AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​

ಮುಧೋಳ‌ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಕಾಶಿಲಿಂಗೇಶ್ವರ ದೇವಸ್ಥಾನದ ಪೂಜಾರಿಯಿಂದ ಮೌಢ್ಯಾಚರಣೆ ನಡೆದಿದೆ. ಮೈ, ಕೈ, ನೋವು ಅಂತಾ ಪೂಜಾರಿ ಬಳಿ ಬರುವ ಭಕ್ತರಿಗೆ ನೋವಾಗುವ ಭಾಗಕ್ಕೆ ಭಂಡಾರ ಹಚ್ಚಿ ಕೊಡಲಿಯಿಂದ ಹೊಡೆಯಲಾಗುತ್ತದೆ. ಹೀಗೆ ಕೊಡಲಿಯಿಂದ ಹೊಡೆದರೆ ಗುಣಮುಖವಾಗುತ್ತೆ ಎಂಬುವುದು ಭಕ್ತರ ಮೂಢನಂಬಿಕೆ ಆಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​
ಬಾಗಲಕೋಟೆ ಜಿಲ್ಲೆಯಲ್ಲಿ ಮೌಢ್ಯಾಚರಣೆ: ಭಕ್ತರಿಗೆ ಕೊಡಲಿ ಏಟು, ಪೂಜಾರಿ ಅರೆಸ್ಟ್​
ರವಿ ಹೆಚ್ ಮೂಕಿ, ಕಲಘಟಗಿ
| Edited By: |

Updated on:Jul 13, 2024 | 3:23 PM

Share

ಬಾಗಲಕೋಟೆ, ಜುಲೈ 13: 21ನೇ ಶತಮಾನದಲ್ಲಿ ನಾವಿದ್ದೇವೆ. ಅಧುನಿಕತೆ ಎಷ್ಟೇ ಮುಂದುವರಿದರೂ ಮೌಢ್ಯತೆ ಮಾತ್ರ ಇಂದಿಗೂ ಮರೆಯಾಗಿಲ್ಲ. ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮೌಢ್ಯಾಚರಣೆ (Superstition), ಮೂಡನಂಬಿಕೆಗಳ ಆಚರಣೆ ಕಾಣಸಿಗುತ್ತವೆ. ಇದೀಗ ಆ ಜಿಲ್ಲೆಗಳಲ್ಲಿ ಬಾಗಲಕೋಟೆ ಕೂಡ ಸೇರಿಕೊಂಡಿದೆ. ಇದೀಗ ಜಿಲ್ಲೆಯ ಮುಧೋಳ‌ (Mudhol) ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಮೌಢ್ಯಾಚರಣೆ ಮಾಡಲಾಗುತ್ತಿದೆ. ಭಕ್ತರ ಹೊಟ್ಟೆಗೆ ಕೊಡಲಿಯಿಂದ ಜಕ್ಕಪ್ಪ ಗಡ್ಡದ ಎಂಬ ಪೂಜಾರಿ ಹೊಡೆಯುವ ದೃಶ್ಯ ಎಂತವರನ್ನು ಭಯ ಬಿಳಿಸುತ್ತದೆ. ಸದ್ಯ ಮೂಢನಂಬಿಕೆ ನಿಷೇಧ ಕಾಯ್ದೆಯಡಿ ದೇಗುಲದ ಪೂಜಾರಿಯನ್ನು ಅರೆಸ್ಟ್ ಮಾಡಲಾಗಿದೆ.​

ಮುಧೋಳ‌ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ಕಾಶಿಲಿಂಗೇಶ್ವರ ದೇವಸ್ಥಾನದ ಪೂಜಾರಿಯಿಂದ ಮೌಢ್ಯಾಚರಣೆ ನಡೆದಿದೆ. ಮೈ, ಕೈ, ನೋವು ಅಂತಾ ಪೂಜಾರಿ ಬಳಿ ಬರುವ ಭಕ್ತರಿಗೆ ನೋವಾಗುವ ಭಾಗಕ್ಕೆ ಭಂಡಾರ ಹಚ್ಚಿ ಕೊಡಲಿಯಿಂದ ಹೊಡೆಯಲಾಗುತ್ತದೆ. ಹೀಗೆ ಕೊಡಲಿಯಿಂದ ಹೊಡೆದರೆ ಗುಣಮುಖವಾಗುತ್ತೆ ಎಂಬುವುದು ಭಕ್ತರ ಮೂಢನಂಬಿಕೆ ಆಗಿದೆ.

