Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್; ತಾಂತ್ರಿಕ ದೋಷದಿಂದ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಕಾಣಿಸಿಕೊಂಡ ಬೆಂಕಿ

ಹಣಕಾಸಿನ ವಿಚಾರಕ್ಕೆ ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬೆಂಗಳೂರಿನ ಯಲಹಂಕ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣದ ನಾಲ್ವರು ಆರೋಪಿಗಳು ಅರೆಸ್ಟ್; ತಾಂತ್ರಿಕ ದೋಷದಿಂದ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಕಾಣಿಸಿಕೊಂಡ ಬೆಂಕಿ
ಯುವಕನನ್ನು ಅಡ್ಡಗಟ್ಟಿ ದರೋಡೆ
Follow us
TV9 Web
| Updated By: Rakesh Nayak Manchi

Updated on:Jul 19, 2022 | 9:43 AM

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ವಿದ್ಯಾರ್ಥಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಬೆಂಗಳೂರಿನ ಯಲಹಂಕ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಗದೀಶ್​ ಎಂಬ ಕಾಲೇಜು ವಿದ್ಯಾರ್ಥಿಯ ತಂದೆಯ ಜೊತೆ ಹಣಕಾಸಿನ ವಿಚಾರದಲ್ಲಿ ನಡೆದ ಕಿರಿಕ್ ಸಂಬಂಧ ಆರೋಪಿಗಳು ಜಗದೀಶ್​ನನ್ನು ಕಿಡ್ನಾಪ್ ಮಾಡಿದ್ದರು. ಸದ್ಯ ಬಾಗೇಪಲ್ಲಿ ಬಳಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶ ಮೂಲದ ವ್ಯಕ್ತಿ ಹಾಗೂ ನಾಲ್ವರು ಆರೋಪಿಗಳ ನಡುವೆ ಹಣಕಾಸಿನ ವಿಚಾರದಲ್ಲಿ ಜಗಳ ನಡೆದಿತ್ತು. ಈ ಹಿನ್ನೆಲೆ ವ್ಯಕ್ತಿಗೆ ಬೆದರಿಕೆ ಹಾಕುವ ನಿರ್ಧಾರಕ್ಕೆ ಬಂದ ಆರೋಪಿಗಳು ಖಾಸಗಿ ಕಾಲೇಜಿನಲ್ಲಿ ವ್ಯಾಸಾಂಗ ನಡೆಸುತ್ತಿದ್ದ ಜಗದೀಶ್​ನನ್ನು ನಿನ್ನೆ ಮಧ್ಯಾಹ್ನ ಸಿನಿಮೀಯ ಶೈಲಿಯಲ್ಲಿ ಪರಿಚಿತರಂತೆ ಕಾರಲ್ಲಿ ಕರೆದುಕೊಂಡು ಹೋಗಿದ್ದರು.

ವಿಚಾರ ತಿಳಿಯುತ್ತಿದ್ದಂತೆ ಕಾರ್ಯಪ್ರವೃತ್ತರಾದ ಯಲಹಂಕ ಠಾಣಾ ಪೊಲೀಸರು, ಬಾಗೇಪಲ್ಲಿ ಬಳಿ ಇನ್ನೊವಾ ಕಾರನ್ನು ಅಡ್ಡಗಟ್ಟಿ ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದು ಪ್ರಾರ್ಥಮಿಕ ತನಿಖೆ ನಡೆಸಿದ್ದಾರೆ. ಹಣಕಾಸಿನ ವ್ಯವಹಾರದ ಹಿನ್ನಲೆ ತಂದೆಗೆ ಬೆದರಿಕೆ ಹಾಕಲು ಕಿಡ್ನಾಪ್ ನಾಟಕ ಮಾಡಲಾಗಿದೆ ಎಂದು ತಿಳಿದುಬಂದಿದ್ದು, ಸದ್ಯ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ವಿದ್ಯಾರ್ಥಿ ತಂದೆ ಸುರೇಶ್ ಅವರು ಮೆಶ್ ರಾಥೋಡ್ ಬಳಿಯಿಂದ 1 ಕೋಟಿ ಹಣ ಸಾಲ ಪಡೆದಿದ್ದರಂತೆ. ವ್ಯವಹಾರ ಉದ್ದೇಶದಿಂದ ಸಾಲ ಪಡೆದಿದ್ದ ಸುರೇಶ್ ಜೊತೆ ಸಾಕುಷ್ಟು ಬಾರಿ ಹಣ ವಾಪಸ್ ನೀಡುವಂತೆ ಕೇಳಿದರೂ ಹಿಂದಿರುಗಿಸಿರಲಿಲ್ಲ. ಇದೇ ಕಾರಣಕ್ಕೆ ಮಗನನ್ನು ಅಪಹರಿಸಿ ಹಣಕ್ಕೆ ಬೇಡಿಕೆ ಇಡಲಾಗಿದೆ.

ಪುಂಡ ಪೋಕರಿಗಳಿಗಿಲ್ಲ ಪೊಲೀಸರ ಭಯ

ಅಪರಾಧ ಕೃತ್ಯಗಳು ನಡೆಯುತ್ತಿರುವ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ರಾಬರಿ ಪ್ರಕರಣಗಳು ಹೆಚ್ಚಾಗುತ್ತಿದೆ. ಸೋಮವಾರ ಬೆಳ್ಳಂಬೆಳಗ್ಗೆ ಲಾಂಗ್ ತೋರಿಸಿ ದರೋಡೆ ನಡೆಸಿದ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಡಿ.ಜೆ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ನಂದಗೋಕುಲ‌ ಲೇಔಟ್​ನಲ್ಲಿ ಜುಲೈ 18 ರ ಬೆಳಗ್ಗೆ 6 ಗಂಟೆಗೆ ನಡೆದುಕೊಂಡು ಬರುತ್ತಿದ್ದ ಯುವಕನನ್ನು ಅಡ್ಡಗಟ್ಟಿದ ದರೋಡೆಕೋರರು, ಲಾಂಗ್ ತೋರಿಸಿ ಬೆದರಿಕೆ ಹಾಕಿ ಮೊಬೈಲ್ ಸಹಿತ ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ.

ಘಟನೆ ಸಂಬಂಧ ಯುವಕ ಡಿಜೆ ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ತನಿಖೆ ಆರಂಭಿಸಿದ್ದಾರೆ. ನಗರದಲ್ಲಿ ಅಪರಾಧ ಕೃತ್ಯಗಳು ಹೆಚ್ಚಾಗುತ್ತಿದ್ದು, ಪುಂಡ ಪೋಕರಿಗಳು ಬಾಲ ಬಿಚ್ಚುತ್ತಿದ್ದಾರೆ. ಪೊಲೀಸರಿಗೂ ಕ್ಯಾರೇ ಎನ್ನದೆ ಹಾಡುಹಗಲೇ ದರೋಡೆಗಳಂತಹ ಪ್ರಕರಣಗಳಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಹಂಪಿ ಎಕ್ಸ್‌ಪ್ರೆಸ್‌ ರೈಲು ಗಾಲಿಗಳಲ್ಲಿ ಕಾಣಿಸಿಕೊಂಡ ಬೆಂಕಿ

ಬಳ್ಳಾರಿ: ತಾಂತ್ರಿಕ ದೋಷದ ಹಿನ್ನಲೆ ಹಂಪಿ ಎಕ್ಸ್‌ಪ್ರೆಸ್‌ ರೈಲಿನ ಗಾಲಿಗಳಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಜಿಲ್ಲೆಯ ತೋರಣಗಲ್ ಬಳಿ‌ ನಡೆದಿದೆ. ನಿನ್ನೆ ರಾತ್ರಿ  ರೈಲಿನ ಎಂಜಿನ್ ಸ್ಟಾರ್ಟ್ ಮಾಡಿದ ಕೆಲವೇ ಕ್ಷಣಗಳಲ್ಲಿ ಹಿಂದಿನ ಗಾಲಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ತಾಂತ್ರಿಕ ಸಮಸ್ಯೆಯಿಂದ ಕಂಡುಬಂದಿದ್ದು, ದೋಷವನ್ನು ಸರಿಪಡಿಸಿದ ನಂತ ರೈಲು ಸಂಚಾರ ಆರಂಭಿಸಲಾಗಿದೆ. ಪರಿಣಾಮವಾಗಿ ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳುತ್ತಿದ್ದ ಹಂಪಿ ಎಕ್ಸಪ್ರೇಸ್ ರೈಲು‌ 2 ಗಂಟೆ ತಡವಾಗಿ ನಿರ್ಗಮಿಸಿದೆ.

Published On - 7:42 am, Tue, 19 July 22

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!