AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ಬೀದಿನಾಯಿಗಳ ಕಾಟ: ಟಿವಿ9 ಅಭಿಯಾನ ಬೆನ್ನಲ್ಲೇ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ

ಬೆಂಗಳೂರಿನ ಬೀದಿನಾಯಿಗಳ ಕಾಟದ ಬಗ್ಗೆ ನಿರಂತರ ವರದಿ ಮೂಲಕ ಜಾಗೃತಿ ಮೂಡಿಸಿದ್ರೂ ಅಲರ್ಟ್ ಆಗದ ಪಾಲಿಕೆ ಆಯುಕ್ತರಿಗೆ ಸ್ವತಃ ಬೀದಿನಾಯಿಗಳ ಅವತಾರದ ದರ್ಶನವಾಗಿದೆ. ಇದರ ಬೆನ್ನಲ್ಲೇ ಬಿಬಿಎಂಪಿ ಪಶುಪಾಲನಾ ವಿಭಾಗದ ಮೂಲಕ ಬೀದಿನಾಯಿ ಕಡಿತ ಪ್ರಕರಣಗಳ ನಿರ್ವಹಣೆಗೆ ಹೆಲ್ಪ್ ಲೈನ್ ಬಿಡುಗಡೆ ಮಾಡಲಾಗಿದೆ.

ಬೆಂಗಳೂರಿನ ಬೀದಿನಾಯಿಗಳ ಕಾಟ: ಟಿವಿ9 ಅಭಿಯಾನ ಬೆನ್ನಲ್ಲೇ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ
ಬೆಂಗಳೂರಿನ ಬೀದಿನಾಯಿಗಳ ಕಾಟ: ಟಿವಿ9 ಅಭಿಯಾನ ಬೆನ್ನಲ್ಲೇ ಸಹಾಯವಾಣಿ ಬಿಡುಗಡೆ ಮಾಡಿದ ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on: Sep 14, 2024 | 10:03 PM

Share

ಬೆಂಗಳೂರು, ಸೆಪ್ಟೆಂಬರ್​ 14: ರಾಜಧಾನಿಯ ಬೀದಿನಾಯಿಗಳ (stray dog) ಬಗ್ಗೆ ಅಭಿಯಾನ ನಡೆಸಿದ್ದ ಟಿವಿ9, ಬೀದಿನಾಯಿಗಳ ಕಾಟದ ಬಗ್ಗೆ ನಿರಂತರ ವರದಿ ಪ್ರಸಾರ ಮಾಡಿತ್ತು. ಬೀದಿನಾಯಿಗಳ ಬಗ್ಗೆ ಸೈಲೆಂಟ್ ಆಗಿದ್ದ ಪಾಲಿಕೆ ಆಯುಕ್ತರಿಗೆ ಇಂದು ಬೀದಿನಾಯಿಗಳ ರೋಷಾವೇಷದ ಪ್ರದರ್ಶನವಾಗಿದೆ. ಗುಂಡಿ ಮುಚ್ಚುವ ಕೆಲಸ ಪರಿಶೀಲನೆ ವೇಳೆ ಬೌಬೌ ಗ್ಯಾಂಗ್ ಕಂಡು ಹೌಹಾರಿದ ಮುಖ್ಯ ಆಯುಕ್ತರು, ಇದೀಗ ಬಿಬಿಎಂಪಿ ಪಶುಪಾಲನಾ ವಿಭಾಗದ ಮೂಲಕ ಬೀದಿನಾಯಿ ಕಡಿತ ಪ್ರಕರಣಗಳ ನಿರ್ವಹಣೆಗೆ ಹೆಲ್ಪ್ ಲೈನ್ ಬಿಡುಗಡೆ ಮಾಡಲಾಗಿದೆ.

ಜಾಲಹಳ್ಳಿಯಲ್ಲಿ ಬೀದಿನಾಯಿಗಳ ದಾಳಿಗೆ ವೃದ್ಧೆ ಸಾವನ್ನಪ್ಪಿದ ಬೆನ್ನಲ್ಲೆ ರಾಜ್ಯ ಬೀದಿನಾಯಿಗಳ ಬಗ್ಗೆ ಟಿವಿ9 ವಿಶೇಷ ಅಭಿಯಾನ ನಡೆಸಿತ್ತು. ರಾಜಧಾನಿಯ ಬೀದಿನಾಯಿಗಳ ಕಾಟದ ಬಗ್ಗೆ ನಿರಂತರ ವರದಿ ಮೂಲಕ ಜಾಗೃತಿ ಮೂಡಿಸಿದ್ರೂ ಅಲರ್ಟ್ ಆಗದ ಪಾಲಿಕೆ ಆಯುಕ್ತರಿಗೆ ಸ್ವತಃ ಬೀದಿನಾಯಿಗಳ ಅವತಾರದ ದರ್ಶನವಾಗಿದೆ.

