AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ: ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್​

ಸಿಬಿಐ ರವಾಂಡಾದಿಂದ ಲಷ್ಕರ್-ಎ-ತೊಯ್ಬಾ ಸದಸ್ಯನಾಗಿದ್ದ ಸಲ್ಮಾನ್ ರೆಹಮಾನ್ ಖಾನ್ ಅನ್ನು ಬಂಧಿಸಿ ಭಾರತಕ್ಕೆ ಹಸ್ತಾಂತರಿಸಲಾಗಿದೆ. ಬೆಂಗಳೂರಿನಲ್ಲಿ ಉಗ್ರ ಕೃತ್ಯಗಳಿಗೆ ಸ್ಫೋಟಕ ಸಂಗ್ರಹಿಸುತ್ತಿದ್ದ ಆತನನ್ನು ಎನ್ಐಎ ಮತ್ತು ಸಿಬಿಐ ಜಂಟಿಯಾಗಿ ಪತ್ತೆ ಹಚ್ಚಿ ಬಂಧಿಸಿವೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ಟಿ. ನಾಸೀರ್ ಸಂಪರ್ಕದಿಂದಾಗಿ ಭಯೋತ್ಪಾದನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ.

ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ: ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್​
ಬೆಂಗಳೂರಿನಲ್ಲಿ ಉಗ್ರ ಚಟುವಟಿಕೆಗಳಿಗೆ ಬೆಂಬಲ: ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್​
Jagadisha B
| Edited By: |

Updated on:Nov 28, 2024 | 4:24 PM

Share

ಬೆಂಗಳೂರು, ನವೆಂಬರ್​ 28: ಬೆಂಗಳೂರಿನಲ್ಲಿ ಉಗ್ರ ಕೃತ್ಯಗಳಿಗೆ ಸ್ಫೋಟಕ ಸಂಗ್ರಹಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ರವಾಂಡದಲ್ಲಿ ತಲೆಮರೆಸಿಕೊಂಡಿದ್ದ ಲಷ್ಕರ್-ಎ-ತೊಯ್ಬಾದ ಸದಸ್ಯನಾಗಿದ್ದ ಸಲ್ಮಾನ್ ರೆಹಮಾನ್ ಖಾನ್ (Salman Rehman Khan)​ ಅನ್ನು ಬಂಧಿಸಿರುವುದಾಗಿ ಸಿಬಿಐ ಮಾಧ್ಯಮ ಪ್ರಕಟಣೆಯ ಮೂಲಕ ಮಾಹಿತಿ ನೀಡಿದೆ. ಜೊತೆಗೆ ಆತನನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ.

ಸಿಬಿಐನ ಜಾಗತಿಕ ಕಾರ್ಯಾಚರಣೆ ಘಟಕ ಮತ್ತು ಎನ್ಐಎ ಸಂಘಟಿತ ಪ್ರಯತ್ನದಿಂದ ಆರೋಪಿಯನ್ನು ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ. ಬೆಂಗಳೂರಿನಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಒದಗಿಸಿದ್ದ. ಸ್ಫೋಟಕಗಳನ್ನು ಕ್ರೋಢೀಕರಿಸುವ ಕೆಲಸದಲ್ಲಿ ಸಲ್ಮಾನ್ ರೆಹಮಾನ್ ಖಾನ್ ನಿರತನಾಗಿದ್ದ.

ಇದನ್ನೂ ಓದಿ: ಉಡುಪಿ: ಎನ್​ಕೌಂಟರ್ ನಡೆದ ಪೀತಬೈಲ್​ನಲ್ಲಿ ತೀವ್ರ ಶೋಧ, ಶರಣಾಗತಿಗೆ ನಕ್ಸಲರಿಗೆ ಡಿಸಿಎಂ ಸೂಚನೆ

ಸಲ್ಮಾನ್ ರೆಹಮಾನ್ ಖಾನ್ 2018ರಿಂದ 2022ರವರೆಗೂ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ. ಆತನಿಗೆ ಭಯೋತ್ಪಾದಕ ಪ್ರಕರಣಗಳ ಆರೋಪಿ ಟಿ.ನಾಸೀರ್ ಪರಿಚಯವಾಗಿತ್ತು. ಜೈಲಿನಲ್ಲಿ ಸಲ್ಮಾನ್ ರೆಹಮಾನ್ ಖಾನ್ ಸೇರಿದಂತೆ ಕೆಲ ಸಹ ಕೈದಿಗಳನ್ನ ಬ್ರೈನ್ ವಾಶ್ ಮಾಡಿದ್ದ ನಾಸೀರ್​, ರೆಹಮಾನ್​​ನನ್ನು ಭಯೋತ್ಪಾದನೆಯೆಡೆಗೆ ಸೆಳೆದಿದ್ದ.

ರೆಹಮಾನ್ ಶಿಕ್ಷೆ ಮುಗಿಸಿ ಹೊರಬಂದ ಬಳಿಕ ಉಗ್ರ ಚಟುವಟಿಗೆಳಿಗೆ ಸಹಾಯ ಮಾಡುತ್ತಿದ್ದ. ಟಿ.ನಾಸೀರ್ ಅಣತಿಯಂತೆ ಸಹಚರರ ಸಹಾಯದಿಂದ ಬೆಂಗಳೂರಿನಲ್ಲಿ ಉಗ್ರ ಕೃತ್ಯಗಳನ್ನು ಸಂಘಟಿಸಲು ತೊಡಗಿದ್ದ. ಪ್ರಕರಣ ದಾಖಲಾಗುತ್ತಿದ್ದಂತೆ ರೆಹಮಾನ್ ಖಾನ್ ಪರಾರಿಯಾಗಿದ್ದ.

ಇದನ್ನೂ ಓದಿ: ನಕ್ಸಲ್ ವಿಕ್ರಂ ಗೌಡ ಪೊಲೀಸ್ ಬಲೆಗೆ ಬಿದ್ದಿದ್ಹೇಗೆ? ರೋಚಕ ಕಾರ್ಯಾಚರಣೆಯ ರಹಸ್ಯ ಇಲ್ಲಿದೆ

ಪತ್ತೆಗಾಗಿ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸುವಂತೆ ಎನ್ಐಎ ಅಧಿಕಾರಿಗಳು ಸಿಬಿಐಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ರವಾಂಡದಲ್ಲಿ ಉಗ್ರ ಸಲ್ಮಾನ್ ರೆಹಮಾನ್ ಬಂಧಿಸಿ ಇದೀಗ ಭಾರತಕ್ಕೆ ಹಸ್ತಾಂತರ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:09 pm, Thu, 28 November 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್