AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ: 50ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ

50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 100 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು.

ಕೊಪ್ಪಳ: 50ಕ್ಕೂ ಹೆಚ್ಚು ಸೋಂಕಿತ ಗರ್ಭಿಣಿಯರಿಗೆ ಯಶಸ್ವಿ ಹೆರಿಗೆ
ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್
ಆಯೇಷಾ ಬಾನು
ಆಯೇಷಾ ಬಾನು|

Updated on: May 25, 2021 | 8:52 AM

Share

ಕೊಪ್ಪಳ: ಕೊರೊನಾ ಸಂಕಷ್ಟದ ಸಮಯದಲ್ಲಿ ಅತಿ ಹೆಚ್ಚು ಕಷ್ಟಪಟ್ಟಿದ್ದು ಗರ್ಭಿಣಿಯರು. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ, ವೈದ್ಯರಿಲ್ಲದೆ ಅನೇಕ ಗರ್ಭಿಣಿಯರು ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಅದರಲ್ಲೂ ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಹೆರಿಗೆ ಮಾಡಿಸುವುದೇ ದೊಡ್ಡ ಸಾಹಸದ ವಿಷಯ. ಸದ್ಯ ಕೊಪ್ಪಳ ಜಿಲ್ಲೆಯಲ್ಲಿ 50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದೆ.

50ಕ್ಕೂ ಹೆಚ್ಚು ಕೊರೊನಾ ಸೋಂಕಿತ ಗರ್ಭಿಣಿಯರಿಗೆ ಯಶಸ್ವಿಯಾಗಿ ಹೆರಿಗೆ ಮಾಡಲಾಗಿದ್ದು ನವಜಾತ ಶಿಶುಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಕೊಪ್ಪಳ ಡಿಹೆಚ್‌ಒ ಟಿ.ಲಿಂಗರಾಜ್ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ 100 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಪಾಸಿಟಿವ್ ಆಗಿತ್ತು. ಇದರಲ್ಲಿ ಕೊಪ್ಪಳ ತಾಲೂಕು 33, ಯಲಬುರ್ಗಾ ತಾಲೂಕು 45, ಕುಷ್ಟಗಿ ತಾಲೂಕು 12 ಹಾಗೂ ಗಂಗಾವತಿ ತಾಲೂಕಿನಲ್ಲಿ 32 ಗರ್ಭಿಣಿಯರಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಇದರಲ್ಲಿ 80 ಕ್ಕೂ ಹೆಚ್ಚು ಜನ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ರು.

ಇದರಲ್ಲಿ 54 ಜನರ ಹೆರಿಗೆಯನ್ನ ಯಶಸ್ವಿಯಾಗಿ ಮಾಡಲಾಗಿದೆ. ಈ ಪೈಕಿ 26 ಜನರಿಗೆ ನಾರ್ಮಲ್ ಡೆಲಿವರಿ, 28 ಸಿಜರಿನ್ ಆಗಿವೆ. ಇದುವರೆಗೂ ಯಾವುದೇ ಸಾವು ಸಂಭವಿಸಿಲ್ಲ. ಇದು ಸಂತಸದ ವಿಷಯ ಎಂದು ಹೆರಿಗೆ ವಿಭಾಗದ ಮುಖ್ಯಸ್ಥರಿಗೆ ಡಿ.ಹೆಚ್‌ಓ. ಧನ್ಯವಾದ ಸಲ್ಲಿಸಿದ್ದಾರೆ.

ಹೆರಿಗೆಯಾದ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ ಸದ್ಯ 54 ಜನರ ಹೆರಿಗೆಯನ್ನ ಯಶಸ್ವಿಯಾಗಿ ಮಾಡಲಾಗಿದ್ದು ಹೆರಿಗೆಯಾದ ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿಲ್ಲ. ಆದ್ರೆ ಬೇರೆ ಬೇರೆ ಜಿಲ್ಲೆಯಲ್ಲಿ ಹೆರಿಗೆಯಾದ ಬಳಿಕ ಐದು ಜನರಿಗೆ ಪಾಸಿಟಿವ್ ಆಗಿದೆ. ಅವರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮಕ್ಕಳಿಗೆ ವಿಶೇಷ ನವಜಾತ ಶಿಶು ತೀವ್ರ ಘಟಕದಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಅವರಲ್ಲೂ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದ ಡಿ.ಹೆಚ್‌ಓ. ತಿಳಿಸಿದ್ರು.

ಇದನ್ನೂ ಓದಿ: ಕೊರೊನಾ ಎರಡನೇ ಅಲೆಯಲ್ಲಿ 180 ಕ್ಕೂ ಹೆಚ್ಚು ಗರ್ಭಿಣಿಯರಿಗೆ ಸೋಂಕು; ಬಳ್ಳಾರಿ ಜನರಲ್ಲಿ ಹೆಚ್ಚಿದ ಆತಂಕ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು