AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು

ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಕೊಪ್ಪಳದಲ್ಲಿ ಬಸ್​ಗಳಿಲ್ಲದೆ ಪರದಾಟ; ಬಸ್​ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು
ಬಸ್​ ವ್ಯವಸ್ಥೆಗಾಗಿ ವಿದ್ಯಾರ್ಥಿಗಳ ಪ್ರತಿಭಟನೆ
shruti hegde
| Edited By: ಸಾಧು ಶ್ರೀನಾಥ್​|

Updated on: Feb 23, 2021 | 3:08 PM

Share

ಕೊಪ್ಪಳ: ಜಿಲ್ಲೆಯಲ್ಲಿ ಬಸ್​ ಸಮಸ್ಯೆಯಿಂದಾಗಿ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಸರಿಯಾಗಿ ಬಸ್​ ಇಲ್ಲ. ಈ ಕಾರಣದಿಂದ ಓಡಾಡಲು ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಬಸ್​ ನಿಲ್ದಾಣದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ಕೈಗೊಂಡಿದ್ದಾರೆ.

ಒಂದೇ ಬಸ್​ನಲ್ಲಿ ವನಬಳ್ಳಾರಿ, ಗಬ್ಬೂರು, ಕಲ್ಲತಾವರಗೇರಾ ಹಾಲಳ್ಳಿ, ಬಸಾಪೂರ, ಕಿಡದಾಳ ಗ್ರಾಮಗಳ ಜನರು ಬರುತ್ತಾರೆ. ಸುಮಾರು 200ಕ್ಕೂ ಹೆಚ್ಚು ಜನರು ಒಂದೇ ಬಸ್​ನಲ್ಲಿ ಇರುತ್ತಾರೆ. ಬಸ್​ ಒಳಗಡೆ ಜಾಗವೇ ಇರುವುದಿಲ್ಲ. ಹಾಗಾಗಿ ಬಸ್​ ಟಾಪ್​ ಮೇಲೆ ಕುಳಿತು ವಿದ್ಯಾರ್ಥಿಗಳು ಬರುವಂತಹ ಪರಿಸ್ಥಿತಿ ಎದುರಾಗಿದೆ. ಈ ಕುರಿತಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ನಮಗೆ ಬಸ್​ನಲ್ಲಿ ಬರಲು ಕಷ್ಟವಾಗುತ್ತಿದೆ ಎಂದು ಅಧಿಕಾರಿಗಳೊಂದಿಗೆ ವಿದ್ಯಾರ್ಥಿಗಳ ಮಾತಿನ ಚಕಮಕಿ ನಡೆದಿದೆ.

ವಿದ್ಯಾರ್ಥಿಗಳ ಪರದಾಟ

ಬೆಳಿಗ್ಗೆ ಬಸ್​ ಹತ್ತುವಾಗ ನೂಕುನುಗ್ಗಲು ಆಗುತ್ತಿರುತ್ತದೆ. ಇದರಿಂದ ಬಸ್​ ಹತ್ತಲು ಸಾಧ್ಯವಾಗುವುದಿಲ್ಲ. ಹೆಚ್ಚುವರಿ ಬಸ್​ಗಳನ್ನು ಬಿಟ್ಟರೆ ಅನುಕೂಲವಾಗುತ್ತದೆ ಎಂದು ವಿದ್ಯಾರ್ಥಿಗಳು ಮನವಿ ಮಾಡಿಕೊಂಡಿದ್ದಾರೆ. ಅನೇಕ ಊರುಗಳಿಂದ ಹಲವಾರು ವಿದ್ಯಾರ್ಥಿಗಳು ಕಾಲೇಜಿಗೆ, ಶಾಲೆಗೆ ತೆರಳಬೇಕು. ಒಂದೇ ಬಸ್​ ಬರುತ್ತಿರುವುದು ಕಷ್ಟವಾಗುತ್ತಿದೆ. ಅದೇ ಬಸ್ಸಿಗೆ ಒಟ್ಟು 200ಕ್ಕೂ ಹೆಚ್ಚು ಜನರು ಪ್ರಯಾಣ ನಡೆಸುತ್ತಾರೆ. ನಿಲ್ಲಲೂ ಜಾಗವಿರುವುದಿಲ್ಲ. ಕೇವಲ ವಿದ್ಯಾರ್ಥಿಗಳೊಂದೇ ಅಲ್ಲದೇ ಸಾರ್ವಜನಿಕರು ಕೂಡಾ ಪ್ರಯಾಣ ನಡೆಸುತ್ತಾರೆ. ಎಲ್ಲರಿಗಾಗಿ ಬಸ್​ ಅವಶ್ಯಕತೆ ಇದೆ ಎಂದು ಪ್ರತಿಭಟನೆ ಕೈಗೊಂಡಿದ್ದಾರೆ.

student protest in koppala

ವಿದ್ಯಾರ್ಥಿಗಳ ಪ್ರತಿಭಟನೆ

ಇದನ್ನೂ ಓದಿ: SSLC Exam 2020: ಹೊಸಕೋಟೆ, ಮಾಲೂರು ಡಿಪೋ ಬಸ್ ಇಲ್ಲದೇ ವಿದ್ಯಾರ್ಥಿಗಳ ಪರದಾಟ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು