AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮಲ ಹೊರುವ ಪದ್ಧತಿ; ಹೈಕೋರ್ಟ್​ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು

ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮಲ ಹೊರುವ ಪದ್ಧತಿ ಇರುವುದರಿಂದ  ಹೈಕೋರ್ಟ್(High Court​)ನಿಂದ ಸ್ವಯಂಪ್ರೇರಿತ ಪಿಐಎಲ್(PIL) ದಾಖಲು ಮಾಡಲಾಗಿದೆ. ಬಡತನ ಮತ್ತು ಜಾತಿಯ ಕಾರಣಕ್ಕೆ ಅನಿಷ್ಟ ಪದ್ಧತಿ ಜೀವಂತವಿರುವುದು ಶೋಚನೀಯ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ರಿದ್ದ ಹೈಕೋರ್ಟ್ ಪೀಠ ಆಕ್ರೋಶ ವ್ಯಕ್ತಪಡಿಸಿದೆ.

ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮಲ ಹೊರುವ ಪದ್ಧತಿ; ಹೈಕೋರ್ಟ್​ನಿಂದ ಸ್ವಯಂಪ್ರೇರಿತ ಪಿಐಎಲ್ ದಾಖಲು
ಹೈಕೋರ್ಟ್​
Follow us
Ramesha M
| Updated By: ಕಿರಣ್ ಹನುಮಂತ್​ ಮಾದಾರ್

Updated on:Jan 03, 2024 | 6:57 PM

ಬೆಂಗಳೂರು, ಜ.03: ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಮಲ ಹೊರುವ ಪದ್ಧತಿ ಇರುವುದರಿಂದ  ಹೈಕೋರ್ಟ್(High Court​)ನಿಂದ ಸ್ವಯಂಪ್ರೇರಿತ ಪಿಐಎಲ್(PIL) ದಾಖಲು ಮಾಡಲಾಗಿದೆ. ಬಡತನ ಮತ್ತು ಜಾತಿಯ ಕಾರಣಕ್ಕೆ ಅನಿಷ್ಟ ಪದ್ಧತಿ ಜೀವಂತವಿರುವುದು ಶೋಚನೀಯ ಎಂದು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಹಾಗೂ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ರಿದ್ದ ಹೈಕೋರ್ಟ್ ಪೀಠ ಆಕ್ರೋಶ ವ್ಯಕ್ತಪಡಿಸಿದೆ. ಈ ವೇಳೆ ನ್ಯಾಯಮೂರ್ತಿ ವರಾಳೆ ಅವರು ‘ ಮಣ್ಣಿಗಾದರೂ ಮೌಲ್ಯವಿದೆ, ಮನುಷ್ಯರಿಗಿಲ್ಲ. ಹಣದಿಂದ ಮರ್ಯಾದೆ ಅಳೆಯದ ದಿನ‌ ಎಂದಾದರೂ ಬರಲಿ ಎಂಬ ಕವಿ ಸಾಯಿದ್ ಲೂಧಿಯಾನ್ವಿ ಕವಿತೆಯನ್ನು ಉಲ್ಲೇಖಿಸಿದ್ದಾರೆ.

ಎಲ್ಲ ಗ್ರಾಮಗಳಲ್ಲಿ ಸ್ವಚ್ಚ ಭಾರತ ಗೊತ್ತಿದೆ. ಆದರೆ, ಮಲ ಹೊರುವುದರ ನಿಷೇಧದ ಅರಿವಿಲ್ಲ. ಮಲದ ಗುಂಡಿ ಸ್ವಚ್ಚತೆಗೆ ಯಂತ್ರಗಳಿದ್ದರೂ ಮನುಷ್ಯರನ್ನು ಬಳಸುತ್ತಿರುವುದೇಕೆ. ಬಡತನದ ಕಾರಣಕ್ಕೆ ಪ್ರಾಣಿಯಂತಹ ಜೀವನ‌ ನಡೆಸಬೇಕೇ?, ಇದು ಮಾನವ ಸಮಾಜವೇ ನಾಚಿಕೆ ಪಡಬೇಕಾದ ವಿಚಾರವಾಗಿದೆ.

ಇದನ್ನೂ ಓದಿ:12 ವರ್ಷದ ಅಪ್ರಾಪ್ತ ಬಾಲಕಿಯ ಗರ್ಭಪಾತ ಮಾಡಲು ಅನುಮತಿ ನಿರಾಕರಿಸಿದ ಕೇರಳ ಹೈಕೋರ್ಟ್: ವರದಿ

ಇನ್ನು ಈ ಕುರಿತು ಜನವರಿ.8 ಕ್ಕೆ ಪಿಐಎಲ್ ವಿಚಾರಣೆ ನಡೆಸಲು ಹೈಕೋರ್ಟ್ ನಿರ್ಧಾರ ಮಾಡಿದೆ. ಜೊತೆಗೆ ಕೋರ್ಟ್​ಗೆ ಸಲಹೆ ನೀಡಲು ಅಮೈಕಸ್ ಕ್ಯೂರಿಯಾಗಿ ವಕೀಲ ಶ್ರೀಧರ್ ಪ್ರಭು ಎಂಬುವವರು ನೇಮಕ ಮಾಡಲಾಗಿದೆ. ಮಲ ಹೊರುವ ಪದ್ಧತಿಯನ್ನು ಕಾನೂನು ನಿಷೇಧಿಸಿದೆ. ಆದರೆ, ಜಾತಿ ತಾರತಮ್ಯ ಮತ್ತು ಬಡತನವು ಈ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದೆ. ನಮ್ಮ ಆರ್ಥಿಕತೆ ಬೆಳೆಯುತ್ತಿದೆ ಮತ್ತು ನಾವು ಅತಿ ದೊಡ್ಡ ಪ್ರಜಾಪ್ರಭುತ್ವವಾಗಿದ್ದೇವೆ. ಆದರೆ, ಇಲ್ಲಿ ಮಲ ಹೊರುವ ಪದ್ಧತಿ ಇನ್ನೂ ಜೀವಂತವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Wed, 3 January 24

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಬರವಣಿಗೆ ನನ್ನ ಶಕ್ತಿಯಾಗಿತ್ತು ಎನ್ನುತ್ತಾರೆ 425 ನೇ ರ‍್ಯಾಂಕ್ ಪಡೆದ ಮೇಘನಾ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಇಂದಿನಿಂದ ಹುಬ್ಬಳ್ಳಿಯಲ್ಲಿ ಆರಂಭವಾಗಿರುವ 2-ದಿನದ ಎಜುಕೇಶನ್ ಎಕ್ಸ್​ಪೋ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಅದರದ್ದೇ ಭಾಷೆಯಲ್ಲಿ ಉತ್ತರ ಕೊಡಬೇಕು: ಧ್ರುವ ಸರ್ಜಾ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್