AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕಕ್ಕೆ ಶಾಕ್, ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ

Cauvery River Water Dispute: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಸುಪ್ರೀಂಕೋರ್ಟ್​ ಕರ್ನಾಟಕಕ್ಕೆ ಮತ್ತೆ ಶಾಕ್ ಕೊಟ್ಟಿದೆ. ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸಲು ಆದೇಶ ಹೊರಡಿಸಿದೆ. ಈ ಮೂಲಕ ಸುಪ್ರೀಂಕೋರ್ಟ್ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶವನ್ನು ಎತ್ತಿ ಹಿಡಿದಿದೆ.

ಕರ್ನಾಟಕಕ್ಕೆ ಶಾಕ್, ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ಸುಪ್ರೀಂಕೋರ್ಟ್ ಆದೇಶ
ಸಾಂದರ್ಭಿಕ ಚಿತ್ರ
ಹರೀಶ್ ಜಿ.ಆರ್​.
| Edited By: |

Updated on:Sep 21, 2023 | 11:44 AM

Share

ನವದೆಹಲಿ, (ಸೆಪ್ಟೆಂಬರ್ 21): ತಮಿಳುನಾಡಿಗೆ (Tamil Nadu) ಕೆಆರ್​ಎಸ್​ನಿಂದ 5000 ಕ್ಯೂಸೆಕ್​ ನೀರು ಹರಿಸಬೇಕೆಂದು ಸುಪ್ರೀಂಕೋರ್ಟ್ (Supreme Court) ಆದೇಶ ಹೊರಡಿಸಿದೆ. CWMA ಆದೇಶ ಪಾಲಿಸುವಂತೆ ಕರ್ನಾಟಕ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ 15 ದಿನಗಳ ಕಾಲ ಪ್ರತಿದಿನ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಹರಿಸಲು ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ ಆದೇಶ ಹೊರಡಿಸಿದೆ. ಇದರೊಂದಿಗೆ ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳನ್ನು ಎತ್ತಿಹಿಡಿದೆ. ಹೀಗಾಗಿ ಬರ ಪರಿಸ್ಥಿತಿ ನಡುವೆ ಕರ್ನಾಟಕಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕಾವೇರಿ ನಿಯಂತ್ರಣ ಆಯೋಗ ಮತ್ತು ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶಗಳು ಮತ್ತು ಶಿಫಾರಸುಗಳನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಲಾಗುವುದಿಲ್ಲ. ಎರಡು ಸಮಿತಿಗಳ ಆದೇಶವನ್ನು ಒಪ್ಪಬೇಕಾಗುತ್ತೆ. ಎರಡು ಸಮಿತಿಗಳ ಆದೇಶವನ್ನು ಕರ್ನಾಟಕ ಪಾಲಿಸಬೇಕು, ಹೀಗಾಗಿ ಕರ್ನಾಟಕ ನೀರು ಹರಿಸಲೇಬೇಕು ಎಂದು ಸುಪ್ರೀಂಕೋರ್ಟ್ ಹೇಳಿದೆ.

ಇದನ್ನೂ ಓದಿ: ಕಾವೇರಿ ನೀರಿ ವಿವಾದ: ಕೇಂದ್ರ ಜಲಶಕ್ತಿ ಸಚಿವರನ್ನ ಭೇಟಿಯಾದ ಸಿದ್ದರಾಮಯ್ಯ, ಏನೆಲ್ಲಾ ಚರ್ಚೆ ಆಯ್ತು?

ಕರ್ನಾಟಕದಲ್ಲಿ ಈ ಬಾರಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಎದುರಾಗಿದೆ. ಆದರೂ ತಮಿಳುನಾಡು ನಮಗೆ ಸಾಮಾನ್ಯ ವರ್ಷಗಳಂತೆ ನೀರು ಹರಿಸುವಂತೆ ಪಟ್ಟು ಹಿಡಿದಿದ್ದು, ಈ ಬಗ್ಗೆ ಕರ್ನಾಟಕ ಹಾಗೂ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದವು. ಇಂದು ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಕೋರ್ಟ್, ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ 5000 ಕ್ಯೂಸೆಕ್ಸ್‌ ನೀಡು ಬಿಡುವಂತೆ ಆದೇಶ ಹೊರಡಿಸಿದೆ. ಇದಾದ ನಂತರ ನೀರಿನ ಲಭ್ಯತೆಯ ವಾಸ್ತವಾಂಶವನ್ನು ನೋಡಿಕೊಂಡು ಮುಂದಿನ ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳಿಗೊಮ್ಮೆ ಸಭೆಯನ್ನು ಮಾಡಬೇಕು. ಎರಡೂ ರಾಜ್ಯಗಳು ಪ್ರಾಧಿಕಾರದ ಆದೇಶವನ್ನು ಪಾಲಿಸಬೇಕು ಎಂದು ನ್ಯಾಯಮೂರ್ತಿ ಗವಾಯ್‌ ಆದೇಶದಲ್ಲಿ ಸೂಚಿಸಿದ್ದಾರೆ.

ಇತ್ತೀಚೆಗೆ ಸಭೆಗಳನ್ನು ಮಾಡಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕಾವೇರಿ ನೀರು ನಿಯಂತ್ರಣಾ ಸಮಿತಿ, 15 ದಿನಗಳ ಕಾಲ ಪ್ರತಿನಿತ್ಯ ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡುಗಡೆ ಕರ್ನಾಟಕಕ್ಕೆ ಆದೇಶಿಸಿದ್ದವು. ಆದ್ರೆ, ಕರ್ನಾಟಕ ಕೆಆರ್​ಎಸ್​ ಜಲಾಶಯದಲ್ಲಿ ನೀರಿನ ಕೊರತೆ ಇರುವುದಿರಂದ ಅಷ್ಟು ನೀರು ಬಿಡಲಾಗುವುದಿಲ್ಲ ಎಂದು ಪಟ್ಟು ಹಿಡಿದಿತ್ತು. ಇದರ ವಿರದ್ಧವಾಗಿ ತಮಿಳುನಾಡು ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿತ್ತು. ಇದಕ್ಕೆ ಕರ್ನಾಟಕ ಸರ್ಕಾರವೂ ಸಹ ಅಫಿಡೇವಿಟ್ ಸಲ್ಲಿಸಿತ್ತು. ಆದ್ರೆ, ಇದೀಗ ಅಂತಿಮವಾಗಿ ಸುಪ್ರೀಂಕೋರ್ಟ್, ತಮಿಳುನಾಡಿನ ಪರ ತೀರ್ಪು ನೀಡಿದೆ.

Published On - 11:21 am, Thu, 21 September 23

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು