AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಬಸ್​ ವ್ಯವಸ್ಥೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ
shruti hegde
| Edited By: |

Updated on: Feb 23, 2021 | 3:08 PM

Share

ಕೊಪ್ಪಳ: ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್​ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದಾರೆ.

ಒಂದೇ ಬಸ್​ನಲ್ಲಿ ವನಬಳ್ಳಾರಿ, ಗಬ್ಬೂರು, ಕಲ್ಲತಾವರಗೇರಾ ಹಾಲಳ್ಳಿ, ಬಸಾಪೂರ, ಕಿಡದಾಳ ಗ್ರಾಮಗಳ ಜನರು ಬರುತ್ತಾರೆ. ಸುಮಾರು 200ಕ್ಕೂ ಹೆಚ್ಚು ಜನರು ಒಂದೇ ಬಸ್​ನಲ್ಲಿ ಇರುತ್ತಾರೆ. ಬಸ್​ ಒಳಗಡೆ ಜಾಗವೇ ಇರುವುದಿಲ್ಲ. ಹಾಗಾಗಿ ಬಸ್​ ಟಾಪ್​ ಮೇಲೆ ಕುಳಿತು ವಿದ್ಯಾರ್ಥಿಗಳು ಬರುವಂತಹ ಪರಿಸ್ಥಿತಿ ಎದುರಾಗಿದೆ. ಈ ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನಮಗೆ ಬಸ್​ನಲ್ಲಿ ಬರಲು ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳ ಮಾತಿನ ಚಕಮಕಿ ನಡೆದಿದೆ.

ವಿದ್ಯಾರ್ಥಿಗಳ ಪರದಾಟ

ಬೆಳಿಗ್ಗೆ ಬಸ್​ ಹತ್ತುವಾಗ ನೂಕುನುಗ್ಗಲು ಆಗುತ್ತಿರುತ್ತದೆ. ಇದರಿಂದ ಬಸ್​ ಹತ್ತಲು ಸಾಧ್ಯವಾಗುವುದಿಲ್ಲ. ಹೆಚ್ಚುವರಿ ಬಸ್​ಗಳನ್ನು ಬಿಟ್ಟರೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ಅನೇಕ ಊರುಗಳಿಂದ ಹಲವಾರು ವಿದ್ಯಾರ್ಥಿಗಳು ಕಾಲೇಜಿಗೆ, ಶಾಲೆಗೆ ತೆರಳಬೇಕು. ಒಂದೇ ಬಸ್​ ಬರುತ್ತಿರುವುದು ಕಷ್ಟವಾಗುತ್ತಿದೆ. ಅದೇ ಬಸ್ಸಿಗೆ ಒಟ್ಟು 200ಕ್ಕೂ ಹೆಚ್ಚು ಜನರು ಪ್ರಯಾಣ ನಡೆಸುತ್ತಾರೆ. ನಿಲ್ಲಲೂ ಜಾಗವಿರುವುದಿಲ್ಲ. ಕೇವಲ ವಿದ್ಯಾರ್ಥಿಗಳೊಂದೇ ಅಲ್ಲದೇ ಸಾರ್ವಜನಿಕರು ಕೂಡಾ ಪ್ರಯಾಣ ನಡೆಸುತ್ತಾರೆ. ಎಲ್ಲರಿಗಾಗಿ ಬಸ್​ ಅವಶ್ಯಕತೆ ಇದೆ ಎಂದು ಪ್ರತಿಭಟನೆ ಕೈಗೊಂಡಿದ್ದಾರೆ.

student protest in koppala

ವಿದ್ಯಾರ್ಥಿಗಳ ಪ್ರತಿಭಟನೆ

ಇದನ್ನೂ ಓದಿ: SSLC Exam 2020: ಹೊಸಕೋಟೆ, ಮಾಲೂರು ಡಿಪೋ ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು