AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯಲ್ಲೂ ಸುಳಿವಿಲ್ಲ: ರಾಜಕೀಯ ನೇಪಥ್ಯಕ್ಕೆ ಸರಿದ ಸುಮಲತಾ ಅಂಬರೀಶ್?

ಮುಡಾದಲ್ಲಿ ಸೈಟ್‌ ಹಗರಣ ಖಂಡಿಸಿ ಬಿಜೆಪಿ, ಜೆಡಿಎಸ್‌ನಿಂದ ಮೈಸೂರು ಚಲೋಗೆ ರಣಕಹಳೆ ಮೊಳಗಿಸಿ ಇಂದು ಆರನೇ ದಿನಕ್ಕೆ ಕಾಲಿಟ್ಟಿದೆ. ಮಂಡ್ಯ ಜಿಲ್ಲೆಯಲ್ಲಿ 2ನೇ ದಿನದ ಪಾದಯಾತ್ರೆಯಿಂದಲೂ ಸುಮಲತಾ ಅವರು ದೂರ ಉಳಿದಿದ್ದಾರೆ. ನಿನ್ನೆ ಮತ್ತು ಇಂದು ಕೂಡ ಪಾದಯಾತ್ರೆ ನಡೆದರೂ ಅವರು ಪಾಲ್ಗೊಂಡಿಲ್ಲ.

ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯಲ್ಲೂ ಸುಳಿವಿಲ್ಲ: ರಾಜಕೀಯ ನೇಪಥ್ಯಕ್ಕೆ ಸರಿದ ಸುಮಲತಾ ಅಂಬರೀಶ್?
ಬಿಜೆಪಿ-ಜೆಡಿಎಸ್‌ ಪಾದಯಾತ್ರೆಯಲ್ಲೂ ಸುಳಿವಿಲ್ಲ: ರಾಜಕೀಯ ನೇಪಥ್ಯಕ್ಕೆ ಸರಿದ ಸುಮಲತಾ ಅಂಬರೀಶ್?
ಕಿರಣ್​ ಹನಿಯಡ್ಕ
| Edited By: |

Updated on: Aug 08, 2024 | 7:17 PM

Share

ಮಂಡ್ಯ, ಆಗಸ್ಟ್​ 08: ಮಾಜಿ ಸಂಸದೆ ಸುಮಲತಾ (Sumalatha) ಅವರು ಬಿಜೆಪಿಗೆ ಸೇರಿದಾಗಿನಿಂದ ಹೆಚ್ಚಾಗಿ ರಾಜ್ಯ ರಾಜಕೀಯ ಚಟುವಟಿಕೆಗಳಲ್ಲಿ ಅಷ್ಟಾಗಿ ಸಕ್ರಿಯರಾದಂತೆ ಕಾಣುತ್ತಿಲ್ಲ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಇವರ ಬದಲಾಗಿ ಹೆಚ್​ಡಿ ಕುಮಾರಸ್ವಾಮಿಗೆ ಟಿಕೆಟ್​ ನೀಡಲಾಗಿತ್ತು. ಇದು ಸಾಕಷ್ಟು ಭಿನ್ನಮತಕ್ಕೂ ಕಾರಣವಾಗಿತ್ತು. ಬಳಿಕ ಕುಮಾರಸ್ವಾಮಿ ಸುಮಲತಾ ಅವರ ಮನೆಗೆ ತೆರಳಿ ಬೆಂಬಲ ನೀಡುವಂತೆ ಹೇಳಿದ್ದರು. ಆದರೆ ಸುಮಲತಾ ಮಾತ್ರ ಹೆಚ್​ಡಿಕೆ ಪರ ಪ್ರಚಾರಕ್ಕೆ ಹೋಗಿರಲಿಲ್ಲ. ಇದೀಗ ಹಗರಣಗಳಿಂದ ಕಾಂಗ್ರೆಸ್​ ವಿರುದ್ಧ ಸಿಡಿದೆದ್ದಿರುವ ಬಿಜೆಪಿ, ಜೆಡಿಎಸ್​ ಪಾದಯಾತ್ರೆ (Padayatra) ಜಿಲ್ಲೆಯಲ್ಲಿ 2ನೇ ದಿನ ನಡೆಯುತ್ತಿದ್ದರೂ ಸುಮಲತಾ ಮಾತ್ರ ದೂರ ಉಳಿದಿದ್ದಾರೆ.