ಇದನ್ನೂ ಓದಿ: ತುಮಕೂರು ಜಿಲ್ಲೆಯಲ್ಲಿ ಮುಂದುವರಿದ ಮೌಢ್ಯಾಚರಣೆ: 1 ತಿಂಗಳ ಹಸುಗೂಸು, ಬಾಣಂತಿಯನ್ನ ಊರಾಚೆ ಇರಿಸಿದ ಗ್ರಾಮಸ್ಥರು

ಇದೀಗ ಪೂಜಾರಿ ಓರ್ವ ಭಕ್ತನಿಗೆ ಕೊಡಲಿ ಏಟು ನೀಡುವ ದೃಶ್ಯ ವೈರಲ್ ಆಗಿದೆ. ವೈರಲ್​ ಆದ ವಿಡಿಯೋದಲ್ಲಿ ನೆಲದ ಮೇಲೆ ಓರ್ವ ಭಕ್ತ ಮಲಗಿಕೊಂಡಿದ್ದು, ಪೂಜಾರಿ ಭಕ್ತನ ಬೆನ್ನಿಗೆ ಜೋರಾಗಿ ಕೊಡಲಿಯಿಂದ ಹೊಡೆಯಲಾಗುತ್ತಿದೆ. ಹೊಡೆದ ಏಟಿಗೆ ಕೊಡಲಿ ಭಕ್ತನ ದೇಹದೊಳಗೆ ಹೋಗಿದ್ದು, ಹೊರತೆಗೆಯಲು ಪೂಜಾರಿ ಕಷ್ಟಪಡುತ್ತಿರುವುದನ್ನು ನೋಡಬಹುದಾಗಿದೆ.

ಸದ್ಯ ಲೋಕಾಪುರ ಠಾಣೆಯಲ್ಲಿ ಪೂಜಾರಿ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ. ಬಾಗಲಕೋಟೆ ಪೊಲೀಸ್​ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಗುಬ್ಬಿ ತಾಲೂಕಿನಲ್ಲಿ ಋತುಚಕ್ರವಾದ ಮಹಿಳೆಯರನ್ನು ಊರಿಂದ ಹೊರಗಿಡುವ ಸಂಪ್ರದಾಯ, ಗ್ರಾಮಸ್ಥರಿಗೆ ಚಳಿ ಬಿಡಿಸಿದ ತಹಶೀಲ್ದಾರ್ ಆರತಿ

ಇನ್ನು ಇತ್ತೀಚೆಗೆ ಚಾಮರಾಜನಗರದಲ್ಲಿ ಇಂತಹದೆ ಒಂದು ಘಟನೆ ನಡೆದಿತ್ತು. ಮನೆಯೊಳಗೆ ನಿಧಿ ಎಂಬ ಕೇರಳದ ಜೋತಿಷಿಯೊಬ್ಬರ ಮಾತು ಕೇಳಿದ್ದ ವ್ಯಕ್ತಿ ನಡು ಮನೆಯಲ್ಲಿ ಬಾವಿ ತೊಡಿದ್ದ. ಸತತ 10 ದಿನಗಳ ಕಾಲ ಬಾವಿ ತೊಡಿರುವ ಕುಟುಂಬ ಗ್ರಾಮದ ಯಾರಿಗೂ ಒಂಚೂರು ಅನುಮಾನ ಬಾರದ ರೀತಿ ನಡೆದು ಕೊಂಡಿದ್ದ. ನಡು ಮನೆಯಲ್ಲಿ ತೆಗೆದ ಗುಂಡಿಯ ಮಣ್ಣನ್ನ ಅಡುಗೆ ಮನೆಯಲ್ಲಿಯೇ ರಾಶಿ ಮಾಡಿದ್ದ. ಆತ ಮಾಡಿದ ಗನಂಧಾರಿ ಕೆಲಸವನ್ನ ನೋಡಲು ಇಡೀ ಊರಿಗೆ ಊರೇ ಬೆಚ್ಚಿಬಿದ್ದಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 3:19 pm, Sat, 13 July 24

