AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vande Bharat Train: 2 ವಂದೇ ಭಾರತ್ ರೈಲುಗಳ ಮೇಲೆ 3 ಕಡೆ ಕಲ್ಲು ತೂರಾಟ​

ಬೆಂಗಳೂರು ವ್ಯಾಪ್ತಿಯಲ್ಲಿ ವಂದೇ ಭಾರತ್​ ರೈಲಿನ ಮೇಲೆ ಈ ವರ್ಷ 10 ಬಾರಿ ಕಲ್ಲು ತೂರಲಾಗಿದೆ. ರವಿವಾರದ ಎರಡು ಘಟನೆಗಳು ಸೇರಿದಂತೆ. ಇನ್ನು ಕಳೆದ ವರ್ಷ 40 ಇಂತಹ ಘಟನೆಗಳು ನಡೆದಿವೆ. ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ 59 ಮಂದಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Vande Bharat Train: 2 ವಂದೇ ಭಾರತ್ ರೈಲುಗಳ ಮೇಲೆ 3 ಕಡೆ ಕಲ್ಲು ತೂರಾಟ​
ವಂದೇ ಭಾರತ್​ ರೈಲಿನ ಮೇಲೆ ಕಲ್ಲು ತೂರಾಟ
ವಿವೇಕ ಬಿರಾದಾರ
|

Updated on: Mar 05, 2024 | 8:16 AM

Share

ಬೆಂಗಳೂರು, ಮಾರ್ಚ 05: ನೈಋತ್ಯ ರೈಲ್ವೆ ವಲಯದ (South Western Railway Zone) ಮೂಲಕ ಹಾದು ಹೋಗುವ ಎರಡು ವಂದೇ ಭಾರತ್​ ರೈಲುಗಳ (Vande Bharat Train) ಮೇಲೆ ಕರ್ನಾಟಕ (Karnataka) ಮತ್ತು ಆಂಧ್ರಪ್ರದೇಶ (Andhra Pradesh) ರಾಜ್ಯಗಳಲ್ಲಿ ಭಾನುವಾರ (ಮಾ.03) ರಂದು ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ (Stone Throwing) . ಘಟನೆಯಲ್ಲಿ ಯಾವುದೇ ಗಾಯಗಳು ಸಂಭವಿಸದಿದ್ದರೂ, ನಾಲ್ಕು ಕಿಟಕಿಗಳಿಗೆ ಹಾನಿಯಾಗಿದೆ. ಈ ಕಿಟಕಿಗಳನ್ನು ರಿಪೇರಿ ಅಥವಾ ಬದಲಾಯಿಸಲು ಒಂದು ಕಿಟಕಿಗೆ ಸುಮಾರು 22 ಸಾವಿರ ರೂ. ವೆಚ್ಚ ತಗಲುತ್ತದೆ.

ಕೆಎಸ್​ಆರ್​ ಬೆಂಗಳೂರು-ಧಾರವಾಡ (20661/20662) ಮಧ್ಯೆ ಸಂಚರಿಸುವ ವಂದೇ ಭಾರತ್​ ರೈಲಿನ ಮೇಲೆ ಎರಡು ಬಾರಿ ಮತ್ತು ಮೈಸೂರು-ಚೆನ್ನೈ ಸೆಂಟ್ರಲ್ ​​ವಂದೇ ಭಾರತ್​ (20608) ರೈಲಿನ ಮೇಲೆ ಕಲ್ಲು ತೂರಲಾಗಿದೆ. ಭಾನುವಾರ (ಮಾ.03) ರಂದು ಬೆಂಗಳೂರಿನಿಂದ ಧಾರವಾಡದ ಕಡೆ ಹೊರಟಿದ್ದ ವಂದೇ ಭಾರತ್​ ರೈಲಿನ ಮೇಲೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ಬೆಳಿಗ್ಗೆ 6:15ಕ್ಕೆ ಕಲ್ಲು ತೂರಲಾಗಿದೆ. ಇದೇ ರೈಲು ಧಾರವಾಡದಿಂದ ಬೆಂಗಳೂರಿಗೆ ಬರುವಾಗ ಮಾರ್ಗ ಮಧ್ಯೆ ಹಾವೇರಿ ಮತ್ತು ಹರಿಹರಿ ರೈಲು ನಿಲ್ದಾಣಗಳ ಮಧ್ಯೆ ಮಧ್ಯಾಹ್ನ 3:30ರ ಸುಮಾರಿಗೆ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ.

