ಶಾಲೆ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ದುರ್ಮರಣ

ರಾಯಚೂರು: ಸರ್ಕಾರಿ ಶಾಲೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿದೆ. ಬಸ್ಸಾಪುರದ ಸರ್ಕಾರಿ ಶಾಲೆಯ 6ನೇ ತರಗತಿ ಅನಿಲ್(12) ಮೃತ ವಿದ್ಯಾರ್ಥಿ. ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಗ್ರಾಮಸ್ಥರು ಶಾಲಾ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಲೆ ಮೇಲಿನ ವಿದ್ಯುತ್ ತಂತಿ ಸ್ಪರ್ಶಿಸಿ ವಿದ್ಯಾರ್ಥಿ ದುರ್ಮರಣ
ಸಾಧು ಶ್ರೀನಾಥ್​

Updated on: Sep 27, 2019 | 12:19 PM

ರಾಯಚೂರು: ಸರ್ಕಾರಿ ಶಾಲೆ ಮೇಲೆ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಯಚೂರು ಜಿಲ್ಲೆ ಮಸ್ಕಿ ತಾಲೂಕಿನ ಬಸ್ಸಾಪುರ ಗ್ರಾಮದಲ್ಲಿ ನಡೆದಿದೆ.

ಬಸ್ಸಾಪುರದ ಸರ್ಕಾರಿ ಶಾಲೆಯ 6ನೇ ತರಗತಿ ಅನಿಲ್(12) ಮೃತ ವಿದ್ಯಾರ್ಥಿ. ಕಳೆದ ಹಲವು ದಿನಗಳಿಂದ ಸುರಿದ ಮಳೆಗೆ ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ಇದನ್ನು ಗ್ರಾಮಸ್ಥರು ಶಾಲಾ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಈ ಸಂಬಂಧ ಕವಿತಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 12:14 pm, Fri, 27 September 19

Loading...
Unable to load recommendations.
Follow Us