ಮುಡಾದಲ್ಲಿ ಸೈಟ್‌ ಹಗರಣ ಖಂಡಿಸಿ ಬಿಜೆಪಿ, ಜೆಡಿಎಸ್‌ನಿಂದ ಮೈಸೂರು ಚಲೋಗೆ ರಣಕಹಳೆ ಮೊಳಗಿಸಿ ಇಂದು ಆರನೇ ದಿನಕ್ಕೆ ಕಾಲಿಟ್ಟಿತು. ಮಂಡ್ಯದಿಂದ ಪಾದಯಾತ್ರೆ ಶುರುವಾಗಿದ್ದೇ ತಡ. ಹಾಸನ ಮಾಜಿ ಶಾಸಕ ಪ್ರೀತಂ ಗೌಡ ಎಂಟ್ರಿ ಕೊಟ್ಟರು. ಆದರೆ ಮಂಡ್ಯ ಜಿಲ್ಲೆಯಲ್ಲಿ 2ನೇ ದಿನದ ಪಾದಯಾತ್ರೆಯಿಂದಲೂ ಸುಮಲತಾ ಅವರು ದೂರ ಉಳಿದಿದ್ದಾರೆ. ನಿನ್ನೆ ಕೂಡ ಪಾದಯಾತ್ರೆ ನಡೆದರೂ ಅವರು ಪಾಲ್ಗೊಂಡಿಲ್ಲ. ಇಂದು ಕೂಡ ಮಂಡ್ಯದಲ್ಲೇ ಪಾದಯಾತ್ರೆ ನಡೆದಿದ್ದರೂ ಸುಮಲತಾ ಭಾಗಿಯಾಗಿಲ್ಲ.

ಇದನ್ನೂ ಓದಿ: ಪ್ರೀತಂ ಗೌಡರನ್ನು ಪಾದಯಾತ್ರೆಯಿಂದ ದೂರವಿಡುತ್ತೇವೆ, ಮೈತ್ರಿಗೂ ಅವರಿಗೂ ಸಂಬಂಧವಿಲ್ಲ: ಪುಟ್ಟರಾಜು

ಮೈಸೂರು ಚಲೋ ಪಾದಯಾತ್ರೆಯಲ್ಲಿ ಇಂದು ಪ್ರೀತಂ ಗೌಡ ಭಾಗಿಯಾಗಿರಲ್ಲಿ. ನಿನ್ನೆ ಪಾದಯಾತ್ರೆಯಲ್ಲಿ ಪ್ರೀತಂ ಗೌಡ ಭಾಗವಹಿಸಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಮತ್ತು ಪ್ರೀತಂಗೌಡ ಬೆಂಬಲಿಗರ ನಡುವೆ ಸಂಘರ್ಷ ನಡೆದಿತ್ತು. ಪ್ರೀತಂ ಗೌಡ ಪಾಲ್ಗೊಳ್ಳುವಿಕೆಗೆ ಜೆಡಿಎಸ್ ಬಲವಾದ ಆಕ್ಷೇಪ ಸಲ್ಲಿಸಿತ್ತು.

ಇದನ್ನೂ ಓದಿ: ಮೈಸೂರು-ಬೆಂಗಳೂರು ಹೆದ್ದಾರಿ ಅಂಡರ್ ಪಾಸ್​ನಲ್ಲಿ ಪ್ರೀತಂಗೌಡ ಭಾವಚಿತ್ರವಿದ್ದ ಫ್ಲೆಕ್ಸ್​ಗಳಿಗೆ ಬೆಂಕಿ

ಹಾದಿಯುದ್ದಕ್ಕೂ ಪ್ರಿತಂ ಪರ ಘೋಷಣೆ ಮೊಳಗಿದ್ದೇ ತಡ, ಜೆಡಿಎಸ್​ ಕಾರ್ಯಕರ್ತರು ಅವರನ್ನ ತಡೆಯೋಕೆ ಮುಂದಾಗಿದ್ದರು. ಆಗ ವಾಗ್ವಾದವೇ ನಡೆದಿದ್ದಲ್ಲದೇ ತಳ್ಳಾಟ, ನೂಕಾಟವೂ ಆಗಿತ್ತು. ದೋಸ್ತಿ ವಿಚಾರವಾಗಿ ಮಾತನಾಡಿದ ಕೇಂದ್ರ ಸಚಿವ ಕುಮಾರಸ್ವಾಮಿ, ಒಂದಷ್ಟು ಕಿಡಿಗೇಡಿಗಳು ಬಿಜೆಪಿ ಜೆಡಿಎಸ್ ಸಂಬಂಧ ಹಾಳು ಮಾಡುವ ಕೆಲಸ ಮಾಡುತ್ತಿದ್ದಾರೆ. ನಾವು ಮತ್ತು ಬಿಜೆಪಿ ಒಟ್ಟಾಗಿದ್ದೇವೆ ಅನ್ನೋ ಮೂಲಕ ವಿರೋಧಿಗಳಿಗೆ ಟಾಂಗ್ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು