AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಬುರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಬಿಜೆಪಿ ಮುಖಂಡ ಅರೆಸ್ಟ್

ಕಲಬುರಗಿಯಲ್ಲಿ 11 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣದ ನಂತರ ನಡೆದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಕಲ್ಲು ತೂರಾಟ ಮತ್ತು ಸಾರ್ವಜನಿಕ ಆಸ್ತಿ ಹಾನಿಯ ಪ್ರಕರಣಗಳು ದಾಖಲಾಗಿವೆ. ಅತ್ಯಾಚಾರ ಎಸಗಿದ ಶಿಕ್ಷಕನಿಗೆ ಗಲ್ಲು ಶಿಕ್ಷೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ಮಾಡಲಾಗಿದೆ.

ಕಲಬುರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಬಿಜೆಪಿ ಮುಖಂಡ ಅರೆಸ್ಟ್
ಕಲಬುರಗಿಯಲ್ಲಿ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಬಿಜೆಪಿ ಮುಖಂಡ ಅರೆಸ್ಟ್
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on: Dec 16, 2024 | 5:38 PM

Share

ಕಲಬುರಗಿ, ಡಿಸೆಂಬರ್​ 16: ಜಿಲ್ಲೆಯ ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ಬಂಜಾರ ಸಮಾಜದ 11 ವರ್ಷದ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಓರ್ವ ಶಿಕ್ಷಕ (teacher) ಅತ್ಯಾಚಾರ ಮಾಡಿದ್ದ ಘಟನೆ ನಡೆದಿತ್ತು. ಈ ಪ್ರಕರಣ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅತ್ಯಾಚಾರ ಖಂಡಿಸಿ ಬಂಜಾರ ಸಮುದಾಯ ಬೀದಿಗಿಳಿದಿತ್ತು. ಈ ವೇಳೆ ಕೆಲ ಕಿಡಿಗೇಡಿಗಳು ಕಂಡಕಂಡ ಕಡೆ ಕಲ್ಲು ತೂರಾಟ ಮಾಡಿದ್ದರು. ಈ ಹಿನ್ನಲೆ ಬಿಜೆಪಿ‌ ಮುಖಂಡ ಮಣಿಕಂಠ ರಾಠೋಡ್​ರನ್ನು ಪೊಲೀಸರು ಬಂಧಿಸಿದ್ದಾರೆ.

ಬೇಲ್ ಪಡೆದಿದ್ದೇ ತಡ ಮತ್ತೆ ಅರೆಸ್ಟ್​

ಮಣಿಕಂಠ್ ರಾಠೋಡ್ ಚಿತ್ತಾಪುರ ಕ್ಷೇತ್ರದ ಬಿಜೆಪಿಯ ಪರಾಜಿತ ಅಭ್ಯರ್ಥಿ. ಹೋರಾಟದ ವೇಳೆ ಸಾರ್ವಜನಿಕ ಆಸ್ತಿ ಹಾಳು ಹಿನ್ನಲೆ ಬ್ರಹ್ಮಪೂರ ಹಾಗೂ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಸದ್ಯ ಬ್ರಹ್ಮಪೂರ ಠಾಣೆಯಲ್ಲಿ ಮಣಿಕಂಠ್ ರಾಠೋಡ್ ಸ್ಟೇಷನ್ ಬೇಲ್ ಪಡೆದಿದ್ದು, ಸ್ಟೇಷನ್ ಬಜಾರ್ ಪೊಲೀಸರು ಮತ್ತೆ ಬಂಧಿಸಿದ್ದಾರೆ.

ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಮುಖ್ಯ ಅಧೀಕ್ಷಕಿ ಕಾರು ಸ್ಫೋಟಿಸುವ ಬೆದರಿಕೆ

ಅತ್ಯಾಚಾರ ಕೃತ್ಯ ಖಂಡಿಸಿ ಇತ್ತೀಚೆಗೆ ಶ್ರೀರಾಮ ಸೇನೆ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಸವಿತಾ ಸಮಾಜದ ಸವಿತಾನಂದ ಸ್ವಾಮೀಜಿ ಹಾಗೂ ವಿವಿಧ ಮಠಾಧೀಶರ ನೇತೃತ್ವದಲ್ಲಿ ಬಂಜಾರ ಸಮಾಜ, ಹಿಂದೂಪರ ಸಂಘಟನೆಗಳು ಸೇರಿ ಸಾವಿರಾರು ಜನ ಬೃಹತ್ ಪ್ರತಿಭಟನೆ ಮಾಡಿದ್ದರು. ಅತ್ಯಾಚಾರ ಎಸಗಿರುವ ಶಿಕ್ಷಕ ಹಾಜಿಮಲಂಗ್ ನನ್ನ ಗಲ್ಲಿಗೇರಿಸಬೇಕೆಂದು ಆಗ್ರಹಿಸಿದ್ದರು.