ಇನ್ನು ಮೈಸೂರು-ಚೆನ್ನೈ ಸೆಂಟ್ರಲ್​ ವಂದೇ ಭಾರತ್​​ ರೈಲು ಬೆಂಗಳೂರು ಮುಖಾಂತರ ಹಾದು ಚೈನ್ನೈ ತಲುಪುತ್ತದೆ. ಮಾರ್ಗ ಮಧ್ಯೆ ಆಂಧ್ರಪ್ರದೇಶದ ಕುಪ್ಪಂ ರೈಲು ನಿಲ್ದಾಣದ ಬಳಿ ಸಂಜೆ 4:30ರ ಸುಮಾರಿಗೆ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಎರಡು ಕಲ್ಲು ತೂರಾಟಗಳು ಬೆಂಗಳೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ಸಂಭವಿಸಿದರೇ (ಚಿಕ್ಕಬಾಣವಾರ ಮತ್ತು ಹಾವೇರಿ-ಹರಿಹರ) ಮೂರನೇ ಕಲ್ಲು ತೂರಾಟ ಮೈಸೂರು ರೈಲು ನಿಲ್ದಾಣ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ವ್ಯಾಪ್ತಿಯಲ್ಲಿ ವಂದೇ ಭಾರತ್​ ರೈಲಿನ ಮೇಲೆ ಈ ವರ್ಷ 10 ಬಾರಿ ಕಲ್ಲು ತೂರಲಾಗಿದೆ. ರವಿವಾರದ ಎರಡು ಘಟನೆಗಳು ಸೇರಿದಂತೆ. ಇನ್ನು ಕಳೆದ ವರ್ಷ 40 ಇಂತಹ ಘಟನೆಗಳು ನಡೆದಿವೆ. ಕಲ್ಲು ತೂರಾಟ ನಡೆಸಿದ ಪ್ರಕರಣದಲ್ಲಿ 59 ಮಂದಿಯನ್ನು ಬಂಧಿಸಲಾಗಿದೆ ಎಂದು ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನೂ ಓದಿ: Railway Budget 2024: ವಂದೇ ಭಾರತ್​​ ಗುಣಮಟ್ಟಕ್ಕೆ 40 ಸಾವಿರ ಕೋಚ್​ಗಳ ಪರಿವರ್ತನೆ, ಬಜೆಟ್​ನಲ್ಲಿ ಘೋಷಣೆ

ಪದೆ ಪದೇ ಕಲ್ಲು ತೂರಾಟ ಸಂಭವಿಸುತ್ತಿರುವುದಕ್ಕೆ ಹಿರಿಯ ಆರ್​ಪಿಎಫ್​​ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಮತ್ತು ಆರೋಪಿಗಳನ್ನು ಬಂಧಿಸುವುದು ಪ್ರಯಾಸದ ಕೆಲಸವಾಗಿದೆ ಎಂದು ಹೇಳಿದರು.

ಕೆಲವು ಸಂದರ್ಭದಲ್ಲಿ ಇಂತಹ ಕೆಲಸವನ್ನು ಮಕ್ಕಳು, ಮದ್ಯವ್ಯಸನಿಗಳು ಮತ್ತು ಮಾದಕ ವ್ಯಸನಿಗಳು ಎಸಗಿರುತ್ತಾರೆ. ರೈಲಿನ ಒಳ ಮತ್ತು ಹೊರಗಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿದ್ದು, ಆರೋಪಿಗಳನ್ನು ಶೀಘ್ರದಲ್ಲೇ ಪತ್ತೆ ಹಚ್ಚುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ರೈಲು ಗಂಟೆ 100 ಕಿಮೀ ವೇಗದಲ್ಲಿ ಚಲಿಸುವುದರಿಂದ ಸಿಸಿ ಕ್ಯಾಮೆರಾದ ದೃಶ್ಯಗಳನ್ನು ಆಧರಿಸಿ ಆರೋಪಿಗಳನ್ನು ಪತ್ತೆ ಹಚ್ಚಲು ಸ್ವಲ್ಪ ಕಷ್ಟವಾಗುತ್ತದೆ ಎಂದರು.

ಸೆಕ್ಷನ್ 147 (ರೈಲ್ವೆ ಹಳಿಯಲ್ಲಿ ಅತಿಕ್ರಮಣ) ಮತ್ತು ಸೆಕ್ಷನ್ 153 (ಉದ್ದೇಶಪೂರ್ವಕ ಕ್ರಿಯೆ ಅಥವಾ ಲೋಪದಿಂದ ರೈಲ್ವೆಯಲ್ಲಿ ಪ್ರಯಾಣಿಸುವ ವ್ಯಕ್ತಿಗಳ ಸುರಕ್ಷತೆಗೆ ಅಪಾಯವನ್ನುಂಟುಮಾಡುವುದು) ಅಡಿಯಲ್ಲಿ ಪ್ರಕರಣಗಳನ್ನು ದಾಖಲಾಗುತ್ತದೆ. ರೈಲುಗಳ ಮೇಲೆ ಕಲ್ಲು ತೂರಾಟವು ಕ್ರಿಮಿನಲ್ ಅಪರಾಧವಾಗಿದ್ದು, ರೈಲ್ವೇ ಕಾಯಿದೆಯ ಸೆಕ್ಷನ್ 153 ರ ಅಡಿಯಲ್ಲಿ ಐದು ವರ್ಷಗಳವರೆಗೆ ಜೈಲು ಶಿಕ್ಷೆಯನ್ನು ವಿಧಿಸಬಹುದಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್