ಬೆಂಗಳೂರಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆಯಾಗಲಿ; ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಮನವಿ

Bengaluru: ಬೆಂಗಳೂರಿನಲ್ಲಿ ಉತ್ತಮ ವಾತಾವರಣ ಮತ್ತು ಮೂಲಸೌಕರ್ಯವಿದೆ. ಹೀಗಾಗಿ ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್​ನ ಪೀಠವನ್ನು ಸ್ಥಾಪಿಸಲು ಅನುಕೂಲವಾಗಲಿದೆ ಎಂದು ಅವರು ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.

ಬೆಂಗಳೂರಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆಯಾಗಲಿ; ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಮನವಿ
ಸುಪ್ರೀಂಕೋರ್ಟ್​
Edited By:

Updated on: Mar 18, 2021 | 2:29 PM

ದೆಹಲಿ: ಬೆಂಗಳೂರಿನಲ್ಲಿ ಸುಪ್ರೀಂಕೋರ್ಟ್ ಪೀಠದ ಅಗತ್ಯವಿದೆ ಎಂದು ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ನಾಗರಿಕರು ದೆಹಲಿಗೆ ಆಗಮಿಸಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಕಷ್ಟವಾಗುತ್ತಿದೆ. ಹೀಗಾಗಿ ದಕ್ಷಿಣ ಭಾರತದ ಬೆಂಗಳೂರಿನಲ್ಲಿ ಸರ್ವೋಚ್ಛ ನ್ಯಾಯಾಲಯದ ಪೀಠವನ್ನು ಸ್ಥಾಪಿಸಲು ಕೆ.ಸಿ.ರಾಮಮೂರ್ತಿ ಮನವಿ ಮಾಡಿದ್ದಾರೆ.

ಸುಪ್ರೀಂಕೋರ್ಟ್​ನ ಪೀಠವನ್ನು ಬೆಂಗಳೂರಿನಲ್ಲಿ ಸ್ಥಾಪಿಸಿದರೆ ಎಲ್ಲಾ ವಿಚಾರದಲ್ಲೂ ಸಹಕಾರ ನೀಡಲಿದ್ದೇವೆ. ಬೆಂಗಳೂರಿನಲ್ಲಿ ಸುಪ್ರೀಂಕೋರ್ಟ್ ಪೀಠ ಸ್ಥಾಪನೆಯಿಂದ ತ್ವರಿತಗತಿಯಲ್ಲಿ ಪ್ರಕರಣ ಇತ್ಯರ್ಥ ಮಾಡಲು ಸಹ ಸಹಾಯವಾಗಲಿದೆ. ಬೆಂಗಳೂರಿನಲ್ಲಿ ಉತ್ತಮ ವಾತಾವರಣ ಮತ್ತು ಮೂಲಸೌಕರ್ಯವಿದೆ. ಹೀಗಾಗಿ ಬೆಂಗಳೂರಿನಲ್ಲಿ ಸುಪ್ರೀಂ ಕೋರ್ಟ್​ನ ಪೀಠವನ್ನು ಸ್ಥಾಪಿಸಲು ಅನುಕೂಲವಾಗಲಿದೆ ಎಂದು ಅವರು ರಾಜ್ಯಸಭೆಯಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯುಕ್ತರಾಗಿ ಸರ್ಕಾರಿ ಅಧಿಕಾರಿಗಳ ನೇಮಕ ಸಲ್ಲ; ಸುಪ್ರೀಂ ಕೋರ್ಟ್

ಇದನ್ನೂ ಓದಿ: ಶಸ್ತ್ರಚಿಕಿತ್ಸೆ ನಡೆಸಲು ಆಯುರ್ವೇದ ವೈದ್ಯರಿಗೆ ಅನುಮತಿ ವಿಚಾರ: ಕೇಂದ್ರ ಸರ್ಕಾರದ ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್