Follow Us
Ravi H Mooki
Ravi H Mooki

ರವಿ ಹೆಚ್ ಮೂಕಿ. ಮೂಲತಃ ಧಾರವಾಡ ಜಿಲ್ಲೆ ಕಲಘಟಗಿ ತಾಲ್ಲೂಕಿನ ಪರಸಾಪುರ ಗ್ರಾಮದವರು.ರವಿ ಮೂಕಿ ಪ್ರಸ್ತುತ ಟಿವಿ9 ನ್ಯೂಜ್ ಚಾನಲ್‌ ನಲ್ಲಿ ಬಾಗಲಕೋಟೆ ವರದಿಗಾರರು.ಪದವಿ ಮುಗಿಸಿ ಕೆಲ ತಿಂಗಳು ರಿಲಯನ್ಸ್ ಕಂಪನಿಯಲ್ಲಿ ಕೆಲಸ, ನಂತರ ಜನಶ್ರೀ ನ್ಯೂಜ್‌ ಹಾವೇರಿ ಜಿಲ್ಲಾ ವರದಿಗಾರರಾಗಿ ೨೦೧೦ ರಿಂದ ೨೦೧೫ ರವರೆಗೆ ಕೆಲಸ ಮಾಡಿದ್ದಾರೆ.೨೦೧೫ ರಿಂದ‌ ಟಿವಿ ೯ ಬಾಗಲಕೋಟೆ ಜಿಲ್ಲಾ ವರದಿಗಾರರಾಗಿ ‌ಕೆಲಸ ಮುಂದುವರೆಸಿದ್ದಾರೆ.ಮಾದ್ಯಮದಲ್ಲಿ ಸಕ್ರಿಯರಾಗಿದ್ದು,ಹಾವೇರಿ ಬಾಗಲಕೋಟೆ ಜಿಲ್ಲೆ ಸೇರಿ ಒಟ್ಟು.೧೪ ವರ್ಷ ಮಾದ್ಯಮ ಕ್ಷೇತ್ರದಲ್ಲಿ ಕಾರ್ಯನಿರ್ವಹಣೆ.ರಾಜಕೀಯ,ಕೃಷಿ,ಗ್ರಾಮೀಣ ಕ್ರೀಡೆ,ಮಾನವೀಯ ಸ್ಟೋರಿಗಳ ವರದಿ ಮಾಡಲು ಹೆಚ್ಚು ಆಸಕ್ತಿ.ಸಿನಿಮಾ ನೋಡುವುದು,ಸಂಗೀತ ಕೇಳೋದು ಹಾಡೋದು ಇಷ್ಟ. ಟಿರ್ವಿ ಬಾಗಲಕೋಟೆ ಜಿಲ್ಲಾ ವರದಿಗಾರನಾಗಿ ಉತ್ತರಕರ್ನಾಟಕ ದಲ್ಲಿನ ಪ್ರವಾಹ ಸಂಕಷ್ಟ ಕವರೇಜ್. ,ಬಾದಾಮಿ ಸಿದ್ದರಾಮಯ್ಯ- ರಾಮುಲು ಹೈವೋಲ್ಟೇಜ್ ಚುನಾವಣೆ ಕವರೇಜ್,ಅದೇ ಚುನಾವಣೆಯಲ್ಲಿ ಜೆಪಿ ಕೇಂದ್ರ ನಾಯಕ ಅಮಿತ್ ಷಾ ಇಂಟರ್ ವ್ಯೂ ಮಾಡೋಕೆ ಸಂಸ್ಥೆಯಲ್ಲಿ ಅವಕಾಶ ಸಿಕ್ಕಿದ್ದು ಖುಷಿ ಹೆಮ್ಮೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