AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರವೇ ಪರೀಕ್ಷೆ; Fees ಕಟ್ಟದಿದ್ರೆ ಹಾಲ್ ​ಟಿಕೆಟ್​ ಕೊಡಲ್ವಂತೆ – ಅಮಿರ್ತಾ ಇನ್​ಸ್ಟಿಟ್ಯೂಟ್ ವಿರುದ್ಧ ಕಿರುಕುಳದ ಆರೋಪ

ರಾಜರಾಜೇಶ್ವರಿನಗರದಲ್ಲಿರುವ ಅಮಿರ್ತಾ ಇನ್​ಸ್ಟಿಟ್ಯೂಟ್​ ವಿರುದ್ಧ ಫೀಸ್​ಗಾಗಿ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ. ಹೋಟೆಲ್​ ಮ್ಯಾನೇಜ್​ಮೆಂಟ್​ ವಿದ್ಯಾರ್ಥಿಗಳಿಗೆ ಸಂಸ್ಥೆ ಫೀಸ್​ ವಿಚಾರವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ.

ಸೋಮವಾರವೇ ಪರೀಕ್ಷೆ; Fees ಕಟ್ಟದಿದ್ರೆ ಹಾಲ್ ​ಟಿಕೆಟ್​ ಕೊಡಲ್ವಂತೆ - ಅಮಿರ್ತಾ ಇನ್​ಸ್ಟಿಟ್ಯೂಟ್ ವಿರುದ್ಧ ಕಿರುಕುಳದ ಆರೋಪ
ಅಮಿರ್ತಾ ಇನ್​ಸ್ಟಿಟ್ಯೂಟ್
KUSHAL V
|

Updated on:Feb 13, 2021 | 6:35 PM

Share

ಬೆಂಗಳೂರು: ರಾಜರಾಜೇಶ್ವರಿನಗರದಲ್ಲಿರುವ ಅಮಿರ್ತಾ ಇನ್​ಸ್ಟಿಟ್ಯೂಟ್​ ವಿರುದ್ಧ ಫೀಸ್​ಗಾಗಿ ಒತ್ತಡ ಹೇರಿರುವ ಆರೋಪ ಕೇಳಿಬಂದಿದೆ. ಹೋಟೆಲ್​ ಮ್ಯಾನೇಜ್​ಮೆಂಟ್​ ವಿದ್ಯಾರ್ಥಿಗಳಿಗೆ ಸಂಸ್ಥೆ ಫೀಸ್​ ವಿಚಾರವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. College Fees

‘ಪೂರ್ತಿ ಶುಲ್ಕ ಪಾವತಿಸಿದರೆ ಮಾತ್ರ ಹಾಲ್​ ಟಿಕೆಟ್​ ನೀಡ್ತೇವೆ’ ಪೂರ್ತಿ ಶುಲ್ಕ ಪಾವತಿಸಿದರೆ ಮಾತ್ರ ಹಾಲ್​ ಟಿಕೆಟ್​ ನೀಡ್ತೇವೆ ಎಂದು ಕಾಲೇಜು ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಸೂಚನೆ ನೀಡಿದೆಯಂತೆ. ಅಂದ ಹಾಗೆ, ನಿನ್ನೆ ಅರ್ಧ ಫೀಸ್ ಕಟ್ಟುವಂತೆ ಸೂಚಿಸಿದ್ದ ಆಡಳಿತ ಮಂಡಳಿ ಇಂದು ಏಕಾಏಕಿ ಪೂರ್ತಿ ಶುಲ್ಕ ಪಾವತಿಸುವಂತೆ ಸೂಚನೆ ಕೊಟ್ಟಿದೆ. ಇಲ್ಲದಿದ್ದರೆ, ಹಾಲ್​ ಟಿಕೆಟ್​ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆಯಂತೆ. ಈ ಮೂಲಕ, ಹಾಲ್​ ಟಿಕೆಟ್​ ನೀಡದೆ ಆಡಳಿತ ಮಂಡಳಿ ಸತಾಯಿಸುತ್ತಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದೀಗ, ಏಕಾಏಕಿ ಪೂರ್ತಿ ಶುಲ್ಕ ಕೇಳಿದ್ದಕ್ಕೆ ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ಎದುರಾಗಿದೆ. ಅಂದ ಹಾಗೆ, ಹೋಟೆಲ್​ ಮ್ಯಾನೇಜ್​ಮೆಂಟ್ ಕೋರ್ಸ್​ಗೆ ವಾರ್ಷಿಕ ಶುಲ್ಕ 75,000 ರೂಪಾಯಿ. ವಾರ್ಷಿಕ ಶುಲ್ಕವನ್ನು ಒಂದೇ ಬಾರಿಗೆ ಪಾವತಿಸಿ ಎಂದು ಕಾಲೇಜಿನ ಆಡಳಿತ ಮಂಡಳಿ ಸೂಚಿಸಿದೆಯಂತೆ. 3ನೇ ಸೆಮಿಸ್ಟರ್​ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ ಸೂಚನೆ ಕೊಟ್ಟಿದೆಯಂತೆ.

ಈ ನಡುವೆ, ಸೋಮವಾರ ಪರೀಕ್ಷೆ ಇದ್ದರೂ ಹಾಲ್​ ಟಿಕೆಟ್​ ನೀಡುತ್ತಿಲ್ಲ. ಹಾಲ್ ​ಟಿಕೆಟ್​ಗಾಗಿ ಅಲೆದು ಅಲೆದು ಸುಸ್ತಾಗಿ ಹೋಗಿದ್ದೇವೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

BNG FEES TORTURE 1

ವಿದ್ಯಾರ್ಥಿಗಳು ಕಟ್ಟಿರುವ ಫೀಸ್​ನ ವಿವರ

ಇದನ್ನೂ ಓದಿ: ವಿಜಯಾನಂದ ಕಾಶಪ್ಪನವರ್ ಅಂದ್ರೆ ಯಾರು? ಬಾರಲ್ಲಿ ಗಲಾಟೆ ಮಾಡಿಕೊಂಡನಲ್ಲ ಅವನಾ? -ವಿಜಯೇಂದ್ರ ಟಾಂಗ್​

Published On - 6:02 pm, Sat, 13 February 21

Follow Us
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್