AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​

ಮುಧೋಳ‌ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಕಾಶಿಲಿಂಗೇಶ್ವರ ದೇವಸ್ಥಾನದ ಪೂಜಾರಿಯಿಂದ ಮೌಢ್ಯಾಚರಣೆ ನಡೆದಿದೆ. ಮೈ, ಕೈ, ನೋವು ಅಂತಾ ಪೂಜಾರಿ ಬಳಿ ಬರುವ ಭಕ್ತರಿಗೆ ನೋವಾಗುವ ಭಾಗಕ್ಕೆ ಭಂಡಾರ ಹಚ್ಚಿ ಕೊಡಲಿಯಿಂದ ಹೊಡೆಯಲಾಗುತ್ತದೆ. ಹೀಗೆ ಕೊಡಲಿಯಿಂದ ಹೊಡೆದರೆ ಗುಣಮುಖವಾಗುತ್ತೆ ಎಂಬುವುದು ಭಕ್ತರ ಮೂಢನಂಬಿಕೆ ಆಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​
ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​
ರವಿ ಹೆಚ್ ಮೂಕಿ, ಕಲಘಟಗಿ
| Updated By: ಗಂಗಾಧರ​ ಬ. ಸಾಬೋಜಿ|

Updated on:Jul 13, 2024 | 3:23 PM

Share

ಬಾಗಲಕೋಟೆ, ಜುಲೈ 13: 21ನೇ ಶತಮಾನದಲ್ಲಿ ನಾವಿದ್ದೇವೆ. ಅಧುನಿಕತೆ ಎಷ್ಟೇ ಮುಂದುವರಿದರೂ ಮೌಢ್ಯತೆ ಮಾತ್ರ ಇಂದಿಗೂ ಮರೆಯಾಗಿಲ್ಲ. ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೌಢ್ಯಾಚರಣೆ (Superstition), ಮೂಡನಂಬಿಕೆಗಳ ಆಚರಣೆ ಕಾಣಸಿಗುತ್ತವೆ. ಇದೀಗ ಆ ಜಿಲ್ಲೆಗಳಲ್ಲಿ ಬಾಗಲಕೋಟೆ ಕೂಡ ಸೇರಿಕೊಂಡಿದೆ. ಇದೀಗ ಜಿಲ್ಲೆಯ ಮುಧೋಳ‌ (Mudhol) ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮೌಢ್ಯಾಚರಣೆ ಮಾಡಲಾಗುತ್ತಿದೆ. ಭಕ್ತರ ಹೊಟ್ಟೆಗೆ ಕೊಡಲಿಯಿಂದ ಜಕ್ಕಪ್ಪ ಗಡ್ಡದ ಎಂಬ ಪೂಜಾರಿ ಹೊಡೆಯುವ ದೃಶ್ಯ ಎಂತವರನ್ನು ಭಯ ಬಿಳಿಸುತ್ತದೆ. ಸದ್ಯ ಮೂಢನಂಬಿಕೆ ನಿಷೇಧ ಕಾಯ್ದೆಯಡಿ ದೇಗುಲದ ಪೂಜಾರಿಯನ್ನು ಅರೆಸ್ಟ್ ಮಾಡಲಾಗಿದೆ.​

ಮುಧೋಳ‌ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಕಾಶಿಲಿಂಗೇಶ್ವರ ದೇವಸ್ಥಾನದ ಪೂಜಾರಿಯಿಂದ ಮೌಢ್ಯಾಚರಣೆ ನಡೆದಿದೆ. ಮೈ, ಕೈ, ನೋವು ಅಂತಾ ಪೂಜಾರಿ ಬಳಿ ಬರುವ ಭಕ್ತರಿಗೆ ನೋವಾಗುವ ಭಾಗಕ್ಕೆ ಭಂಡಾರ ಹಚ್ಚಿ ಕೊಡಲಿಯಿಂದ ಹೊಡೆಯಲಾಗುತ್ತದೆ. ಹೀಗೆ ಕೊಡಲಿಯಿಂದ ಹೊಡೆದರೆ ಗುಣಮುಖವಾಗುತ್ತೆ ಎಂಬುವುದು ಭಕ್ತರ ಮೂಢನಂಬಿಕೆ ಆಗಿದೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ: 1 ತಿಂಗಳ ಹಸುಗೂಸು, ಬಾಣಂತಿಯನ್ನ ಊರಾಚೆ ಇರಿಸಿದ ಗ್ರಾಮಸ್ಥರು

ಇದೀಗ ಪೂಜಾರಿ ಓರ್ವ ಭಕ್ತನಿಗೆ ಕೊಡಲಿ ಏಟು ನೀಡುವ ದೃಶ್ಯ ವೈರಲ್ ಆಗಿದೆ. ವೈರಲ್​ ಆದ ವಿಡಿಯೋದಲ್ಲಿ ನೆಲದ ಮೇಲೆ ಓರ್ವ ಭಕ್ತ ಮಲಗಿಕೊಂಡಿದ್ದು, ಪೂಜಾರಿ ಭಕ್ತನ ಬೆನ್ನಿಗೆ ಜೋರಾಗಿ ಕೊಡಲಿಯಿಂದ ಹೊಡೆಯಲಾಗುತ್ತಿದೆ. ಹೊಡೆದ ಏಟಿಗೆ ಕೊಡಲಿ ಭಕ್ತನ ದೇಹದೊಳಗೆ ಹೋಗಿದ್ದು, ಹೊರತೆಗೆಯಲು ಪೂಜಾರಿ ಕಷ್ಟಪಡುತ್ತಿರುವುದನ್ನು ನೋಡಬಹುದಾಗಿದೆ.

ಸದ್ಯ ಲೋಕಾಪುರ ಠಾಣೆಯಲ್ಲಿ ಪೂಜಾರಿ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಬಾಗಲಕೋಟೆ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗುಬ್ಬಿ ತಾಲೂಕಿನಲ್ಲಿ ಋತುಚಕ್ರವಾದ ಮಹಿಳೆಯರನ್ನು ಊರಿಂದ ಹೊರಗಿಡುವ ಸಂಪ್ರದಾಯ, ಗ್ರಾಮಸ್ಥರಿಗೆ ಚಳಿ ಬಿಡಿಸಿದ ತಹಶೀಲ್ದಾರ್ ಆರತಿ

ಇನ್ನು ಇತ್ತೀಚೆಗೆ ಚಾಮರಾಜನಗರದಲ್ಲಿ ಇಂತಹದೆ ಒಂದು ಘಟನೆ ನಡೆದಿತ್ತು. ಮನೆಯೊಳಗೆ ನಿಧಿ ಎಂಬ ಕೇರಳದ ಜೋತಿಷಿಯೊಬ್ಬರ ಮಾತು ಕೇಳಿದ್ದ ವ್ಯಕ್ತಿ ನಡು ಮನೆಯಲ್ಲಿ ಬಾವಿ ತೊಡಿದ್ದ. ಸತತ 10 ದಿನಗಳ ಕಾಲ ಬಾವಿ ತೊಡಿರುವ ಕುಟುಂಬ ಗ್ರಾಮದ ಯಾರಿಗೂ ಒಂಚೂರು ಅನುಮಾನ ಬಾರದ ರೀತಿ ನಡೆದು ಕೊಂಡಿದ್ದ. ನಡು ಮನೆಯಲ್ಲಿ ತೆಗೆದ ಗುಂಡಿಯ ಮಣ್ಣನ್ನ ಅಡುಗೆ ಮನೆಯಲ್ಲಿಯೇ ರಾಶಿ ಮಾಡಿದ್ದ. ಆತ ಮಾಡಿದ ಗನಂಧಾರಿ ಕೆಲಸವನ್ನ ನೋಡಲು ಇಡೀ ಊರಿಗೆ ಊರೇ ಬೆಚ್ಚಿಬಿದ್ದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Sat, 13 July 24