AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: 50ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ

50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 100 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು.

ಕೊಪ್ಪಳ: 50ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್
ಆಯೇಷಾ ಬಾನು
|

Updated on: May 25, 2021 | 8:52 AM

Share

ಕೊಪ್ಪಳ: ಕೊರೊನಾ ಸಂಕಷ್ಟದ ಸಮಯದಲ್ಲಿ ಅತಿ ಹೆಚ್ಚು ಕಷ್ಟಪಟ್ಟಿದ್ದು ಗರ್ಭಿಣಿಯರು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ, ವೈದ್ಯರಿಲ್ಲದೆ ಅನೇಕ ಗರ್ಭಿಣಿಯರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅದರಲ್ಲೂ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ದೊಡ್ಡ ಸಾಹಸದ ವಿಷಯ. ಸದ್ಯ ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದೆ.

50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 100 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು. ಇದರಲ್ಲಿ ಕೊಪ್ಪಳ ತಾಲೂಕು 33, ಯಲಬುರ್ಗಾ ತಾಲೂಕು 45, ಕುಷ್ಟಗಿ ತಾಲೂಕು 12 ಹಾಗೂ ಗಂಗಾವತಿ ತಾಲೂಕಿನಲ್ಲಿ 32 ಗರ್ಭಿಣಿಯರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದರಲ್ಲಿ 80 ಕ್ಕೂ ಹೆಚ್ಚು ಜನ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ರು.

ಇದರಲ್ಲಿ 54 ಜನರ ಹೆರಿಗೆಯನ್ನ ಯಶಸ್ವಿಯಾಗಿ ಮಾಡಲಾಗಿದೆ. ಈ ಪೈಕಿ 26 ಜನರಿಗೆ ನಾರ್ಮಲ್ ಡೆಲಿವರಿ, 28 ಸಿಜರಿನ್ ಆಗಿವೆ. ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಇದು ಸಂತಸದ ವಿಷಯ ಎಂದು ಹೆರಿಗೆ ವಿಭಾಗದ ಮುಖ್ಯಸ್ಥರಿಗೆ ಡಿ.ಹೆಚ್‌ಓ. ಧನ್ಯವಾದ ಸಲ್ಲಿಸಿದ್ದಾರೆ.

ಹೆರಿಗೆಯಾದ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ ಸದ್ಯ 54 ಜನರ ಹೆರಿಗೆಯನ್ನ ಯಶಸ್ವಿಯಾಗಿ ಮಾಡಲಾಗಿದ್ದು ಹೆರಿಗೆಯಾದ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಆದ್ರೆ ಬೇರೆ ಬೇರೆ ಜಿಲ್ಲೆಯಲ್ಲಿ ಹೆರಿಗೆಯಾದ ಬಳಿಕ ಐದು ಜನರಿಗೆ ಪಾಸಿಟಿವ್ ಆಗಿದೆ. ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಕ್ಕಳಿಗೆ ವಿಶೇಷ ನವಜಾತ ಶಿಶು ತೀವ್ರ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಅವರಲ್ಲೂ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದ ಡಿ.ಹೆಚ್‌ಓ. ತಿಳಿಸಿದ್ರು.

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯಲ್ಲಿ 180 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೋಂಕು; ಬಳ್ಳಾರಿ ಜನರಲ್ಲಿ ಹೆಚ್ಚಿದ ಆತಂಕ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್