ಇಂದು ಗವಿ ಗಂಗಾಧರೇಶ್ವರ ದೇಗುಲದಲ್ಲಿ ಸೂರ್ಯ ರಶ್ಮಿ ಸ್ಪರ್ಶ: ಇದರ ವಿಶೇಷ ಏನು? ಅರ್ಚಕ ಸೋಮಸುಂದರ ದೀಕ್ಷಿತ್ ಹೇಳಿದ್ದೇನು ನೋಡಿ
ಬೆಂಗಳೂರಿನ ಗವಿ ಗಂಗಾಧರೇಶ್ವರ ದೇಗುಲದಲ್ಲಿ ಮಕರ ಸಂಕ್ರಾಂತಿಯಂದು ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವುದು ಒಂದು ವೈಶಿಷ್ಟ್ಯ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ಸಂಚರಿಸುವ ಈ ಶುಭ ದಿನದಂದು ಶಿವನಿಗೆ ವಿಶೇಷ ಪೂಜೆ ನಡೆಯುತ್ತದೆ. ಸೂರ್ಯದೇವನೇ ಶಿವನನ್ನು ಪೂಜಿಸುವ ಈ ಅಪೂರ್ವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಳ್ಳಲು ಕಾತರರಾಗಿದ್ದಾರೆ.
ಬೆಂಗಳೂರು, ಜನವರಿ 15: ಬೆಂಗಳೂರಿನ ಐತಿಹಾಸಿಕ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ಮಕರ ಸಂಕ್ರಾಂತಿಯ ಶುಭ ಸಂದರ್ಭದಲ್ಲಿ ವಿಶೇಷ ಪೂಜೆಗಳು ನೆರವೇರುತ್ತಿವೆ. ಸೂರ್ಯನು ದಕ್ಷಿಣಾಯಣದಿಂದ ಉತ್ತರಾಯಣಕ್ಕೆ ತನ್ನ ಪಥ ಬದಲಿಸುವ ಈ ದಿನವನ್ನು ಅತ್ಯಂತ ಪವಿತ್ರವೆಂದು ಪರಿಗಣಿಸಲಾಗುತ್ತದೆ. ಈ ದಿನದಂದು, ಸೂರ್ಯದೇವನ ರಶ್ಮಿಯು ದೇಗುಲದ ಒಳಗಿರುವ ಶಿವಲಿಂಗವನ್ನು ಸಂಜೆ 5 ಗಂಟೆ 2 ನಿಮಿಷಕ್ಕೆ ಸ್ಪರ್ಶಿಸಲಿದೆ ಎಂದು ಅರ್ಚಕ ಸೋಮಸುಂದರ ದೀಕ್ಷಿತ್ ತಿಳಿಸಿದ್ದಾರೆ. ಜತೆಗೆ, ಈ ಅಪರೂಪದ ವಿದ್ಯಮಾನದ ಧಾರ್ಮಿಕ ಮಹತ್ವದ ಬಗ್ಗೆ ವಿವರಿಸಿದ್ದಾರೆ. ಇದು ಅತ್ಯಂತ ವಿಶಿಷ್ಟವಾದ ದಿನವಾಗಿದ್ದು, ಶಿವನ ಆರಾಧನೆಗೆ ಹೆಚ್ಚಿನ ಮಹತ್ವವಿದೆ. ಧನುರ್ಮಾಸ ಪೂಜೆಯ ಕೊನೆಯ ದಿನವೂ ಇದಾಗಿದೆ ಎಂದು ಅವರು ತಿಳಿಸಿದ್ದಾರೆ. ಅವರ ವಿವರಣೆಗಳಿಗೆ ವಿಡಿಯೋ ನೋಡಿ.
Loading...
Unable to load recommendations.
Follow Us
