ಈ ಬಾರಿಯೂ ಕೃಷ್ಣ ಮಠದಲ್ಲಿ ಎಡೆ-ಮಡೆ ಸ್ನಾನ ನಡೆಯಲಿಲ್ಲ

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿ ಆಚರಣೆ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ, ಪರ್ಯಾಯ ಪಲಿಮಾರು ಸ್ವಾಮೀಜಿ‌ ಕೃಷ್ಣ ಮಠದಲ್ಲಿ ಮಡೆಸ್ನಾನ ಮತ್ತು ಎಡೆ ಸ್ನಾನದ ಬಗ್ಗೆ ನಿರ್ಧಾರವನ್ನು ಪುನರ್ ಸ್ಪಷ್ಟಪಡಿಸಿದ್ದಾರೆ. ಕೃಷ್ಣ ಮಠದಲ್ಲಿ ಮಡೆಸ್ನಾನವೂ ಇಲ್ಲ, ಎಡೆ ಸ್ನಾನವೂ ಇಲ್ಲ ಎಂದು ಪರ್ಯಾಯ ಪಲಿಮಾರು ಸ್ವಾಮೀಜಿ‌ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ. ಕಳೆದ ವರ್ಷವೂ ಕೃಷ್ಣ ಮಠದಲ್ಲಿ ಎಡೆ- ಮಡೆ ಸ್ನಾನ ನಡೆದಿರಲಿಲ್ಲ: ಯಾವುದೇ ಗೊಂದಲಕ್ಕೆ ಅವಕಾಶವಾಗದಿರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಕೃಷ್ಣ […]

ಈ ಬಾರಿಯೂ ಕೃಷ್ಣ ಮಠದಲ್ಲಿ ಎಡೆ-ಮಡೆ ಸ್ನಾನ ನಡೆಯಲಿಲ್ಲ
ಸಾಧು ಶ್ರೀನಾಥ್​

Updated on: Dec 02, 2019 | 3:36 PM

ಉಡುಪಿ: ಶ್ರೀ ಕೃಷ್ಣ ಮಠದಲ್ಲಿ ಸುಬ್ರಹ್ಮಣ್ಯ ಷಷ್ಠಿ ಆಚರಣೆ ಜೋರಾಗಿ ನಡೆಯುತ್ತಿದೆ. ಈ ಮಧ್ಯೆ, ಪರ್ಯಾಯ ಪಲಿಮಾರು ಸ್ವಾಮೀಜಿ‌ ಕೃಷ್ಣ ಮಠದಲ್ಲಿ ಮಡೆಸ್ನಾನ ಮತ್ತು ಎಡೆ ಸ್ನಾನದ ಬಗ್ಗೆ ನಿರ್ಧಾರವನ್ನು ಪುನರ್ ಸ್ಪಷ್ಟಪಡಿಸಿದ್ದಾರೆ. ಕೃಷ್ಣ ಮಠದಲ್ಲಿ ಮಡೆಸ್ನಾನವೂ ಇಲ್ಲ, ಎಡೆ ಸ್ನಾನವೂ ಇಲ್ಲ ಎಂದು ಪರ್ಯಾಯ ಪಲಿಮಾರು ಸ್ವಾಮೀಜಿ‌ ತಮ್ಮ ನಿರ್ಧಾರ ಪ್ರಕಟಿಸಿದ್ದಾರೆ.

ಕಳೆದ ವರ್ಷವೂ ಕೃಷ್ಣ ಮಠದಲ್ಲಿ ಎಡೆ- ಮಡೆ ಸ್ನಾನ ನಡೆದಿರಲಿಲ್ಲ:
ಯಾವುದೇ ಗೊಂದಲಕ್ಕೆ ಅವಕಾಶವಾಗದಿರಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ಹಿಂದೆ ಕೃಷ್ಣ ಮಠದಲ್ಲಿ ಮಡೆಸ್ನಾನ ನಡೆಯುತ್ತಿತ್ತು. ಪೇಜಾವರ ಶ್ರೀ ಗಳ ಸಲಹೆಯಂತೆ ಎಡೆ ಸ್ನಾನ ಆರಂಭಿಸಲಾಗಿತ್ತು. ಆದರೆ ಎಡೆ ಸ್ನಾನವನ್ನೂ ಮಾಡಿಸದಿರಲು ಇದೀಗ ಪಲಿಮಾರು ಶ್ರೀ ನಿರ್ಧಾರ ತೆಗೆದುಕೊಂಡಿದ್ದಾರೆ.

ಭಕ್ತರು ಕೇವಲ ವಿಶೇಷ ಪೂಜೆ ಸಲ್ಲಿಸಿ, ಅನ್ನ ಪ್ರಸಾದ ಸ್ವೀಕರಿಸಿ ತೆರಳಿದರು. ಎಡೆ ಮತ್ತು ಮಡೆ ಸ್ನಾನ ಎರಡರಲ್ಲೂ ವಿವಾದಗಳಿವೆ. ವಿವಾದ ಬೇಡ ಅನ್ನೋ ಉದ್ದೇಶಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇವರ ಸೇವೆ ಅಂದ್ರೆ ಪೂಜೆಯಷ್ಟೇ ಎಂದು ಮುಖ್ಯ ಪಲಿಮಾರು ಮಠದ ವಿದ್ಯಾಧೀಶ ತೀರ್ಥರು ಹೇಳಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us