AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಣಿಗಲ್​, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ: ಇಕ್ಕಟ್ಟಿಗೆ ಸಿಲುಕಿದ ಪರಮೇಶ್ವರ್

ಕುಣಿಗಲ್​, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ ವಿಚಾರವಾಗಿ ಇಂದು ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಕೆಡಿಪಿ ಮೀಟಿಂಗ್‌ ಮಾಡಲಾಗಿದೆ. ಮಾಗಡಿಗೆ ಹೇಮಾವತಿ ನೀರು ಹರಿಸುವುದಕ್ಕೆ ಸಭೆಯಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಕೃಷ್ಣಪ್ಪ, ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು, ಜ್ಯೋತಿ ಗಣೇಶ್ ಕುಣಿಗಲ್ ವಿರೋಧ ಮಾಡಿದ್ದಾರೆ.

ಕುಣಿಗಲ್​, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ: ಇಕ್ಕಟ್ಟಿಗೆ ಸಿಲುಕಿದ ಪರಮೇಶ್ವರ್
ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್
ಮಹೇಶ್ ಇ, ಭೂಮನಹಳ್ಳಿ
| Edited By: |

Updated on: Mar 04, 2024 | 3:48 PM

Share

ತುಮಕೂರು, ಮಾರ್ಚ್​ 4: ಕುಣಿಗಲ್​, ಮಾಗಡಿಗೆ ಹೇಮಾವತಿ ನೀರು ಹರಿಸಲು ತೀವ್ರ ವಿರೋಧ ವಿಚಾರವಾಗಿ ಇಂದು ತುಮಕೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ (G. Parameshwar) ನೇತೃತ್ವದಲ್ಲಿ ಕೆಡಿಪಿ ಮೀಟಿಂಗ್‌ ಮಾಡಲಾಗಿದೆ. ಸಭೆಯಲ್ಲಿ ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕಿಂಗ್ ಕಾಲುವೆ ಬಗ್ಗೆ ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಬಿಜೆಪಿ ಶಾಸಕ ಸುರೇಶ್ ಗೌಡ, ತುರುವೇಕೆರೆ ಶಾಸಕ ಕೃಷ್ಣಪ್ಪ, ಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು, ಜ್ಯೋತಿ ಗಣೇಶ್ ಕುಣಿಗಲ್, ಮಾಗಡಿಗೆ ಹೇಮಾವತಿ ನೀರು ಹರಿಸುವುದಕ್ಕೆ ತೀವ್ರ ವಿರೋಧ ಮಾಡಿದ್ದಾರೆ. ಮಾ.1ರಂದು ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕಿಂಗ್ ಕಾಲುವೆಗೆ ಕುಣಿಗಲ್‌ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್​ ಶಂಕುಸ್ಥಾಪನೆ ನೆರವೇರಿಸಿದ್ದರು.

ಕುಣಿಗಲ್, ಮಾಗಡಿಗೆ ನೀರು ಹಂಚಿಕೆ ಆಗಿಲ್ಲ, ಓವರ್‌ಕ್ರಾಸ್‌ ಹೇಗೆ ಆಗಿದೆ. ಮೇಕೆದಾಟು ಬಗ್ಗೆ ಪಾದಯಾತ್ರೆ ಮಾಡಿದ್ದಾರೆ, ಇಲ್ಲಿಂದ ಏಕೆ ನೀರುಹೋಗಬೇಕು. ಕುಣಿಗಲ್, ಮಾಗಡಿಗೆ ನೀರು ಹರಿಸಿದರೆ ರಕ್ತಪಾತ ಆಗುತ್ತೆ. ಅಧಿಕಾರಿಗಳಿಂದ ಎಡವಟ್ಟು ಆಗಿದೆ, ಇವರನ್ನ ಬಲಿ ಹಾಕಬೇಕೆಂದು ಬಿಜೆಪಿ ಶಾಸಕ ಸುರೇಶ್ ಗೌಡ ವಾಗ್ದಾಳಿ ಮಾಡಿದ್ದಾರೆ.

