AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆರಿಗೆ ವಂಚನೆ, ಸೋರಿಕೆ, ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ‌ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದು, ತೆರಿಗೆ ವಂಚನೆ, ಸೋರಿಕೆ, ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.19.2ರಷ್ಟಿದೆ. ತೆರಿಗೆ ಸಂಗ್ರಹ ದರ ದೇಶದಲ್ಲೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ತೆರಿಗೆ ವಂಚನೆ, ಸೋರಿಕೆ, ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಅಧಿಕಾರಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ
Anil Kalkere
| Edited By: |

Updated on: Sep 14, 2023 | 3:10 PM

Share

ಬೆಂಗಳೂರು, ಸೆಪ್ಟೆಂಬರ್​​ 14: ತೆರಿಗೆ ವಂಚನೆ, ಸೋರಿಕೆ, ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸೂಚಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಸೇರಿ ಹಲವು ಇಲಾಖೆಗಳ ಜತೆ‌ ಸಭೆ ಸಿಎಂ ಸಿದ್ದರಾಮಯ್ಯ ಸಭೆ ಮಾಡಿದ್ದಾರೆ. ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.19.2ರಷ್ಟಿದೆ. ಹಾಗಾಗಿ ತೆರಿಗೆ ಸಂಗ್ರಹ ದರ ದೇಶದಲ್ಲೇ ಹೆಚ್ಚಾಗಿರುವುದಕ್ಕೆ ಸಿಎಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಾಸ್ತವಿಕ ಸಂಗತಿಗಳ ಮೇಲೆ ಗುರಿ ನಿಗದಿಯಾಗಿದೆ. ರಾಜ್ಯದಲ್ಲಿ ತೆರಿಗೆ ಸಂಗ್ರಹದ ಗುರಿ ದಾಟುವ ಪ್ರಯತ್ನಕ್ಕೆ ಸೂಚನೆ ನೀಡಿದ್ದಾರೆ.

ತೆರಿಗೆ ವಂಚನೆ ಪ್ರಕರಣ ಪತ್ತೆಗೆ ಸಿಎಂ ಸೂಚನೆ

ಮುಂದಿನ ಸಭೆ ವೇಳೆಗೆ ಪ್ರಗತಿಯ ವೇಗ ಹೆಚ್ಚಿಸಿ. ಇಷ್ಟಕ್ಕೆ ಸಮಾಧಾನಗೊಳ್ಳದೆ ತೆರಿಗೆ ವಂಚನೆ ಪ್ರಕರಣ ಪತ್ತೆ ಮಾಡುವಂತೆ ಸೂಚಿಸಿದ್ದಾರೆ. ಶೇ.24ರ ಬೆಳವಣಿಗೆಯ ಗುರಿ ಬಗ್ಗೆ ಪ್ರಸ್ತಾಪಿಸಿದ ಸಿಎಂ ಸಿದ್ದರಾಮಯ್ಯ, ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದು‌ ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಅನುಕೂಲವಾಗುತ್ತೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ಸೂಚಿಸಿದ್ದಾರೆ.

195 ತಾಲೂಕುಗಳು ಬರಪೀಡಿತ ಘೋಷಣೆ 

SDRF ಹಾಗೂ NDRF ನಿಯಮ ಪ್ರಕಾರ 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೇವೆ.  ಬರದ ಬಗ್ಗೆ ಎಲ್ಲಾ ರೀತಿಯ ಸರ್ವೆ ಮಾಡಿಸಿ ವರದಿ ಪಡೆದಿದ್ದೇವೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ. ಕೇಂದ್ರ ಸರ್ಕಾರಕ್ಕೆ ನಾವು ಬರೆದಿರುವ ಪತ್ರಕ್ಕೆ ಉತ್ತರ ಕೊಟ್ಟಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ದೆಹಲಿಯಿಂದ ಬೆಂಗಳೂರಿಗೆ ಯಡಿಯೂರಪ್ಪ ವಾಪಸ್: ಜೆಡಿಎಸ್​ನೊಂದಿಗೆ ಮೈತ್ರಿ ಬಗ್ಗೆ ಹೇಳಿದ್ದಿಷ್ಟು

ಕಾವೇರಿ ನೀರು ಹರಿಸಿರುವ ಹಿನ್ನೆಲೆಯಲ್ಲಿ ಬಿಜೆಪಿ ಪ್ರತಿಭಟನೆ ಮಾಡಲಿದೆ ಎಂಬ ಬಿಎಸ್ ಯಡಿಯೂರಪ್ಪ  ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಸರ್ವ ಪಕ್ಷ ಸಭೆ ಕರೆದು ಅವರಿಗೆ ವಾಸ್ತವಾಂಶ ವಿವರಿಸಿದ್ದೇವೆ. ಜಲ ಸಂಪನ್ಮೂಲ ಸಚಿವರು ದೆಹಲಿಗೆ ಹೋಗಿದ್ದಾರೆ. ಲೀಗಲ್ ಟೀಂ ಜೊತೆ ಚರ್ಚೆ ಮಾಡುತ್ತಾರೆ. ಅದರ ಮೇಲೆ ಸುಪ್ರೀಂಕೋರ್ಟ್​ಗೆ ಅರ್ಜಿ ಹಾಕುತ್ತೇವೆ ಎಂದು ತಿಳಿಸಿದರು.

ಸಚಿವ ಡಿ.ಸುಧಾಕರ್ ಬಂಧನಕ್ಕೆ ಒತ್ತಾಯ ವಿಚಾರವಾಗಿ ಮಾತನಾಡಿ, ಪೊಲೀಸರು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!