AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆಂಘೀ, ಚಿಕೂನ್ ಗುನ್ಯಾ ಮಹಾಮಾರಿ ಆರ್ಭಟಕ್ಕೆ ಕೊಪ್ಪಳ ಜನತೆ ಹೈರಾಣ

ಕೊಪ್ಪಳ: ಎದ್ರೆ ನಡೆಯೋಕೆ ಆಗ್ತಿಲ್ಲ.. ಕುಂತ್ರೆ ಮಲಗೋಕಾಕ್ತಿಲ್ಲ.. ಡೆಂಘಿ, ಚಿಕೂನ್ ಗುನ್ಯಾ ಸಾಂಕ್ರಾಮಿಕ ರೋಗಕ್ಕೆ ಕೊಪ್ಪಳದ ಜನತೆ ಹೈರಾಣಾಗಿದ್ದಾರೆ. ಡೆಂಘೀ, ಚಿಕೂನ್ ಗುನ್ಯಾ ಮಹಾಮಾರಿಗೆ ಜನ ಹೈರಾಣ: ಕೊಪ್ಪಳ ತಾಲೂಕಿನ ಗಬ್ಬೂರ ಗ್ರಾಮಸ್ಥರನ್ನ ಸಾಂಕ್ರಾಮಿಕ ರೋಗ ಅಕ್ಷರಶಃ ಹಿಂಡಿ ಹಿಪ್ಪೆ ಮಾಡ್ತಿದೆ. ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿದ್ದು, ಬಹುತೇಕ ನಿವಾಸಗಳ ಕುಟುಂಬಸ್ಥರು ಹಾಸಿಗೆ ಹಿಡಿದು ಮಲಗಿದ್ದಾರೆ. ಡೆಂಘೀ, ಚಿಕೂನ್ ಗುನ್ಯಾ ಜನ್ರನ್ನ ಬಾಧಿಸ್ತಿದ್ದು, ವೃದ್ಧರು, ಕಿರಿಯರು, ಸಣ್ಣ ಮಕ್ಕಳು ರೋಗಕ್ಕೆ ತುತ್ತಾಗಿದ್ದಾರೆ. ಕೊಪ್ಪಳದ ಬಹುತೇಕ ಜನರು ಕೀಲು, […]

ಡೆಂಘೀ, ಚಿಕೂನ್ ಗುನ್ಯಾ ಮಹಾಮಾರಿ ಆರ್ಭಟಕ್ಕೆ ಕೊಪ್ಪಳ ಜನತೆ ಹೈರಾಣ
ಡೆಂಗ್ಯೂ
ಸಾಧು ಶ್ರೀನಾಥ್​
|

Updated on: Nov 24, 2019 | 7:32 AM

Share

ಕೊಪ್ಪಳ: ಎದ್ರೆ ನಡೆಯೋಕೆ ಆಗ್ತಿಲ್ಲ.. ಕುಂತ್ರೆ ಮಲಗೋಕಾಕ್ತಿಲ್ಲ.. ಡೆಂಘಿ, ಚಿಕೂನ್ ಗುನ್ಯಾ ಸಾಂಕ್ರಾಮಿಕ ರೋಗಕ್ಕೆ ಕೊಪ್ಪಳದ ಜನತೆ ಹೈರಾಣಾಗಿದ್ದಾರೆ.

