AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೈತರಿಗೆ ಹಣ ಪಾವತಿ ಬಾಕಿ ಇಟ್ಟುಕೊಂಡಿರುವ 7 ಸಕ್ಕರೆ ಕಾರ್ಖಾನೆಗಳಿಗೆ 2 ದಿನ ಗಡುವು ನೀಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ

ಇನ್ನೆರಡು ದಿನಗಳಲ್ಲಿ ರೈತರಿಗೆ ಹಣ ಪಾವತಿಸದಿದ್ದರೆ ಜಿಲ್ಲಾಧಿಕಾರಿಗಳ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಾಕೀತು ಮಾಡಿದರು. ಹಾಗಾದರೆ ಯಾವ ಸಕ್ಕರೆ ಕಾರ್ಖಾನೆಗಳಲ್ಲಿ ಎಷ್ಟು ಹಣ ಪಾವತಿಸುವುದು ಬಾಕಿಯಿದೆ? ಇಲ್ಲಿದೆ ವಿವರ.

ರೈತರಿಗೆ ಹಣ ಪಾವತಿ ಬಾಕಿ ಇಟ್ಟುಕೊಂಡಿರುವ 7 ಸಕ್ಕರೆ ಕಾರ್ಖಾನೆಗಳಿಗೆ 2 ದಿನ ಗಡುವು ನೀಡಿದ ಸಚಿವ ಶಂಕರ ಪಾಟೀಲ ಮುನೇನಕೊಪ್ಪ
ಶಂಕರ ಪಾಟೀಲ್ ಮುನೇನಕೊಪ್ಪ
TV9 Web
| Edited By: |

Updated on: Oct 01, 2021 | 8:12 PM

Share

ಬೆಂಗಳೂರು: 7 ಸಕ್ಕರೆ ಕಾರ್ಖಾನೆಗಳು ರೈತರಿಗೆ ಒಟ್ಟು 42 ಕೋಟಿ ಹಣ ಪಾವತಿಸುವುದನ್ನು ಬಾಕಿ ಉಳಿಸಿಕೊಂಡಿದ್ದು, 2 ದಿನದೊಳಗೆ ರೈತರಿಗೆ ಬಾಕಿ ಪಾವತಿಸುವಂತೆ ಸೂಚಿಸಿದ್ದೇನೆ ಎಂದು ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಿಳಿಸಿದರು.

2021-22ನೇ ಸಾಲಿನಲ್ಲಿ ಕಬ್ಬು ಅರೆಯಲು ಪ್ರಾರಂಭಿಸಲು ಪೂರ್ವ ಸಿದ್ಧತಾ ಯೋಜನೆಗಳು, ಕಾರ್ಖಾನೆಗಳ ಕಾರ್ಯ, ದೊರೆಯಬಹುದಾದ ಕಬ್ಬಿನ ಲಭ್ಯತೆ ಕೂಡ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಅವರು ವಿವರಿಸಿದರು. ಬಾಕಿ ಉಳಿಸಿಕೊಂಡಿರುವ ಕಾರ್ಖಾನೆಗಳು ಆಕ್ಟೋಬರ್ 03 ರೊಳಗೆ ಹಣ ಪಾವತಿ ಮಾಡುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಬಸವೇಶ್ವರ ಶುಗರ್ಸ್ ಹಾಗೂ ಕೋರ್ ಗ್ರೀನ್ ಶುಗರ್ಸ್ ಕಾರ್ಖಾನೆಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ವಸೂಲಾತಿಗೆ ನೊಟೀಸ್ ಜಾರಿಗೊಳಿಸಲಾಗಿದೆ. ಉಳಿದ ಕಾರ್ಖಾನೆಗಳು ಇನ್ನೆರಡು ದಿನಗಳಲ್ಲಿ ರೈತರಿಗೆ ಹಣ ಪಾವತಿಸದಿದ್ದರೆ ಜಿಲ್ಲಾಧಿಕಾರಿಗಳ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಭೆಯಲ್ಲಿ ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ತಾಕೀತು ಮಾಡಿದರು.