ಇದನ್ನೂ ಓದಿ: ವೃದ್ಧೆಗೆ ಕಚ್ಚಿದ್ದ ಬೀದಿನಾಯಿಗಾಗಿ ಹುಡುಕಾಡಿ ಬಿಬಿಎಂಪಿ ಸುಸ್ತು! ಬರೋಬ್ಬರಿ 110ಕ್ಕೂ ಹೆಚ್ಚು ಬೀದಿನಾಯಿಗಳ ಪರಿಶೀಲನೆ

ಸಹಕಾರನಗರದಲ್ಲಿ ರೌಂಡ್ಸ್ ವೇಳೆ ಪಾಲಿಕೆ ಆಯುಕ್ತರಿಗೆ ಬೌಬೌ ಗ್ಯಾಂಗ್ ಎದುರಾಗಿದ್ದು, ನಾಯಿಗಳ ಕಾಟಕ್ಕೆ ಶಾಕ್ ಆದ ಆಯುಕ್ತರು ರಸ್ತೆಯಿಂದ ವಾಪಸ್ ಆದ್ರೂ, ಈ ವೇಳೆ ಬೀದಿನಾಯಿಗಳ ಕಂಟ್ರೋಲ್ ಬಗ್ಗೆ ಮಾತಾಡಿದ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸದ್ಯ ನಾಯಿಗಳನ್ನ ಬೇರೆಡೆ ಬಿಡಲು ಆಗುತ್ತಿಲ್ಲ. ಒಬಿಸಿ ಮೂಲಕ ಬರ್ತ್ ಕಂಟ್ರೋಲ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಹೆಲ್ಪ್ ಲೈನ್ ನಂಬರ್ ಬಿಡುಗಡೆ

ಇನ್ನು ಬೀದಿನಾಯಿಗಳ ರೋಷಾವೇಷವನ್ನ ಕಣ್ಣಾರೆ ಕಂಡ ಪಾಲಿಕೆ ಮುಖ್ಯ ಆಯುಕ್ತರು, ಇದೀಗ ಬಿಬಿಎಂಪಿಯ ಪಶುಪಾಲನ ಇಲಾಖೆ ಮೂಲಕ ಬೀದಿನಾಯಿಗಳ ಕಡಿತ ಹಾಗೂ ರೇಬಿಸ್​ಗೆ ಹೆಲ್ಪ್ ಲೈನ್ ನಂಬರ್ ಬಿಡುಗಡೆ ಮಾಡಿ ಪ್ರಕಟಣೆ ಹೊರಡಿಸಿದ್ದಾರೆ. 6364893322 ಹಾಗೂ 1533 ಸಹಾಯವಾಣಿ ಬಿಡುಗಡೆ ಮಾಡಿರೋ ಪಾಲಿಕೆ, ಇದರ ಜೊತೆಗೆ ಬಿಬಿಎಂಪಿ ವ್ಯಾಪ್ತಿಯ ಡಾಗ್ ಕೆನಲ್ ಹೆಚ್ಚಳಕ್ಕೂ ತಯಾರಿ ನಡೆಸಿದೆ. ಇನ್ನು ಸಂತಾನಹರಣ, ರೋಗ ನಿರೋಧಕ ಚುಚ್ಚುಮದ್ದು ನೀಡೋದನ್ನ ಕೂಡ ಹೆಚ್ಚಿಸಲು ಚಿಂತನೆ ನಡೆಸಿದ್ದು, ಟಿವಿ9 ವರದಿ ಬಳಿಕ ಪಾಲಿಕೆ ಅಲರ್ಟ್ ಆಗಿದೆ.

ಇದನ್ನೂ ಓದಿ: ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ BBMPಯಿಂದ 4 ವರ್ಷದಲ್ಲಿ 40 ಕೋಟಿ ರೂ. ಖರ್ಚು

ಸದ್ಯ ಬೀದಿನಾಯಿಗಳಿಂದ ಆಗುತ್ತಿದ್ದ ಸಮಸ್ಯೆ ಬಗ್ಗೆ ಎಷ್ಟೇ ದೂರು ಬಂದರೂ ಸೈಲೆಂಟ್ ಆಗಿದ್ದ ಬಿಬಿಎಂಪಿ, ಇದೀಗ ಟಿವಿ9 ಅಭಿಯಾನದ ಬಳಿಕ ಆ ಬಗ್ಗೆ ಗಮನ ನೀಡುವುದಕ್ಕೆ ಸಜ್ಜಾಗಿದೆ. ಸದ್ಯ ಎಲ್ಲಾ ವಲಯಗಳ ಎಬಿಸಿ ಸೆಂಟರ್ ದುರಸ್ಥಿಗೂ ಚಿಂತನೆ ನಡೆಸಿರುವ ಪಾಲಿಕೆ 2023-24ರ ಬಜೆಟ್​ನಲ್ಲಿ ಇದಕ್ಕಾಗಿ ಮೀಸಲಿಟ್ಟಿದ್ದ 1ಕೋಟಿ 77 ಲಕ್ಷದ 32 ಸಾವಿರ ರೂ. ಅನುದಾನ ಬಳಸಿಕೊಳ್ಳೋಕೆ ಸಜ್ಜಾಗಿದೆ. ಒಟ್ಟಿನಲ್ಲಿ ಬೀದಿನಾಯಿಗಳಿಂದ ಬೇಸತ್ತ ಬೆಂಗಳೂರಿನ ಜನರಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಇನ್ನಾದ್ರೂ ಬೆಂಗಳೂರಿನ ಬೀದಿಗಳಲ್ಲಿ ಬೀದಿನಾಯಿಗಳ ಕಾಟಕ್ಕೆ ಕಡಿವಾಣ ಬೀಳುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್