ಡೆಂಘೀ, ಚಿಕೂನ್ ಗುನ್ಯಾ ಮಹಾಮಾರಿಗೆ ಜನ ಹೈರಾಣ: ಕೊಪ್ಪಳ ತಾಲೂಕಿನ ಗಬ್ಬೂರ ಗ್ರಾಮಸ್ಥರನ್ನ ಸಾಂಕ್ರಾಮಿಕ ರೋಗ ಅಕ್ಷರಶಃ ಹಿಂಡಿ ಹಿಪ್ಪೆ ಮಾಡ್ತಿದೆ. ಗ್ರಾಮದಲ್ಲಿ ಸಾವಿರಕ್ಕೂ ಹೆಚ್ಚು ಮನೆಗಳಿದ್ದು, ಬಹುತೇಕ ನಿವಾಸಗಳ ಕುಟುಂಬಸ್ಥರು ಹಾಸಿಗೆ ಹಿಡಿದು ಮಲಗಿದ್ದಾರೆ. ಡೆಂಘೀ, ಚಿಕೂನ್ ಗುನ್ಯಾ ಜನ್ರನ್ನ ಬಾಧಿಸ್ತಿದ್ದು, ವೃದ್ಧರು, ಕಿರಿಯರು, ಸಣ್ಣ ಮಕ್ಕಳು ರೋಗಕ್ಕೆ ತುತ್ತಾಗಿದ್ದಾರೆ.

ಕೊಪ್ಪಳದ ಬಹುತೇಕ ಜನರು ಕೀಲು, ಮೂಳೆ ನೋವಿನಿಂದ ಬಳಲುತ್ತಿದ್ದಾರೆ. ಎದ್ದು ನಡೆಯಲಾಗದಷ್ಟು ಆರೋಗ್ಯ ಹೈರಣಾಗಿದೆ. ಅಲ್ಲದೆ, ತಮ್ಮವರನ್ನ ನೋಡಲು ಬರೋ ಸಂಬಂಧಿಕರಿಗೂ ರೋಗ ಅಂಟುತ್ತಿದ್ದು, ಗ್ರಾಮದತ್ತ ಯಾರೂ ಸುಳಿಯುತ್ತಿಲ್ಲ ಅಂತಾ ಹೇಳಲಾಗ್ತಿದೆ. ಇನ್ನು ಮಲಗಿದವರನ್ನ ಆರೈಕೆ ಮಾಡಲು ಆಗದಷ್ಟು ಇಡೀ ಗ್ರಾಮವನ್ನೇ ರೋಗ ತನ್ನ ಕಪಿಮುಷ್ಠಿಗೆ ತೆಗೆದುಕೊಂಡಿದೆ.

ರೋಗಕ್ಕೆ ತುತ್ತಾದ ಗ್ರಾಮಸ್ಥರು ಜಿಲ್ಲಾಸ್ಪತ್ರೆ, ಗಿಣಗೇರಾ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 15 ದಿನಗಳ ಬಳಿಕ ಡೆಂಘೀ, ಚಿಕೂನ್ ಗುನ್ಯಾ ಹೆಚ್ಚಾಗಿದ್ದು, ಹಾಸ್ಪಿಟಲ್​ಗೆ ಅಲೆಯೋದೆ ಜನ್ರಿಗೆ ನಿತ್ಯದ ಕಾಯಕವಾಗಿದೆ. ಇನ್ನು ಗ್ರಾಮದಲ್ಲಿ ಕುಡಿಯೋ ನೀರು, ಸೊಳ್ಳೆ ಕಾಟಕ್ಕೆ ರೋಗ ಉಲ್ಭಣಿಸಿದೆ ಎನ್ನಲಾಗ್ತಿದೆ.

ಆದ್ರೆ, ಗ್ರಾಮಕ್ಕೆ ಗ್ರಾಮವೇ ಮಲಗಿದ್ರೂ ಜನ ಪ್ರತಿನಿಧಿಗಳು ಇತ್ತ ತಲೆ ಹಾಕಿಲ್ಲ. ಇವಾಗ ಜಿಲ್ಲಾಸ್ಪತ್ರೆ ಆರೋಗ್ಯಧಿಕಾರಿಗಳು ಗಿಣಗೇರಾ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಸದ್ಯ 3 ಡೆಂಘೀ ಪ್ರಕರಣ ದಾಖಲಾಗಿದ್ದು, ಯಾರೂ ಭಯಬೀಳ್ಬೇಡಿ ಅಂತಾ ಆರೋಗ್ಯಾಧಿಕಾರಿಗಳು ಅಭಯ ನೀಡಿದ್ದಾರೆ.

ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​