AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sumalatha Ambareesh: ಪತಿ ಅಂಬರೀಶ್​ರನ್ನು ನೆನೆದು ಟಿವಿ9 ಸ್ಟುಡಿಯೋದಲ್ಲಿ ಸುಮಲತಾ ಅಂಬರೀಶ್ ಕಣ್ಣೀರು

ರಾಜಕೀಯವಾಗಿ ಏನೇ ಆರೋಪಗಳನ್ನು ಎದುರಿಸಬಹುದು. ಆದರೆ ವೈಯಕ್ತಿಕವಾಗಿ ನಿಂದನೆ ಮಾಡುವುದು ಒಪ್ಪತಕ್ಕದ್ದಲ್ಲ ಎಂದಿರುವ ಸುಮಲತಾ ಅಂಬರೀಷ್, ಪತಿ ಅಂಬರೀಷ್ ಅವರನ್ನು ನೆನೆದು ಟಿವಿ9 ಸ್ಟುಡಿಯೋದಲ್ಲಿ ಕಣ್ಣೀರಿಟ್ಟಿದ್ದಾರೆ.

Sumalatha Ambareesh: ಪತಿ ಅಂಬರೀಶ್​ರನ್ನು ನೆನೆದು ಟಿವಿ9 ಸ್ಟುಡಿಯೋದಲ್ಲಿ ಸುಮಲತಾ ಅಂಬರೀಶ್ ಕಣ್ಣೀರು
ಟಿವಿ9 ಸ್ಟುಡಿಯೊದಲ್ಲಿ ಸುಮಲತಾ ಅಂಬರೀಶ್
TV9 Web
| Updated By: shivaprasad.hs|

Updated on: Jul 09, 2021 | 6:02 PM

Share

ಬೆಂಗಳೂರು: ಪತಿ ಅಂಬರೀಶ್​ ಅವರನ್ನು ನೆನೆದು ಪತ್ನಿ ಸುಮಲತಾ ಅಂಬರೀಶ್ ಅವರು ಟಿವಿ9 ಸ್ಟುಡಿಯೋದಲ್ಲಿ ಕಣ್ಣೀರಿಟ್ಟಿದ್ದಾರೆ. ಅಂಬರೀಶ್ ಪಾರ್ಥಿವ ಶರೀರವನ್ನು ಮಂಡ್ಯಕ್ಕೆ ಕೊಂಡೊಯ್ದ ವಿಚಾರಕ್ಕೆ ಸಂಬಂಧಪಟ್ಟಂತೆ, ಪದೇ ಪದೇ ಈ ವಿಚಾರ ಏಕೆ ಪ್ರಸ್ತಾಪ ಮಾಡುತ್ತೀರಿ? ಕುಮಾರಸ್ವಾಮಿಯವರ ಈ ಹೇಳಿಕೆಗಳಿಂದ ಮನಸ್ಸಿಗೆ ನೋವಾಗಿದೆ ಎಂದು ಅವರು ದುಃಖ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿಯವರು ರಾಜಕಾರಣದಲ್ಲಿ ಒಂದು ಡಿಗ್ನಿಟಿ ಇಟ್ಟುಕೊಂಡಿದ್ದಾರೆ. ಆದರೆ ಇವರ ವಿರುದ್ಧ ಯಾರೂ ಸ್ಪರ್ಧೆ ಮಾಡಬಾರದಾ? ಇಷ್ಟಲ್ಲದೇ ಹೆಣ್ಣುಮಕ್ಕಳ ಬಗ್ಗೆ ಅಗೌರವದಿಂದ ಮಾತನಾಡುತ್ತೀರಿ ಎಂದು ಕುಮಾರಸ್ವಾಮಿಯವರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ನಾನು ಇದುವರೆಗೆ ಯಾರ ವಿರುದ್ಧವೂ ವೈಯಕ್ತಿಕ ಆರೋಪಗಳನ್ನು ಮಾಡಿಲ್ಲ. ಯಾವ ಸಿದ್ಧಾಂತಗಳ ಹಂಗೂ ನನಗಿಲ್ಲ ಎಂದು ಅವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ನಮ್ಮನ್ನು ವಿನಾಕಾರಣ ಟೀಕಿಸುವವರ ಮಟ್ಟವೇ ಬೇರೆ. ನಾವು ಅವರ ಮಟ್ಟಕ್ಕೆ ಇಳಿಯಬಾರದು ಎಂದು ಮಗನಿಗೆ ಹೇಳುತ್ತಾ ಅವನನ್ನು ಸಮಾಧಾನಪಡಿಸುತ್ತಿರುತ್ತೇನೆ. ಅವರು ರಾಜಕೀಯವಾಗಿ ನಮ್ಮನ್ನು ಎಷ್ಟೇ ಟೀಕಿಸಲಿ. ಆದರೆ ವೈಯಕ್ತಿಕವಾಗಿ ಅಂಬರೀಶ್ ವಿಚಾರಕ್ಕೆ ಕುರಿತಂತೆ ಇನ್ನೊಮ್ಮೆ ಮಾತನಾಡಿದರೆ ಅವರು ಮನುಷ್ಯರೇ ಅಲ್ಲ ಎಂದು ನಾನು ಹೇಳುತ್ತೇನೆ ಎಂದು ಸುಮಲತಾ ಅವರು ಪ್ರತಿಕ್ರಿಯಿಸಿದ್ದಾರೆ.

