ಸಿದ್ದರಿದ್ದೇವೆ. ಸನಾತನ ಧರ್ಮ ಅಂತಾ ಬಂದಾಗ ತೊಡೆತಟ್ಟಿ ನಿಲ್ಲಿ, ಇನ್ನುಮುಂದೆ ಹತ್ತು ಮಕ್ಕಳು ಹಡೆಯಬೇಕು ಅಂತಾ ಕರೆ ನೀಡಿದ್ದರು.

ಇದನ್ನೂ ಓದಿ: ಕಲಬುರಗಿ: ಪೆಟ್ರೋಲ್‌ ಬಾಂಬ್‌ ಹಾಕಿ ಇಡೀ ಕುಟುಂಬವನ್ನೇ ಸಾಮೂಹಿಕ ಹತ್ಯೆಗೆ ಯತ್ನ

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಲಬುರಗಿ ಪೊಲೀಸ್ ಆಯುಕ್ತ ಡಾ‌‌.ಶರಣಪ್ಪ,ಕಲ್ಲು ತೂರಾಟದ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದರು. ಸದ್ಯ ಅತ್ಯಾಚಾರ ವಿರುದ್ದದ ಹೋರಾಟ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಶಾಂತಿಯೂತವಾಗಿ ನಡೆಯಬೇಕಿದ್ದ ಪ್ರತಿಭಟನೆ ಕೆಲ ಕಿಡಗೇಡಿಗಳಿಂದ ಹಾದಿ ತಪ್ಪಿದ್ದು ನಿಜಕ್ಕೂ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ಮುಖಕ್ಕೆ ಮಾಸ್ಕ್, ಕೈಯಲ್ಲಿ ಕೋಲು: ದರೋಡೆಗೆ ಕಳ್ಳರ ಸಂಚು ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ತಮ್ಮ ಲವ್ ಸ್ಟೋರಿ ಬಿಚ್ಚಿಟ್ಟ ನಟ ಝೈದ್ ಖಾನ್: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಬಿಗ್​​ಬಾಸ್ ವಿನ್ನರ್ ಗಿಲ್ಲಿಗೆ ಸಿಎಂ ಕೇಳಿದ ಪ್ರಶ್ನೆಗಳೇನು: ವಿಡಿಯೋ ನೋಡಿ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಿಯಕರನ ಜೊತೆ ಮಗಳು ಓಡಿಹೋಗಿದ್ದಕ್ಕೆ ಕಿರುಕುಳ: ಪತ್ನಿಯಿಂದಲೇ ಪತಿ ಹತ್ಯೆ
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪ್ರಾಮಾಣಿಕತೆಗೆ ಫಲ:ಸರ್ಕಾರಕ್ಕೆ ನಿಧಿ ಕೊಟ್ಟ ರಿತ್ತಿ ಕುಟುಂಬಕ್ಕೆ ಸೈಟ್​!
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ಪೂರ್ತಿ ಭಾಷಣ ಓದದೇ ನಿರ್ಗಮಿಸಿದ ರಾಜ್ಯಪಾಲರು, ಮುಂದೇನು?
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಮುಸ್ಲಿಂ ಯುವತಿಯೊಂದಿಗೆ ಇದ್ದ ಹಿಂದೂ ಯುವಕರು ಮೇಲೆ ಹಲ್ಲೆ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಶಿವಮೊಗ್ಗ: ಗ್ರಾಮಸ್ಥನಿಗೆ ಅವಾಚ್ಯವಾಗಿ ನಿಂದಿಸಿದ ಕಾಂಗ್ರೆಸ್ ಕಾರ್ಯಕರ್ತ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ
ಬಿಕೆ ಹರಿಪ್ರಸಾದ್ ಬಟ್ಟೆ ಹರಿದರಾ ಬಿಜೆಪಿಗರು? ಅಸಲಿ ಸತ್ಯ ಈ ವಿಡಿಯೋದಲ್ಲಿದೆ