AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆತಂಕ ದೂರವಾಗಿ, ಶಾಲೆಗೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳು; ಆದರೆ ಬಸ್​ಗಳಿಲ್ಲದೆ ಪರದಾಟ

ಕೊರೊನಾ ಆತಂಕ ದೂರವಾಗುತ್ತಿದ್ದಂತೆಯೇ ಎಲ್ಲೆಡೆ ಶಾಲೆ ಕಾಲೇಜು ಆರಂಭವಾಗಿದೆ. ಆದರೆ ಶಾಲೆಗಳಿಗೆ, ಕಾಲೇಜಿಗೆ ತೆರಳಲು ಬಸ್​ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡೋ ಸ್ಥಿತಿ ನಿರ್ಮಾಣವಾಗಿದೆ. ಹೆಚ್ಚುವರಿ ಬಸ್​ ನೀಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊರೊನಾ ಆತಂಕ ದೂರವಾಗಿ, ಶಾಲೆಗೆ ಹತ್ತಿರವಾಗುತ್ತಿರುವ ವಿದ್ಯಾರ್ಥಿಗಳು; ಆದರೆ ಬಸ್​ಗಳಿಲ್ಲದೆ ಪರದಾಟ
ಹೆಚ್ಚುವರಿ ಬಸ್​ಗಳಿಲ್ಲದೇ ಬಾಗಿಲಂಚಿನವೆರೆಗೆ ನಿಂತು ಪ್ರಯಾಣಿಸುತ್ತಿರುವ ಕಾಲೇಜು ವಿದ್ಯಾರ್ಥಿಗಳು
shruti hegde
| Edited By: |

Updated on: Feb 04, 2021 | 5:45 PM

Share

ಹಾಸನ: ಕೊರೊನಾ ಆತಂಕ ದೂರವಾಗುತ್ತಿದ್ದಂತೆಯೇ ಎಲ್ಲೆಡೆ ಶಾಲೆ ಕಾಲೇಜು ಆರಂಭವಾಗಿದೆ. ಆದರೆ ಶಾಲೆಗಳಿಗೆ, ಕಾಲೇಜಿಗೆ ತೆರಳಲು ಬಸ್​ಗಳಿಲ್ಲದೆ ವಿದ್ಯಾರ್ಥಿಗಳು ಪರದಾಡೋ ಸ್ಥಿತಿ ನಿರ್ಮಾಣವಾಗಿದ್ದು, ಜಿಲ್ಲಾಡಳಿತದ ವಿರುದ್ದ ವಿದ್ಯಾರ್ಥಿಗಳು ಕಿಡಿ ಕಾರಿದ್ದಾರೆ. ಹಾಗೂ ಅರಕಲಗೂಡು ತಾಲ್ಲೂಕಿನ ಸಂತೆಮರೂರು ಬಳಿ ಇಂದು ತಮ್ಮ ಮಾರ್ಗದ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ.

ವಿದ್ಯಾರ್ಥಿಗಳು ನಿತ್ಯವೂ ಪರದಾಡಿಕೊಂಡು ಪ್ರಯಾಣ ಕಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಜೀವದ ಹಂಗು ತೊರೆದು ಬಸ್​ನ ಬಾಗಿಲಂಚಿನವರೆಗೂ ವಿದ್ಯಾರ್ಥಿಗಳು ನಿಂತು ಪ್ರಯಾಣ ಮಾಡುವಂತಾಗಿದೆ. ಹೆಚ್ಚುವರಿ ಬಸ್ ನೀಡಿ ಎಂದರೆ ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೇರೆ ಬೇರೆ ಹಳ್ಳಿಗಳಿಂದ ನೂರಾರು ವಿದ್ಯಾರ್ಥಿಗಳು ಅರಕಲಗೂಡಿಗೆ ಕಾಲೇಜಿಗೆ ಬರುತ್ತಾರೆ. ಆದರೆ, ಕಾಲೇಜು ಸಮಯಕ್ಕೆ ಇರುವುದು ಒಂದೇ ಬಸ್ಸು. ಹಾಗಾಗಿ ಈ ಸಮಯದಲ್ಲಿ ಹೆಚ್ಚುವರಿಯಾಗಿ ಬಸ್ ಸಂಚಾರಕ್ಕೆ ಅವಕಾಶ ನೀಡಿ ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಕಾಲೇಜು ಆರಂಭದ ಮೊದಲ ದಿನವೇ ವಿದ್ಯಾರ್ಥಿಗಳಿಂದ ಪ್ರತಿಭಟನೆ.. ಏಕೆ?

Follow Us
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್