AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

75ನೇ ಸ್ವಾತಂತ್ರ್ಯ ದಿನಾಚರಣೆಗೆ ವಿನೂತನ ಯೋಜನೆ, ಪ್ರತಿ ಜಿಲ್ಲೆಗೆ 1 ಲಕ್ಷ 80 ಸಾವಿರ ರೂ. ಬಿಡುಗಡೆ; ಸಚಿವ ಸುನಿಲ್ ಕುಮಾರ್ ಮಾಹಿತಿ

ಸ್ವಾತಂತ್ರ್ಯ ಸಂಗ್ರಾಮ ನಡೆದ ಜಾಗದಲ್ಲಿ ಜನ ಪಿಕ್ನಿಕ್ ರೀತಿಯಲ್ಲಿ ಹೋಗಬೇಕು. ಸ್ಥಳದ ಮಹತ್ವವನ್ನು ಕೂಡ ಜನ ಅರಿಯಬೇಕು ಎಂಬುದೇ ಇದರ ಉದ್ದೇಶ. ಇದಕ್ಕಾಗಿ ಸಮಿತಿ ರಚನೆ ಮಾಡಲಾಗಿದೆ. ಎಲ್ಲಾ ಕ್ಷೇತ್ರದ ಮುಖಂಡರು ಸಮಿತಿಯಲ್ಲಿ ಇರಲಿದ್ದಾರೆ.

75ನೇ ಸ್ವಾತಂತ್ರ್ಯ ದಿನಾಚರಣೆಗೆ ವಿನೂತನ ಯೋಜನೆ, ಪ್ರತಿ ಜಿಲ್ಲೆಗೆ 1 ಲಕ್ಷ 80 ಸಾವಿರ ರೂ. ಬಿಡುಗಡೆ; ಸಚಿವ ಸುನಿಲ್ ಕುಮಾರ್ ಮಾಹಿತಿ
ಸಚಿವ ಸುನೀಲ್ ಕುಮಾರ್
TV9 Web
| Updated By: sandhya thejappa|

Updated on:May 24, 2022 | 1:51 PM

Share

ಬೆಂಗಳೂರು: ಆಗಸ್ಟ್ 15ರಂದು ನಡೆಯುವ 75ನೇ ಸ್ವಾತಂತ್ರ್ಯ ದಿನಾಚರಣೆಗೆ (Independents Day) ವಿನೂತನ ಯೋಜನೆ ಜಾರಿಗೆ ತರಲಾಗುತ್ತದೆ ಎಂದು ಸಚಿವ ಸುನಿಲ್ ಕುಮಾರ್ (Sunil Kumar) ಮಾಹಿತಿ ನೀಡಿದ್ದಾರೆ. ಅಮೃತ ಮಹೋತ್ಸವದ ‘ಅಮೃತ ಭಾರತಿಗೆ ಕನ್ನಡದಾರತಿ’ ಲಾಂಛನ ಬಿಡುಗಡೆ ಮಾಡಿ, ಬೆಸ್ಕಾಂ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಅಮೃತ ಮಹೋತ್ಸವಕ್ಕೆ ಕನ್ನಡದಾರತಿ ಕನ್ನಡ ಸಂಸ್ಕೃತಿ ಇಲಾಖೆಯಿಂದ ಈ ವರ್ಷ ಪೂರ್ತಿ ಕಾರ್ಯಕ್ರಮ ನಡೆಸಲಾಗುತ್ತದೆ. 75 ಸ್ಥಳಗಳನ್ನು ಗುರುತಿಸಿ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಕರ್ನಾಟಕದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಜನರಿಗೆ ತಿಳಿಸುವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಕರ್ನಾಟಕದ ನೂರಾರು ಪ್ರದೇಶದಲ್ಲಿ ಬಲಿದಾನ, ಸ್ವಾತಂತ್ರ್ಯ ಹೋರಾಟ ನಡೆದ ಸ್ಥಳಗಳು ಇವೆ. ಈ ಸ್ಥಳದಲ್ಲಿ ಕಾರ್ಯಕ್ರಮ ನಡೆಸಲಾಗುತ್ತದೆ. ಕಾರ್ಯಕ್ರಮದ ಹಿನ್ನೆಲೆ ಪ್ರತಿ ಜಿಲ್ಲೆಗೆ ತಲಾ 1 ಲಕ್ಷದ 80 ಸಾವಿರ ರೂ. ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ ಸಚಿವರು, ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜವನ್ನು ಹಾರಿಸಬೇಕು. 6 ಕೋಟಿ ಕನ್ನಡಿಗರ ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸುವ ಕೆಲಸ ಮಾಡುತ್ತೇವೆ. ಶಾಲಾ- ಕಾಲೇಜುಗಳಲ್ಲಿ ಸ್ಪರ್ಧೆ, ನೃತ್ಯ ನಾಟಕಗಳು ನಡೆಯಬೇಕು ಎಂದು ಹೇಳಿಕೆ ನೀಡಿದರು.