ಸೋಮೇಶ್ವರ ಎಸ್‌. ಎಸ್. ಕೆ .ಲಿ. ಬೈಲಹೊಂಗಲ, ಬೆಳಗಾವಿ – 69 ಲಕ್ಷ ಜಮಖಂಡಿ ಶುಗರ್ಸ್ ಲಿ. ಹಿರೆಪಡಸಲಗಿ, ಜಮಖಂಡಿ, ಬಾಗಲಕೋಟೆ- 1 ಕೋಟಿ 5 ಲಕ್ಷ ನಿರಾಣಿ ಶುಗರ್ಸ್ ಲಿ. ಮುಧೋಳ, ಬಾಗಲಕೋಟೆ – 5 ಕೋಟಿ 67 ಲಕ್ಷ ಶ್ರೀ ಸಾಯಿಪ್ರಿಯಾ ಶುಗರ್ಸ್ ಲಿ. ಹಿಪ್ಪರಗಿ, ಬಾಗಲಕೋಟೆ – 4 ಕೋಟಿ 15 ಲಕ್ಷ ಬೀದರ್ ಕಿಸಾನ್ ಸಕ್ಕರೆ ಕಾರ್ಖಾನೆ ಲಿ. ಬೀದರ್ – 2 ಕೋಟಿ 9 ಲಕ್ಷ ಶ್ರೀ ಬಸವೇಶ್ವರ ಶುಗರ್ಸ್ ಲಿ, ಕಾರಜೋಳ, ವಿಜಯಪುರ – 22 ಕೋಟಿ 11 ಲಕ್ಷ ಕೋರ್ ಗ್ಲೀನ್ ಶುಗರ್ಸ್ ಅಂಡ್ ಫ್ಯೂಯೆಲ್ಸ್ ಪ್ರೈ ಲಿ. ಶಹಾಪುರ, ಯಾದಗಿರಿ- 6 ಕೋಟಿ 41 ಲಕ್ಷ

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಅಳಗಂಚಿಪುರ ಬಳಿಯಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಸಮಸ್ಯೆ ಉಂಟಾಗಿರುವ ಕುರಿತೂ ಮಾತನಾಡಿದ ಅವರು, ಟಿವಿ9ನಲ್ಲಿ ಸುದ್ದಿ ಪ್ರಸಾರ ಬಳಿಕ ವಿಷಯ ತಿಳಿದುಕೊಂಡಿದ್ದೇನೆ. ಗ್ರಾಮದ ಸುತ್ತ ಅಂತರ್ಜಲದಲ್ಲಿ ಕೆಮಿಕಲ್ ಸೇರಿರುವ ಆರೋಪದ ಕುರಿತು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲು ಮೈಸೂರು ಜಿಲ್ಲಾಧಿಕಾರಿ ಮತ್ತು ಸಕ್ಕರೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಬೋರ್ವೆಲ್ಗಳಿಗೆ ರಾಸಾಯನಿಕ ಮಿಶ್ರಣವಾಗಿದ್ದಲ್ಲಿ ತಕ್ಷಣ ಕ್ರಮ ಕೈಗೊಳ್ಳುತ್ತೇವೆ. ಸಮಸ್ಯೆಯಾಗಿದ್ದರೆ ಪರಿಹಾರ ಮಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: 

ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಖಡಕ್ ಸೂಚನೆ ನೀಡಿದ ವಿಜಯಪುರ ಜಿಲ್ಲಾಧಿಕಾರಿ

ಒಂದೇ ರಾತ್ರಿಯಲ್ಲಿ 43 ಮೆಟ್ರಿಕ್ ಟನ್ ಕಬ್ಬು ಟ್ರ್ಯಾಕ್ಟರ್​ಗೆ ತುಂಬಿಸಿ ಸಾಹಸ ಮೆರೆದ ಕಾರ್ಮಿಕ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