ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು? ಅರ್ಚಕ ಸೋಮಸುಂದರ ದೀಕ್ಷಿತ್ ಹೇಳಿದ್ದೇನು ನೋಡಿ
ಬೆಂಗಳೂರಿನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಮಕರ ಸಂಕ್ರಾಂತಿಯಂದು ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವುದು ಒಂದು ವೈಶಿಷ್ಟ್ಯ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಂಚರಿಸುವ ಈ ಶುಭ ದಿನದಂದು ಶಿವನಿಗೆ ವಿಶೇಷ ಪೂಜೆ ನಡೆಯುತ್ತದೆ. ಸೂರ್ಯದೇವನೇ ಶಿವನನ್ನು ಪೂಜಿಸುವ ಈ ಅಪೂರ್ವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಬೆಂಗಳೂರು, ಜನವರಿ 15: ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 2 ನಿಮಿಷಕ್ಕೆ ಸ್ಪರ್ಶಿಸಲಿದೆ ಎಂದು ಅರ್ಚಕ ಸೋಮಸುಂದರ ದೀಕ್ಷಿತ್ ತಿಳಿಸಿದ್ದಾರೆ. ಜತೆಗೆ, ಈ ಅಪರೂಪದ ವಿದ್ಯಮಾನದ ಧಾರ್ಮಿಕ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಇದು ಅತ್ಯಂತ ವಿಶಿಷ್ಟವಾದ ದಿನವಾಗಿದ್ದು, ಶಿವನ ಆರಾಧನೆಗೆ ಹೆಚ್ಚಿನ ಮಹತ್ವವಿದೆ. ಧನುರ್ಮಾಸ ಪೂಜೆಯ ಕೊನೆಯ ದಿನವೂ ಇದಾಗಿದೆ ಎಂದು ಅವರು ತಿಳಿಸಿದ್ದಾರೆ. ಅವರ ವಿವರಣೆಗಳಿಗೆ ವಿಡಿಯೋ ನೋಡಿ.
Latest Videos

