AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಮನಹಳ್ಳಿ ಚಿತಾಗಾರ ಬಂದ್: ಇಂದಿನಿಂದ ಏಳು ದಿನಗಳ ಕಾಲ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಅಂತ್ಯಕ್ರಿಯೆ ಸ್ಥಗಿತ

ಇಂದಿನಿಂದ ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಸ್ಥಗಿತಗೊಳ್ಳುತ್ತಿದ್ದು, ತುರ್ತು ನಿರ್ವಹಣಾ ಕೆಲಸ ಹಿನ್ನೆಲೆ 7 ದಿನಗಳ ಕಾಲ ಅಂತ್ಯಕ್ರಿಯೆ ನಡೆಯುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಫರ್ನೇಸ್​ಗಳನ್ನು ಬದಲಾಯಿಸುವ ಸಲುವಾಗಿ ಮೇ 4ರಿಂದ ಮೇ 10ರವರೆಗೆ ಅಂತ್ಯಕ್ರಿಯೆ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ.

ಸುಮನಹಳ್ಳಿ ಚಿತಾಗಾರ ಬಂದ್: ಇಂದಿನಿಂದ ಏಳು ದಿನಗಳ ಕಾಲ ತುರ್ತು ನಿರ್ವಹಣಾ ಕೆಲಸದ ನಿಮಿತ್ತ ಅಂತ್ಯಕ್ರಿಯೆ ಸ್ಥಗಿತ
ಚಿತಾಗಾರ (ಪ್ರಾತಿನಿಧಿಕ ಚಿತ್ರ)
Skanda
| Updated By: ಆಯೇಷಾ ಬಾನು|

Updated on: May 04, 2021 | 7:29 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯಿಂದಾಗಿ ಕರ್ನಾಟಕದ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಒಂದೆಡೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರೆ ಇನ್ನೊಂದೆಡೆ ಸೋಂಕಿನಿಂದ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಚಿತಾಗಾರಗಳ ಮುಂದೆ ಸಾಲು ಸಾಲು ಮೃತದೇಹಗಳು ಕಾಣುವ ದೃಶ್ಯವೂ ಸರ್ವೇಸಾಮಾನ್ಯವಾಗಿದ್ದು, ಅಂತ್ಯಸಂಸ್ಕಾರಕ್ಕೂ ಪರದಾಡಬೇಕಾದ ದುಸ್ಥಿತಿ ಎದುರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಶವ ಸಂಸ್ಕಾರ ಮಾಡಲಾಗುತ್ತಿರುವ ಕಾರಣ ಸುದ್ದಿಯಲ್ಲಿರುವ ಸುಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಇದೀಗ ವಾರದ ಮಟ್ಟಿಗೆ ಅಂತ್ಯ ಸಂಸ್ಕಾರ ಕ್ರಿಯೆ ಸ್ಥಗಿತಗೊಳ್ಳುತ್ತಿದೆ.

ಇಂದಿನಿಂದ ಸುಮನಹಳ್ಳಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ಸ್ಥಗಿತಗೊಳ್ಳುತ್ತಿದ್ದು, ತುರ್ತು ನಿರ್ವಹಣಾ ಕೆಲಸ ಹಿನ್ನೆಲೆ 7 ದಿನಗಳ ಕಾಲ ಅಂತ್ಯಕ್ರಿಯೆ ನಡೆಯುವುದಿಲ್ಲ ಎಂದು ಅಲ್ಲಿನ ಸಿಬ್ಬಂದಿ ತಿಳಿಸಿದ್ದಾರೆ. ಫರ್ನೇಸ್​ಗಳನ್ನು ಬದಲಾಯಿಸುವ ಸಲುವಾಗಿ ಮೇ 4ರಿಂದ ಮೇ 10ರವರೆಗೆ ಅಂತ್ಯಕ್ರಿಯೆ ತಾತ್ಕಾಲಿಕ ಸ್ಥಗಿತಗೊಳ್ಳಲಿದೆ.