ಸಂಪೂರ್ಣ ಸಂದರ್ಶನ ಇಲ್ಲಿದೆ:

ಅಂಬರೀಶ್​ ಅವರಿಗೆ ನನ್ನ ಬಳಿ ಕ್ರಷರ್ ಇತ್ತೆಂದೇ ಗೊತ್ತಿರಲಿಲ್ಲ: ಅಂಬಿ ಆಪ್ತ ಲಿಂಗರಾಜು ಸ್ಪಷ್ಟನೆ

ಈ ಮೊದಲು ಶ್ರೀರಂಗಪಟ್ಟಣದಲ್ಲಿ ಕ್ರಷರ್ ನಡೆಸುತ್ತಿದ್ದ ಅಂಬಿ ಆಪ್ತ ಲಿಂಗರಾಜು ಅವರು ಟಿವಿ9ಗೆ ಸ್ಪಷ್ಟನೆ ನೀಡಿದ್ದಾರೆ. ಅಂಬರೀಶ್​ ಅವರಿಗೆ ಜಲ್ಲಿ ಉದ್ಯಮ ಮಾಡುವ ಅಗತ್ಯವಿರಲಿಲ್ಲ. ದಾಖಲೆಗಳ ಪ್ರಕಾರ ನನ್ನ ಹಾಗೂ ನನ್ನ ಪತ್ನಿ ಹೆಸರಿನಲ್ಲಿಯೇ ಕ್ರಷರ್ ಇದೆ. ಅದರಲ್ಲಿ ನಷ್ಟವಾದ ಕಾರಣ ಆ ಕ್ರಷರ್​ ಈಗ ನಿಲ್ಲಿಸಿದೆ. ಪ್ರಶ್ನೆ ಇರುವುದು ಅಕ್ರಮ ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ. ಇದರ ಬಗ್ಗೆ ಮಾತನಾಡುವುದು ಬಿಟ್ಟು, ಅಂಬಿ ಹೆಸರನ್ನು ಅದಕ್ಕೆ ತಳಕು ಹಾಕಬಾರದು ಎಂದು ಲಿಂಗರಾಜು ಅವರು ತಿಳಿಸಿದ್ದಾರೆ. ನಾನು ಈ ಹಿಂದೆಯೂ ಅಂಬಿ ಹಿಂಬಾಲಕ, ಮುಂದೆಯೂ ಅವರ ಅಭಿಮಾನಿ ಎಂದು ಲಿಂಗರಾಜು ಹೇಳಿದ್ದಾರೆ.

ಇದನ್ನೂ ಓದಿ: ಅಂಬರೀಶ್ ಹೆಸರು ಹೇಳೋಕೂ ಯೋಗ್ಯತೆ ಇಲ್ಲದವರು; ಸ್ಮಾರಕ ಸಂಬಂಧ ಭೇಟಿ ಮಾಡಿದಾಗ ಮುಖಕ್ಕೆ ಪೇಪರ್ ಎಸೆದಿದ್ದನ್ನು ನೆನಪಿಸಿಕೊಳ್ಳಲಿ: ಸುಮಲತಾ

ಇದನ್ನೂ ಓದಿ: ಪದೇ ಪದೇ ನನ್ನ ತಂದೆಯ ಸಾವಿನ ವಿಚಾರ ತರಬೇಡಿ: ಅಭಿಷೇಕ್ ಅಂಬರೀಶ್ ಎಚ್.ಡಿ.ಕುಮಾರಸ್ವಾಮಿಗೆ ಮನವಿ

(Sumalatha Ambareesh getting emotional on Ambareesh issue at TV9 studio)

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!