AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್

ಕರ್ನಾಟಕದ ಮುಖ್ಯಮಂತ್ರಿಯಾಗಲು ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್ ಸಿಕ್ಕಿದೆ,

ಸಿಎಂ ಹುದ್ದೆಗೆ ಪೈಪೋಟಿ ನಡೆಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಬಿಗ್ ರಿಲೀಫ್
ಡಿಕೆ ಶಿವಕುಮಾರ್
ರಮೇಶ್ ಬಿ. ಜವಳಗೇರಾ
|

Updated on:May 17, 2023 | 1:36 PM

Share

ಮುಖ್ಯಾಂಶಗಳು

  • ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆ ಹಿನ್ನೆಲೆ.
  • ತಡೆಯಾಜ್ಞೆ ತೆರವು ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್
  • ಇಂದು ಯಾವುದೇ ಮಧ್ಯಂತರ ಆದೇಶ ನೀಡಲು ಸುಪ್ರೀಂ ಕೋರ್ಟ್ ನಕಾರ

ನವದೆಹಲಿ/ಬೆಂಗಳೂರು: ಡಿಕೆ ಶಿವಕುಮಾರ್ (KPCC President DK Shivakumar)ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ತೆರವು ಕೋರಿ ಸಿಬಿಐ(CBI) ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ (supreme court) ವಿಚಾರಣೆ ನಡೆಸಿತು. ಆದ್ರೆ, ಇಂದು ಯಾವುದೇ ಮಧ್ಯಂತರ ಆದೇಶ ನೀಡಲು ನಿರಾಕರಿಸಿದೆ. ಅಲ್ಲದೇ ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ನಲ್ಲೇ ಅರ್ಜಿ ಸಲ್ಲಿಸಬಹುದು ಎಂದು ಸುಪ್ರೀಂಕೋರ್ಟ್, ಸಿಬಿಐ ತಿಳಿಸಿ ಮುಂದಿನ ವಿಚಾರಣೆಯನ್ನು ಜುಲೈ ತಿಂಗಳಿಗೆ ಮುಂದೂಡಿದೆ. ಇದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಅವರಿಗೆ ತಾತ್ಕಾಲಿಕವಾಗಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಡಿಕೆ ಶಿವಕುಮಾರ್ ವಿರುದ್ಧ ಪ್ರಕರಣದ ಸಿಬಿಐ ತನಿಖೆಗೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತ್ತು. ಈ ತಡೆಯಾಜ್ಞೆ ತೆರವು ಮಾಡುವಂತೆ ಸಿಬಿಐ ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂ, ಹೈಕೋರ್ಟ್ ರಜೆ ಅವಧಿ ಮುಗಿಯಲಿರುವುದರಿಂದ ಅಲ್ಲೇ ವಿಚಾರಣೆ ಸೂಕ್ತ ಎಂದು ಅಭಿಪ್ರಾಯಪಟ್ಟಿದೆ.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಡಿಕೆ ಶಿವಕುಮಾರ್​ ವಿರುದ್ಧದ ಸಿಬಿಐ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಅಲ್ಲದೇ ಬಳಿಕ ಮೇ ಅಂತ್ಯದವರೆಗೂ ಅದನ್ನು ವಿಸ್ತರಿಸಿತ್ತು.

ಡಿಕೆ ಶಿವಕುಮಾರ್‌ ಮತ್ತು ಅವರ ಕುಟುಂಬದ ಸದಸ್ಯರು 74.93 ಕೋಟಿ ರೂಪಾಯಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎಂಬ ಆರೋಪ ಸಂಬಂಧ ಸಿಬಿಐ ಪ್ರಕರಣ ದಾಖಲಿಸಿಕೊಂಡಿತ್ತು. ಅದರಂತೆ 2020ರ ಅಕ್ಟೋಬರ್ 5ರಂದು ದೆಹಲಿ, ಮುಂಬೈ ಸೇರಿದಂತೆ ಡಿಕೆ ಶಿವಕುಮಾರ್ ಅವರಿಗೆ ಸೇರಿದ 14 ಸ್ಥಳಗಳ ಮೇಲೆ ಸಿಬಿಐ ಏಕಕಾಲಕ್ಕೆ ದಾಳಿ ನಡೆಸಿತ್ತು. ಈ ವೇಳೆ ಕಂಪ್ಯೂಟರ್ ಹಾರ್ಡ್​ಡಿಸ್ಕ್​ ಹಾಗೂ 57 ಲಕ್ಷ ರೂ. ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು.

Published On - 1:22 pm, Wed, 17 May 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