SUMANAHALLI

ಮೇ 10ರ ತನಕ ಸುಮನಹಳ್ಳಿ ಚಿತಾಗಾರ ತಾತ್ಕಾಲಿಕ ಸ್ಥಗಿತ

ರೈಲ್ವೇ ನಿಲ್ದಾಣದಲ್ಲಿ ಜನಸಾಗರ, ಎಚ್ಚೆತ್ತುಕೊಳ್ಳದ ಸರ್ಕಾರ ರಾಜ್ಯದಲ್ಲಿ ಕೊರೊನಾ ಸೋಂಕು ಹಬ್ಬುವುದನ್ನು ತಡೆಗಟ್ಟಲು ರಾಜ್ಯ ಸರ್ಕಾರ ಲಾಕ್​ಡೌನ್ ಮಾದರಿಯ ಕರ್ಫ್ಯೂ ವಿಧಿಸಿದೆ. ಆದರೆ, ಕಳೆದ ಬಾರಿಯ ಲಾಕ್​ಡೌನ್​ ರೀತಿಯಲ್ಲಿ ಅತಿಯಾದ ಕಠಿಣ ನಿಯಮಗಳು ಜಾರಿಯಲ್ಲಿಲ್ಲವಾದ್ದರಿಂದ ಜನರು ಓಡಾಡುವುದನ್ನು ನಿಲ್ಲಿಸಿಲ್ಲ. ಅದರಲ್ಲೂ ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿ ಹೊರ ಜಿಲ್ಲೆ, ಹೊರ ರಾಜ್ಯಗಳಿಗೆ ಹೋಗುವ ಪ್ರಯಾಣಿಕರು ಗುಂಪುಗುಂಪಾಗಿ ಜಮಾಯಿಸಿದ್ದು, ಕೊವಿಡ್ ನಿಯಮಾವಳಿಗಳನ್ನು ಸಂಪೂರ್ಣ ಗಾಳಿಗೆ ತೂರಲಾಗಿದೆ.

ಬೆಂಗಳೂರಿನ ಕೆಎಸ್ಆರ್ ರೈಲ್ವೆ ನಿಲ್ದಾಣಕ್ಕೆ ಗುಂಪು ಗುಂಪಾಗಿ ಆಗಮಿಸುತ್ತಿರುವ ಪ್ರಯಾಣಿಕರು ಕೊರೊನಾ ಬಗ್ಗೆ ಅತಿಯಾದ ನಿರ್ಲಕ್ಷ್ಯ ತೋರುತ್ತಿರುವುದು ಆತಂಕ ಮೂಡಿಸುತ್ತಿದೆ. ಕಠಿಣ ನಿಯಮಗಳನ್ನು ಜಾರಿಗೆ ತರುವುದಕ್ಕೇ ಮೀನಾಮೇಷ ಎಣಿಸಿದ ಸರ್ಕಾರ ಈಗ ಜನರು ನಿಯಮ ಉಲ್ಲಂಘನೆ ಮಾಡುತ್ತಿರುವಾಗಲೂ ಎಚ್ಚೆತ್ತುಕೊಳ್ಳದಿದ್ದರೆ ಈಗ ತಲೆದೋರಿರುವ ಸಂಕಷ್ಟ ಇನ್ನಷ್ಟು ಉಲ್ಬಣಿಸುವುದರಲ್ಲಿ ಅನುಮಾನವಿಲ್ಲ.

ಇದನ್ನೂ ಓದಿ: ಸುಮನಹಳ್ಳಿ ಚಿತಾಗಾರದಲ್ಲಿ ಸಾಲು ಸಾಲು ಶವ | ಕರ್ಫ್ಯೂ ನಡುವೆಯೂ ಕೊರೊನಾ ರಣಕೇಕೆ 

ಅಂತ್ಯಸಂಸ್ಕಾರಕ್ಕೆ ಉಚಿತ ಚಿತಾಗಾರ; ಕೊರೊನಾ ಸಂಕಷ್ಟಕ್ಕೆ ಮಿಡಿದ ದೇವಾಂಗ ಮಂಡಳಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