ಇದನ್ನೂ ಓದಿ: ದಿನೇ ದಿನೇ ಖಾಲಿಯಾಗುತ್ತಿದೆ ಹೇಮಾವತಿ ಒಡಲು, ಕುಡಿಯುವ ನೀರಿಗೆ ಹಾಹಾಕಾರ ಸೃಷ್ಟಿಯಾಗುವ ಆತಂಕ

19.95 ಟಿಎಂಸಿ ತುಮಕೂರು ಜಿಲ್ಲೆಗೆ, ಎಲ್ಲಾ ಸೇರಿ ಒಟ್ಟು 24 ಟಿಎಂಸಿ ಹಂಚಿಕೆ ಆಗಿದ್ದ ನೀರು ಕೊಡಲಾಗುತ್ತಿದೆ ಎಂದು ಹೇಮಾವತಿ ನಾಲಾ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆ ಹೇಗೆ ಅನುಮತಿ ನೀಡಿದ್ದೀರಿ?, ನಾಳೆ ನೀವು ಜೈಲಿಗೆ ಹೋಗುತ್ತೀರಾ ಅಷ್ಟೇ ಎಂದು ಹೇಮಾವತಿ ನಾಲಾ ಅಧಿಕಾರಿಗಳಿಗೆ ಸುರೇಶ್ ಗೌಡ ತರಾಟೆ ತೆಗೆದುಕೊಂಡರು. ಈ ವೇಳೆ ನಾವು ತೀರ್ಮಾನ ಕೈಗೊಂಡು ಸರ್ಕಾರಕ್ಕೆ ತಿಳಿಸಬೇಕಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ನೀರು ಇಲ್ಲ, ಹೀಗೆ ಮಾಡಿದರೆ ಹೇಗೆ. ಬೇಕಿದ್ರೆ ಹೆಚ್ಚುವರಿ ನೀರು ಹಂಚಿಕೆ ಮಾಡಿಸಿ ತೆಗೆದುಕೊಂಡು ಹೋಗಲಿ. ಆದರೆ ನಮಗೆ ಬರುವ ನೀರು ತೆಗೆದುಕೊಂಡು ಹೋಗೋದು ಬೇಡ. ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಆಗಿ ಗುದ್ದಲಿ ಪೂಜೆ ಸಹ ಆಗಿದೆ. ನೀರು ಎಷ್ಟು ಹಂಚಿಕೆ ಆಗಿದೆ ಅಂತಾ ಪರಿಶೀಲಿಸಿ ಸರ್ಕಾರಕ್ಕೆ ತಿಳಿಸಬೇಕಿದೆ. ಬೇರೆ ರೀತಿಯಲ್ಲಿ ನಿರ್ಣಯ ಕೈಗೊಳ್ಳುವಂತೆ ಸುರೇಶ್ ಗೌಡ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೀರು ಹರಿಯುತ್ತಿದ್ದ ಕಾಲುವೆ ಏಕಾಏಕಿ ಬಂದ್; ಹೇಮಾವತಿ ಜಲಾಶಯದ ನೀರು ನಂಬಿ ಭತ್ತ ಬಿತ್ತನೆ ಮಾಡಿದ ರೈತರಲ್ಲಿ ಆತಂಕ

ಹೇಮಾವತಿ ಎಕ್ಸ್‌ಪ್ರೆಸ್‌ ಲಿಂಕಿಂಗ್ ಕಾಲುವೆಗೆ ನೀರು ಹರಿಸದಂತೆ ನಿರ್ಣಯಿಸಲಾಗಿದ್ದು, ಈ ವಿಚಾರವಾಗಿ ಸಚಿವ ಪರಮೇಶ್ವರ್ ಹಾಗೂ ಜಯಚಂದ್ರ ಪರಸ್ಪರ ಚರ್ಚೆ ಮಾಡಿದ್ದಾರೆ. ಪುನಃ ಪರಿಶೀಲನೆ ನಡೆಸಿ ರೆಸ್ಯೂಲೇಷನ್ ಪಾಸ್‌ ಮಾಡಲು ತೀರ್ಮಾನ ಮಾಡಲಾಗಿದೆ. ಮತ್ತೊಮ್ಮೆ ಸರ್ಕಾರಕ್ಕೆ ಪ್ರಕ್ರಿಯೆ ತಲುಪಿಸಲು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಪರಮೇಶ್ವರ್ ಸೂಚನೆ ನೀಡಿದ್ದಾರೆ. ಸರ್ಕಾರಕ್ಕೆ ಮನವರಿಕೆ ಮಾಡಿಕೊಡಲು ಜಿಲ್ಲೆಯ ಶಾಸಕರು ತೀರ್ಮಾನಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Mahesha E
Mahesha E

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