ರಾಜ್ಯದ ಹೈನುಗಾರರಿಗೆ ಬೆಂಬಲ, ಬೆಂಗಳೂರು ಹೋಟೇಲ್‌ಗಳಲ್ಲಿ ನಂದಿನಿ ಹಾಲು ಮಾತ್ರ ಬಳಸಲು ತೀರ್ಮಾನ

ಗುಜರಾತ್ ಮೂಲದ ಡೈರಿ ದೈತ್ಯ ಅಮುಲ್‌ ವಿರುದ್ದ ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ ​​ನಂದಿನಿ ಹಾಲನ್ನು ಮಾತ್ರ ಬಳಸಲು ನಿರ್ಧರಿಸಿದೆ.

ರಾಜ್ಯದ ಹೈನುಗಾರರಿಗೆ ಬೆಂಬಲ, ಬೆಂಗಳೂರು ಹೋಟೇಲ್‌ಗಳಲ್ಲಿ ನಂದಿನಿ ಹಾಲು ಮಾತ್ರ ಬಳಸಲು ತೀರ್ಮಾನ
ಪ್ರಾತಿನಿಧಿಕ ಚಿತ್ರ
Follow us
|

Updated on: Apr 10, 2023 | 8:26 AM

ಬೆಂಗಳೂರು: ಗುಜರಾತ್ ಮೂಲದ ಡೈರಿ ದೈತ್ಯ ‘ಅಮುಲ್‌‘(Amul)ವಿರುದ್ದ ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್ ​​”ರಾಜ್ಯದ ಡೈರಿ ರೈತರನ್ನು ಬೆಂಬಲಿಸಲು” ನಂದಿನಿ ಹಾಲನ್ನು ಮಾತ್ರ ಬಳಸಲು ನಿರ್ಧರಿಸಿದೆ. ಹೌದು ಬೆಂಗಳೂರು ಡೈರಿ ಮಾರುಕಟ್ಟೆಗೆ ಅಮುಲ್ ಮುನ್ನುಗ್ಗುವ ಘೋಷಣೆಯ ಕುರಿತು ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷ ಕಾಂಗ್ರೆಸ್ ಮತ್ತು ಜೆಡಿಎಸ್ ವಾಗ್ಯುದ್ಧದಲ್ಲಿ ತೊಡಗಿರುವ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಬೃಹತ್ ಬೆಂಗಳೂರು ಹೊಟೇಲ್ ಅಸೋಸಿಯೇಷನ್(Bruhat Bengaluru Hotels Association) ಅಮುಲ್ ಹೆಸರನ್ನು ಹೆಸರಿಸದೆ, ಕನ್ನಡಿಗರು ನಂದಿನಿ ಹಾಲಿನ ಉತ್ಪನ್ನಗಳನ್ನು ಮಾತ್ರ ಪ್ರಚಾರ ಮಾಡಬೇಕು. “ನಮ್ಮ ರೈತರು ಉತ್ಪಾದಿಸುವ ಕರ್ನಾಟಕದ ನಂದಿನಿ ಹಾಲಿನ ಬಗ್ಗೆ ನಮಗೆಲ್ಲರಿಗೂ ಹೆಮ್ಮೆ ಇದೆ ಮತ್ತು ಅದನ್ನು ಪ್ರೋತ್ಸಾಹಿಸಬೇಕು. ನಮ್ಮ ನಗರದಲ್ಲಿ ಶುಚಿಯಾದ ಮತ್ತು ರುಚಿಕರವಾದ ಕಾಫಿ ತಿಂಡಿಗಳ ಬೆನ್ನೆಲುಬಾಗಿ ನಿಂತಿದೆ. ನಾವು ಅದನ್ನ ಬಹಳ ಹೆಮ್ಮೆಯಿಂದ ಪ್ರೋತ್ಸಾಹಿಸುತ್ತೇವೆ ಎಂದಿದ್ದಾರೆ.