ಇದನ್ನೂ ಓದಿ: ತಿನ್ನುವ ಬಿಸ್ಕೆಟ್ ವ್ಯಾಪಾರ ಮಾಡುತ್ತೇನೆ ಎಂದು ಹಣ ಪಡೆದು ಪರಾರಿಯಾಗಿದ್ದ ವ್ಯಕ್ತಿಯ ಬಂಧನ | ಸಾಲದ ಹೊರೆಗೆ ಬೇಸತ್ತು ಕೂಲಿ ಕಾರ್ಮಿಕ ನೇಣಿಗೆ ಶರಣು

ಇದನ್ನೂ ಓದಿ
Image
SBI Customer Alert: ಎಸ್​ಬಿಐ ಗ್ರಾಹಕರೇ ಎಚ್ಚರ, ಇಂಥ ನಕಲಿ ಸಂದೇಶಗಳಿಗೆ ಸ್ಪಂದಿಸದಿರಿ
Image
ತಿನ್ನುವ ಬಿಸ್ಕೆಟ್ ವ್ಯಾಪಾರ ಮಾಡುತ್ತೇನೆ ಎಂದು ಹಣ ಪಡೆದು ಪರಾರಿಯಾಗಿದ್ದ ವ್ಯಕ್ತಿಯ ಬಂಧನ | ಸಾಲದ ಹೊರೆಗೆ ಬೇಸತ್ತು ಕೂಲಿ ಕಾರ್ಮಿಕ ನೇಣಿಗೆ ಶರಣು
Image
Trending: ದ್ವಿಚಕ್ರ ವಾಹನದಲ್ಲಿ ಆರು ಮಂದಿಯ ಸಂಚಾರ: ರೂಲ್ಸ್ ಬ್ರೇಕರ್ಸ್​ ಯುವಕರ ದುಸ್ಸಾಹಸದ ವಿಡಿಯೋ ವೈರಲ್
Image
Dinesh Karthik: ಟೀಮ್ ಇಂಡಿಯಾಕ್ಕೆ ಆಯ್ಕೆಯಾಗಿದ್ದಕ್ಕೆ ಆರ್​ಸಿಬಿಗೆ ಧನ್ಯವಾದ ಹೇಳಿದ ದಿನೇಶ್ ಕಾರ್ತಿಕ್

ಸ್ವಾತಂತ್ರ್ಯ ಸಂಗ್ರಾಮ ನಡೆದ ಜಾಗದಲ್ಲಿ ಜನ ಪಿಕ್ನಿಕ್ ರೀತಿಯಲ್ಲಿ ಹೋಗಬೇಕು. ಸ್ಥಳದ ಮಹತ್ವವನ್ನು ಕೂಡ ಜನ ಅರಿಯಬೇಕು ಎಂಬುದೇ ಇದರ ಉದ್ದೇಶ. ಇದಕ್ಕಾಗಿ ಸಮಿತಿ ರಚನೆ ಮಾಡಲಾಗಿದೆ. ಎಲ್ಲಾ ಕ್ಷೇತ್ರದ ಮುಖಂಡರು ಸಮಿತಿಯಲ್ಲಿ ಇರಲಿದ್ದಾರೆ. ಆಗಸ್ಟ್ ಲ್ಲಿ ನಾವು ರಥಯಾತ್ರೆ ಹಾಗೂ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಕಾರ್ಯಕ್ರಮ ಮಾಡಲಿದ್ದೇವೆ ಎಂದು ಸುನೀಲ್ ಕುಮಾರ್ ಹೇಳಿದರು.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:47 pm, Tue, 24 May 22

ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ವಿಜಯ್ ದೇವರಕೊಂಡ ‘ಕಿಂಗ್ಡಮ್’ ಸಿನಿಮಾ ಟ್ರೈಲರ್ ಬಿಡುಗಡೆ: LIVE
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಡಿಸಿಎಂ ಹೇಳಿದ್ದನ್ನು ಗಂಭೀರ ಮುಖಮುದ್ರೆಯೊಂದಿಗೆ ಕೇಳಿಸಿಕೊಂಡ ಸಿಎಂ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಮುಂದಿನ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​ಗೆ ಜೈ: ಮತ್ತೆ ಮೊಳಗಿತು ಘೋಷಣೆ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆದಿರುವುದು ಸತ್ಯ: ಸತೀಶ್ ಜಾರಕಿಹೊಳಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
ಮಾಲ್ಡೀವ್ಸ್​ನ​ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
‘ಸು ಫ್ರಮ್ ಸೋ’ ಅರ್ಥ ಏನು? ಕತೆಯ ಒಳಗುಟ್ಟಗಳೇನು?
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ಮಂತ್ರಿಯಾಗುವ ಆಸೆಯನ್ನು ಪದೇಪದೆ ಹೇಳಿಕೊಳ್ಳುತ್ತಿರುವ ಅರಸೀಕೆರೆ ಶಾಸಕ
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ನೆಲಮಂಗಲ: ಗನ್​ ತೋರಿಸಿ ಹೆದರಿಸಿ, ಚಿನ್ನದ ದೋಚಿದ ಆರೋಪಿಗಳು, ವಿಡಿಯೋ ವೈರಲ್
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಸಿದ್ದರಾಮಯ್ಯ ಪಕ್ಕದಲ್ಲಿ ನಿಂತಿದ್ದ ಶಿವಕುಮಾರ್ ಮುಖದಲ್ಲಿ ಅನ್ಯಮನಸ್ಕತೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ
ಕೋಯ್ನಾ ಜಲಾಶಯದಿಂದ ನೀರು ಬಿಡುಗಡೆ: ಕೃಷ್ಣ ನದಿ ಬಳಿ ತೆರಳದಂತೆ ಸೂಚನೆ