AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡ ಧ್ವಜಸ್ತಂಭ ಸ್ಥಾಪಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರನ ಅಂಗಡಿಗೆ ಬೆಂಕಿ ಹಚ್ಚಿದರು..

ನಗರದ ಶಹಾಪುರದಲ್ಲಿ ತಡರಾತ್ರಿ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ್‌ಗೆ ಸೇರಿದ ಜನರಲ್ ಸ್ಟೋರ್, ಎಸ್‌ಟಿಡಿ ಬೂತ್‌ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ.

ಕನ್ನಡ ಧ್ವಜಸ್ತಂಭ ಸ್ಥಾಪಿಸಿದ್ದಕ್ಕೆ ಕನ್ನಡ ಪರ ಹೋರಾಟಗಾರನ ಅಂಗಡಿಗೆ ಬೆಂಕಿ ಹಚ್ಚಿದರು..
ಜನರಲ್ ಸ್ಟೋರ್, ಎಸ್‌ಟಿಡಿ ಬೂತ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​|

Updated on: Jan 01, 2021 | 12:08 PM

Share

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಎದುರು ಕನ್ನಡ ಧ್ವಜಸ್ತಂಭ ಸ್ಥಾಪನೆ ವಿಚಾರಕ್ಕೆ ಸಂಬಂಧಿಸಿದಂತೆ, ಕನ್ನಡ ಧ್ವಜಸ್ತಂಭ ಅಳವಡಿಸಿದ್ದ ಹೋರಾಟಗಾರನ ಅಂಗಡಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ.

ನಗರದ ಶಹಾಪುರದಲ್ಲಿ ತಡರಾತ್ರಿ 2.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ್‌ಗೆ ಸೇರಿದ ಜನರಲ್ ಸ್ಟೋರ್, ಎಸ್‌ಟಿಡಿ ಬೂತ್‌ಗೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಅಂಗಡಿ ಪಕ್ಕವೇ ಮನೆ ಇದ್ದಿದ್ದರಿಂದ ಬೆಂಕಿ ಹಚ್ಚಿದ್ದನ್ನು ಗಮನಿಸಿದ ಕುಟುಂಬಸ್ಥರು ತಕ್ಷಣವೇ ಸ್ಥಳೀಯರ ನೆರವು ಪಡೆದು ಬೆಂಕಿ‌ ನಂದಿಸಿದ್ದಾರೆ.

ಅಂಗಡಿ ಮಾಲೀಕ ಹಾಗೂ ಕನ್ನಡಪರ ಹೋರಾಟಗಾರ ಶ್ರೀನಿವಾಸ ತಾಳೂಕರ್‌ ಶಹಾಪುರ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರ ಭೇಟಿ ನೀಡಿ, ಸ್ಥಳದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿಗಳ ಪರಿಶೀಲನೆ ನಡೆಸಿದರು.

ಬೆಳಗಾವಿ ಮಹಾನಗರ ಪಾಲಿಕೆ‌ ಎದುರು ಧ್ವಜಸ್ತಂಭ ಸ್ಥಾಪಿಸುವಂತೆ ಕನ್ನಡ ಸಂಘಟನೆ ಕಾರ್ಯಕರ್ತರ ಪ್ರತಿಭಟನೆ