ಈ ಹಿಂದೆ ರಾಜ್ಯದ ಅಸಾಧಾರಣ ಡೈರಿ ಬ್ರ್ಯಾಂಡ್ ನಂದಿನಿಯನ್ನ ಕೊಲ್ಲಲು ಬಿಜೆಪಿ ಸಂಚು ರೂಪಿಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಶುಕ್ರವಾರ(ಏ.7) ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ” ಕನ್ನಡಿಗರು ಅಮುಲ್ ಉತ್ಪನ್ನಗಳನ್ನು ಖರೀದಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಬೇಕು” ಎಂದು ಹೇಳಿದ್ದರು. ಕರ್ನಾಟಕ ಹಾಲು ಒಕ್ಕೂಟ ಕೆಎಂಎಫ್ ಮತ್ತು ಗುಜರಾತ್‌ನ ಆನಂದ್ ಮಿಲ್ಕ್ ಯೂನಿಯನ್ ಲಿಮಿಟೆಡ್ ಅಮುಲ್ ನಡುವಿನ ವಿಲೀನದ ಊಹಾಪೋಹಗಳ ನಂತರ ಮಾತನಾಡಿದ ಅವರು ‘ನಾಡಿನ ರೈತರ ಶ್ರೇಯೋಭಿವೃದ್ಧಿಗಾಗಿ ನಿರ್ಮಿಸಿರುವ ಕೆಎಂಎಫ್‌ನ ಕಬಳಿಕೆಯನ್ನ ಎಲ್ಲ ಕನ್ನಡಿಗರು ಒಕ್ಕೊರಲಿನಿಂದ ವಿರೋಧಿಸಬೇಕು. ಅಮುಲ್ ಉತ್ಪನ್ನಗಳನ್ನು ಖರೀದಿಸದಂತೆ ಎಲ್ಲ ಕನ್ನಡಿಗರು ಪ್ರತಿಜ್ಞೆ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಹೇಳಿದ್ದು, ಹಿಂದಿ ಹೇರಿಕೆಯಿಂದ ಭಾಷಾ ದ್ರೋಹ, ರಾಜ್ಯದ ಗಡಿಯಲ್ಲಿ ಅತಿಕ್ರಮ ಪ್ರವೇಶ ಮಾಡುವ ಮೂಲಕ ಭೂ ದ್ರೋಹದ ಜತೆಗೆ ಲಕ್ಷಾಂತರ ಜನರ ಜೀವನಾಧಾರವಾಗಿರುವ ಕರ್ನಾಟಕ ಹಾಲು ಮಹಾಮಂಡಳಿಯನ್ನು (ಕೆಎಂಎಫ್) ಬಂದ್ ಮಾಡುವ ಮೂಲಕ ಬಿಜೆಪಿ ಸರಕಾರ ರೈತರಿಗೆ ದ್ರೋಹ ಬಗೆಯಲು ಹೊರಟಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡಲೇ ಈ ವಿಷಯದಲ್ಲಿ ಮಧ್ಯಪ್ರವೇಶಿಸಿ ಅಮುಲ್ ರಾಜ್ಯದ ಡೈರಿ ಮಾರುಕಟ್ಟೆಗೆ ಪ್ರವೇಶಿಸುವುದನ್ನು ತಡೆಯಬೇಕು ಎಂದು ಸಿದ್ದರಾಮಯ್ಯ ಕರೆ ನೀಡಿದ್ದರು.

ಇದನ್ನೂ ಓದಿ:KMF vs Amul: ಕೆಎಂಎಫ್ ಎದುರು ಸೆಣಸಿ ಗೆಲ್ಲಲು ಅಮುಲ್​ಗೆ ಆಗುತ್ತಾ? ಎರಡು ದೈತ್ಯ ಹಾಲು ಉತ್ಪಾದಕರ ಮಧ್ಯೆ ಒಂದು ಹೋಲಿಕೆ

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಹಕಾರ ಸಚಿವಾಲಯವನ್ನು ಸಹ ನಿರ್ವಹಿಸುತ್ತಿದ್ದು, ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಜನಾಭಿಪ್ರಾಯ ಸಂಗ್ರಹಿಸಬೇಕು ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್​​ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ರಾಜ್ಯದಲ್ಲಿ ಬಿಜೆಪಿ ದುರ್ಬಲ ನಾಯಕತ್ವವೇ ಕೆಎಂಎಫ್ ವ್ಯವಹಾರದಲ್ಲಿ ಕುಸಿತಕ್ಕೆ ಕಾರಣವಾಗಿದೆ ಎಂದು ಆರೋಪಿಸಿದ್ದರು. ಇನ್ನು ಅಮುಲ್​ ಬುಧವಾರ ಬೆಂಗಳೂರಿಗೆ ಬರುತ್ತಿರುವುದು ತಾಜಾತನದ ಅಲೆ ಎಂದು ಟ್ವೀಟ್ ಮಾಡಿತ್ತು.

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