AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಮ ಉಲ್ಲಂಘಿಸಿ ತರಗತಿ ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಡಾ.ಕೆ.ಸುಧಾಕರ್ ಟ್ವೀಟ್

ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ. ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1-6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ […]

ನಿಯಮ ಉಲ್ಲಂಘಿಸಿ ತರಗತಿ ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು: ಡಾ.ಕೆ.ಸುಧಾಕರ್ ಟ್ವೀಟ್
ಡಾ.ಕೆ.ಸುಧಾಕರ್​
shruti hegde
|

Updated on: Mar 11, 2021 | 4:35 PM

Share

ಬೆಂಗಳೂರು: ಕೆಲ ಖಾಸಗಿ ಶಾಲೆಗಳು ಸರ್ಕಾರದ ಅನುಮತಿ ಇಲ್ಲದಿದ್ದರೂ 1 ರಿಂದ 6ನೇ ತರಗತಿಯ ಮಕ್ಕಳಿಗೆ ಶಾಲೆ ಪುನರಾರಂಭಿಸಿರುವುದರ ಬಗ್ಗೆ ದೂರು ಬಂದಿವೆ. ನಿಯಮ ಉಲ್ಲಂಘಿಸಿ ತರಗತಿಗಳನ್ನು ಪುನರಾರಂಭಿಸಿರುವ ಶಾಲೆಗಳ ವಿರುದ್ಧ ಪರವಾನಗಿ ರದ್ದು ಸೇರಿದಂತೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆರೋಗ್ಯ ಇಲಾಖೆಯ ಸಚಿವ ಡಾ.ಕೆ.ಸುಧಾಕರ್, ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಅವರಿಗೆ ಟ್ವೀಟ್​ ಮೂಲಕ ಮನವಿ ಮಾಡಿದ್ದಾರೆ.

60 ವರ್ಷ ಮೇಲ್ಪಟ್ಟವರು, 45 ವರ್ಷ ಮೇಲ್ಪಟ್ಟವರು, ಅಸ್ವಸ್ಥತೆ ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಿರಿ. ನಮ್ಮ ಮನೆಗಳಲ್ಲಿ, ಬಂಧು-ಬಳಗದಲ್ಲಿ, ಸ್ನೇಹಿತರಲ್ಲಿ, ನೆರೆಹೊರೆಗಳಲ್ಲಿ ಕೊರೊನಾ ಲಸಿಕೆ ಪಡೆಯಲು ಅರ್ಹ ವ್ಯಕ್ತಿಗಳಿದ್ದರೆ ಅವರಿಗೆ ಲಸಿಕೆ ಪಡೆಯುವಂತೆ ಅರಿವು ಮೂಡಿಸಿ ಎಂದು ಸಚಿವ ಡಾ.ಕೆ.ಸುಧಾಕರ್ ಟ್ವೀಟ್​ ಮಾಡಿದ್ದಾರೆ.

ನೆರೆಯ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 13,000ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದು ನನ್ನನ್ನು ಚಿಂತೆಗೀಡು ಮಾಡಿದೆ. ಇದನ್ನು ಎಚ್ಚರಿಕೆಯ ಗಂಟೆ ಎಂದು ಪರಿಗಣಿಸಿ, ಹಬ್ಬ-ಹರಿದಿನಗಳು, ಸಭೆ-ಸಮಾರಂಭಗಳು ಏನೇ ಇದ್ದರೂ ಮಾಸ್ಕ್ ಧರಿಸಿವುದರ ಜೊತೆಗೆ ಸಾಮಾಜಿಕ ಅಂತರವನ್ನು ತಪ್ಪದೇ ಪಾಲಿಸಬೇಕು. ಜನಸಂದಣಿಯಿಂದ ದೂರವಿರಬೇಕು ಎಂದು ಟ್ವೀಟ್​ ಮೂಲಕ ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ ವಾಶಿಮ್ ಜಿಲ್ಲೆಯಲ್ಲಿ ಒಂದೇ ಶಾಲೆಯ 229 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು; 8 ಸಾವಿರಕ್ಕೂ ಹೆಚ್ಚು ಪ್ರಕರಣಗಳು ಪತ್ತೆ

ಇದನ್ನೂ ಓದಿ: School Reopen: ಫೆ. 22ರಿಂದ 6-8 ತರಗತಿಗಳಿಗೆ ಪೂರ್ಣ ಶಾಲೆ ಆರಂಭ -ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ

ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ಶಿವಕುಮಾರ್ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಲಿದ್ದಾರೆ: ಸೋಮಣ್ಣ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ತೇಜಸ್ವಿ ಸೂರ್ಯ ಮನೆಗೆ ಹೊಸ ಅತಿಥಿ: ಹಾಡಿನ ಮೂಲಕ ಸ್ವಾಗತಿಸಿದ ಶಿವಶ್ರೀ
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್
ಮ್ಯಾಕ್ಸ್ ನಿರ್ದೇಶಕನ ಜೊತೆ ಸುದೀಪ್ ಮತ್ತೊಂದು ಸಿನಿಮಾ; ಸುದ್ದಿಗೋಷ್ಠಿ ಲೈವ್