ಪ್ರತಿಭಟನೆ ವೇಳೆ ಕಲ್ಲುತೂರಾಟ 

ಇನ್ನು ನಗರದ ಬಂಜಾರ ಭವನದಿಂದ ಡಿಸಿ ಕಚೇರಿವರೆಗೆ ನಡೆದ ಬೃಹತ್‌ ಪ್ರತಿಭಟನಾ ಮೆರವಣಿಗೆಯಲ್ಲಿ ಕೆಲ ಕಿಡಿಗೆಡಿಗಳು ಕಲ್ಲುತೂರಾಟ ಮಾಡಿದ್ದರು. ಘಟನೆಯಲ್ಲಿ ಇನ್ನೋವಾ ಕಾರ್, ಆಟೋ ಸೇರಿ ಮೂರ್ನಾಲ್ಕು ವಾಹನಗಳಿಗೆ ಹಾನಿ ಅಲ್ಲದೆ ಕೆಲ ಅಂಗಡಿಗಳ ಕಿಡಕಿ, ಗಾಜುಗಳು ಪುಡಿಪುಡಿಯಾಗಿದ್ದವು. ಕಲ್ಲು ತೂರಾಟದಲ್ಲಿ ಆಟೋ ಚಾಲಕನೋರ್ವನ ತಲೆಗೆ ಕಲ್ಲು ಬಿದ್ದು ಗಾಯಗೊಂಡಿದ್ದ. ಇದೇ ವೇಳೆ ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಕೂಡ ಮಾಡಿದ್ದರು. ಡಿಸಿ ಕಚೇರಿ ಎದುರು ಟೈರ್​​ಗೆ ಬೆಂಕಿ ಹಚ್ಚಿ ಪ್ರತಿಭಟನಾ ನಿರತರು ಆಕ್ರೋಶ ಹೊರಹಾಕಿದ್ದರು.

ಇದಕ್ಕೂ ಮುನ್ನ ಬಂಜಾರ ಭವನದಲ್ಲಿ ಮಠಾಧೀಶರ ಸಮ್ಮುಖದಲ್ಲಿ ಪ್ರತಿಭಟನಾ ಸಮಾವೇಶ ಮಾಡಲಾಗಿದೆ. ಈ ವೇಳೆ ಮಾತನಾಡಿದ್ದ, ಮಾಶಾಳದ ಮರುಳಾನಂದ ಶಿವಾಚಾರ್ಯರು, ಇನ್ಮುಂದೆ ಮಲಗಿಕೊಳ್ಳಬೇಡಿ ಮಲಗಿಕೊಂಡರೆ, ಹಿಂದೂ ಧರ್ಮ ಸರ್ವನಾಶ ಆಗುತ್ತೆ. ನಮ್ಮ ದೇಶದ ಅನ್ನ ತಿಂದು ಬೇರೆ ದೇಶದ ಬಗ್ಗೆ ಹೊಗಳುವ ಕುನ್ನಿಗಳಿದ್ದಾರೆ. ನಾವು ಸನ್ಯಾಸಿಗಳು, ಎಲ್ಲಿ ಅನ್ಯಾಯ, ಅಧರ್ಮ ನಡೆಯುತ್ತೆ ಅದರ ವಿರುದ್ಧ ಹೋರಾಟ ಅಷ್ಟೇ ಅಲ್ಲ ನಾವು ಜೀವ ಕೊಡಲು ಸಿದ್ದರಿದ್ದೇವೆ. ಸನಾತನ ಧರ್ಮ ಅಂತಾ ಬಂದಾಗ ತೊಡೆತಟ್ಟಿ ನಿಲ್ಲಿ, ಇನ್ನುಮುಂದೆ ಹತ್ತು ಮಕ್ಕಳು ಹಡೆಯಬೇಕು ಅಂತಾ ಕರೆ ನೀಡಿದ್ದರು.

ಇದನ್ನೂ ಓದಿ: ಕಲಬುರಗಿ: ಪೆಟ್ರೋಲ್‌ ಬಾಂಬ್‌ ಹಾಕಿ ಇಡೀ ಕುಟುಂಬವನ್ನೇ ಸಾಮೂಹಿಕ ಹತ್ಯೆಗೆ ಯತ್ನ

ಇನ್ನು ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಕಲಬುರಗಿ ಪೊಲೀಸ್ ಆಯುಕ್ತ ಡಾ‌‌.ಶರಣಪ್ಪ,ಕಲ್ಲು ತೂರಾಟದ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದರು. ಸದ್ಯ ಅತ್ಯಾಚಾರ ವಿರುದ್ದದ ಹೋರಾಟ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ಶಾಂತಿಯೂತವಾಗಿ ನಡೆಯಬೇಕಿದ್ದ ಪ್ರತಿಭಟನೆ ಕೆಲ ಕಿಡಗೇಡಿಗಳಿಂದ ಹಾದಿ ತಪ್ಪಿದ್ದು ನಿಜಕ್ಕೂ ದುರಂತವೇ ಸರಿ.

ಕರ್ನಾಟಕದ ಮತ್ತಷ್ಟು ಸುದ್ದಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್