AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Summer: ಶಿವರಾತ್ರಿ ಮುಗಿಯುತ್ತಿದ್ದಂತೆ ಶಿವ ಶಿವ ಎನ್ನುವಷ್ಟು ಬಿಸಿಲು, ಫೆಬ್ರವರಿ 24ರಿಂದಲೇ ಬೇಸಿಗೆ ಆರಂಭ- ಹವಾಮಾನ ಇಲಾಖೆ

ಬದಲಾದ ಗಾಳಿ ಬೀಸುವ ದಿಕ್ಕು ಮತ್ತು ವಾಯುಭಾರ ಕುಸಿತದಿಂದ ಈ ಬಾರಿ ಫೆಬ್ರವರಿ 24 ರಿಂದಲೇ ಬೇಸಿಗೆ ಆರಂಭವಾಗಲಿದೆ ಎಂದು ಹವಾಮನಾ ಇಲಾಖೆ ಹೇಳಿದೆ.

Summer: ಶಿವರಾತ್ರಿ ಮುಗಿಯುತ್ತಿದ್ದಂತೆ ಶಿವ ಶಿವ ಎನ್ನುವಷ್ಟು ಬಿಸಿಲು, ಫೆಬ್ರವರಿ 24ರಿಂದಲೇ ಬೇಸಿಗೆ ಆರಂಭ- ಹವಾಮಾನ ಇಲಾಖೆ
ಸಾಂಧರ್ಬಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 22, 2023 | 12:43 PM

Share

ಬೆಂಗಳೂರು: ಮಹಾಶಿವರಾತ್ರಿ (Mahashivaratri) ಮುಗಿಯುತ್ತಿದ್ದಂತೆ ಬೇಸಿಗೆ (Summer) ಕಾಲ ಸಣ್ಣದಾಗಿ ಪ್ರಾರಂಭವಾಗುತ್ತದೆ. ಶಿವರಾತ್ರಿಗೆ ಶಿವ ಶಿವ ಎನ್ನುವಷ್ಟು ಬಿಸಿಲಿನ ತಾಪಮಾನ ಏರುತ್ತಾ ಸಾಗುತ್ತದೆ. ಇದು ಪ್ರತಿವರ್ಷ ಸಾಮನ್ಯವಾಗಿ ಮಾರ್ಚ್​​ನಲ್ಲಿ (March) ಪ್ರಾರಂಭವಾಗುತ್ತಿತ್ತು. ಆದರೆ ಈ ಬಾರಿ ಫೆಬ್ರವರಿಯಲ್ಲೇ (February) ಪ್ರಾರಂಭವಾಗಿದೆಯೇ ಎಂದು ಅನ್ನಿಸುತ್ತಿದ್ದು, ನೆತ್ತಿಯ ಮೇಲೆ ಸೂರ್ಯ ಬರುವುದೆ ತಡ, ಬಿಸಿಲಿನ ಬೇಗೆಗೆ ಜನ ಹೈರಾಣಾಗುತ್ತಿದ್ದಾರೆ. ಈ ಮಧ್ಯೆ ಭಾರತೀಯ ಹವಾಮನಾ ಇಲಾಖೆ (India Meteorological Department (IMD)) ಮುನ್ಸೂಚನೆ ನೀಡಿದ್ದು, ಪ್ರತಿವರ್ಷ, ಬೇಸಿಗೆ ಮತ್ತು ಬಿಸಿ ಗಾಳಿ ಮಾರ್ಚ 1 ರಿಂದ ಪ್ರಾರಂಭವಾಗುತ್ತದೆ. ಆದರೆ ಈ ಬಾರಿ ಫೆಬ್ರವರಿ 24 ರಿಂದಲೇ ಆರಂಭವಾಗಲಿದೆ ಎಂದು ಹೇಳಿದೆ. ಉತ್ತರ ಮತ್ತು ಉತ್ತರ ವಾಯುವ್ಯ ಮಾರುತಗಳು ಬೀಸಲು ಪ್ರಾಂಭವಾಗಿವ ಹಿನ್ನೆಲೆ ಬಿಸಿಗಾಳಿ (Dry Weather) ಮತ್ತು ಬೇಸಿಗೆಯ ಬೇಗನೆ ಆರಂಭವಾಗಲಿದೆ ಎಂದು ಹೇಳಿದೆ.

ಈಗಾಗಲೇ ರಾಜ್ಯದಲ್ಲಿ ಅತಿಯಾದ ತಾಪಮಾನ ದಾಖಲಾಗಿದೆ. ಈ ವಿಚಾರವಾಗಿ ಫೆಬ್ರವರಿ ತಿಂಗಳಲ್ಲೇ ಬೆಂಗಳೂರು ನಗರದಲ್ಲಿ 30-31 ಡಿಗ್ರಿ ಸೆಲ್ಸಿಯಸ್​​ ಬಿಸಿಲಿನ ತಾಪಮಾನ ದಾಖಲಾಗಿದೆ. ಹೀಗಾಗಿ ಸಿಲಿಕಾನ್​ ಸಿಟಿ ಜನರು ಅಧಿಕ ತಾಪಮಾನದಿಂದ ಬಳಲುತ್ತಿದ್ದಾರೆ. ಮುಂದಿನ ದಿನಗಳಲ್ಲಿ 20 ರಿಂದ 35 ಡಿಗ್ರಿ ಸೆಲ್ಸಿಯಸ್​ ವರೆಗೆ ತಾಪಮಾನ ದಾಖಲಾಗಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ನ್ಯೂ ಇಂಡಿಯನ್​ ಎಕ್ಸಪ್ರೆಸ್​ ವರದಿ ಮಾಡಿದೆ.

ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಲ್ಲಿ ಪ್ರತಿವರ್ಷ ಫೆಬ್ರವರಿ ತಿಂಗಳಲ್ಲಿ 7 ಮಿಲಿ ಮೀಟರ್​ನಷ್ಟು ಮಳೆಯಾಗುತ್ತಿತ್ತು. ಆದರೆ ಈ ಬಾರಿ ಮಳೆ ಆಗಿಲ್ಲ. ಅಲ್ಲದೆ ಈ ಬಾರಿ ಮಳೆ ಮೋಡಗಳು ಕೂಡ ಉತ್ಪತ್ತಿಯಾಗಿಲ್ಲ. ಮುಂದಿನ 5 ದಿನಗಳಲ್ಲಿ ನಗರದಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ಫೆಬ್ರವರಿ ತಿಂಗಳಲ್ಲಿ ಉತ್ತರ ಭಾರತದಲ್ಲಿ ಚಳಿ ಇರುತ್ತಿತ್ತು. ಆದರೆ ಅಲ್ಲಿಯೂ ಕೂಡ ಬಿಸಿಲಿನ ತಾಪಮಾನ ಹೆಚ್ಚುತ್ತಿದ್ದು, ಬೇಸಿಗೆಯ ಮತ್ತು ಬಿಸಿ ಗಾಳಿ ಬೀಸುತ್ತಿರುವ ಅನುಭವಾಗುತ್ತಿದೆ. ಇದಕ್ಕೆ ಕಾರಣ ಬದಲಾದ ಗಾಳಿ ಬೀಸುವ ದಿಕ್ಕು ಮತ್ತು ವಾಯುಭಾರ ಕುಸಿತ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:42 pm, Wed, 22 February 23

Follow Us
Vivek Biradar
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