AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಖಾನೆ ಜಟಾಪಟಿ: ಸುಪ್ರೀಂಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್​ಗೆ ಗೆಲುವು

ಇತ್ತ ಬಿಜೆಪಿ ವಿಧಾನಪರಿಷತ್​ ಸದಸ್ಯ ಸಿಟಿ ರವಿಗೆ ಕರ್ನಾಟಕ ಹೈಕೋರ್ಟ್​ ಬಿಗ್ ರಿಲೀಫ್ ನೀಡಿದ್ದರೆ, ಅತ್ತ ಸುಪ್ರೀಂಕೋರ್ಟ್​ನಲ್ಲಿ ಬಸನಗೌಡ ಪಾಟೀಲ್​ಗೆ ಗೆಲುವುವಾಗಿದೆ. ಹೌದು....ಸಕ್ಕರೆ ಕಾರ್ಖಾನೆ ಸಂಬಂಧ ಸರ್ಕಾರ ಹಾಗೂ ಯತ್ನಾಳ್ ನಡುವಿನ ಹಗ್ಗಾಜಗ್ಗಾಟಕ್ಕೆ ಬ್ರೇಕ್ ಬಿದ್ದಿದೆ. ಸರ್ಕಾರದ ವಿರುದ್ಧದ ಕಾನೂನು ಹೋರಾಟದಲ್ಲಿ ಯತ್ನಾಳ್​ ಗೆಲುವು ಸಾಧಿಸಿದ್ದು, ರಾಜ್ಯ ಸರ್ಕಾರಕ್ಕೆ ಮುಖಂಭಗವಾಗಿದೆ.

ಕಾರ್ಖಾನೆ ಜಟಾಪಟಿ: ಸುಪ್ರೀಂಕೋರ್ಟ್‌ನಲ್ಲಿ ಬಸನಗೌಡ ಪಾಟೀಲ್ ಯತ್ನಾಳ್​ಗೆ ಗೆಲುವು
ಯತ್ನಾಳ್, ಸುಪ್ರೀಂಕೋರ್ಟ್​
ರಮೇಶ್ ಬಿ. ಜವಳಗೇರಾ
|

Updated on:Dec 20, 2024 | 9:50 PM

Share

ನವದೆಹಲಿ, (ಡಿಸೆಂಬರ್ 20): ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಒಡೆತನದ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ಪುನಾರಂಭಕ್ಕೆ ಅನುಮತಿ ನೀಡಿ ಸುಪ್ರೀಂಕೋರ್ಟ್​ ಆದೇಶ ಹೊರಡಿಸಿದೆ. ಕಲಬುರಗಿ ಜಿಲ್ಲೆಯ ಚಿಂಚೋಳಿಯಲ್ಲಿರುವ ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆಯನ್ನು ಪುನಾರಂಭಕ್ಕೆ ಏಳು ದಿನಗಳಲ್ಲಿ ಅನುಮತಿ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್​ ಸೂಚಿಸಿದ್ದು, ಕಾನೂನು ಸಮರದಲ್ಲಿ ಯತ್ನಾಳ್​ಗೆ ಗೆಲುವಾಗಿದೆ. ಇನ್ನು ರಾಜ್ಯ ಸರ್ಕಾರಕ್ಕೆ ಮುಖಭಂಗವಾಗಿದೆ.

ಕೆಲ ಕಾರಣಗಳನ್ನು ನೀಡಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್​​ಪಿಸಿಬಿ) ಸಿದ್ಧಸಿರಿ ಸಹಕಾರಿ ಸೌಹಾರ್ದ ನಿಯಮಿತ ಸಕ್ಕರೆ ಕಾರ್ಖಾನೆ ತೆರೆಯಲು ಅನುಮತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಯತ್ನಾಳ್,​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆಗ ಹೈಕೋರ್ಟ್​ ಕಾರ್ಖಾನೆ ತೆರೆಯಲು ಅನುಮತಿ ಆದೇಶಿಸಿತ್ತು. ಆದ್ರೆ, ಕೆಎಸ್​​ಪಿಸಿಬಿ, ಹೈಕೋರ್ಟ್​ನ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಇದೀಗ ಸುಪ್ರೀಂಕೋರ್ಟ್​ ಸಹ ಹೈಕೋರ್ಟ್​ನ ಆದೇಶವನ್ನು ಎತ್ತಿಹಿಡಿದೆ.

ಇದನ್ನೂ ಓದಿ: Karnataka Assembly Session: ಪರಿಸರ ಮಾಲಿನ್ಯ ಅಧಿಕಾರಿಗಳಿಗೆ ನನ್ನ ಸಕ್ಕರೆ ಕಾರ್ಖಾನೆ ಬಿಟ್ಟು ಬೇರೆ ಯೋಚನೆಯೇ ಇಲ್ಲ: ಬಸನಗೌಡ ಯತ್ನಾಳ್

ರೈತರಿಗೆ ಸಿಕ್ಕ ಗೆಲುವು ಎಂದ ಯತ್ನಾಳ್

ಇನ್ನು ಸುಪ್ರೀಂಕೋರ್ಟ್​ ಆದೇಶ ಹೊರಬರುತ್ತಿದ್ದಂತೆಯೇ ಟ್ವೀಟ್ ಮಾಡಿರುವ ಯತ್ನಾಳ್, ಕಲಬುರಗಿ ಜಿಲ್ಲೆಯ ಚಿಂಚೋಳಿಯ ಸಿದ್ಧಿಸಿರಿ ಸಕ್ಕರೆ ಕಾರ್ಖಾನೆಯಲ್ಲಿ ಮುಂದಿನ ಏಳು ದಿನದ ಒಳಗಾಗಿ ಕಬ್ಬು ಅರೆಯುವ ಪ್ರಕ್ರಿಯೆಸಲು ಸೂಕ್ತ ಆದೇಶ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ಬರೆದುಕೊಂಡಿದ್ದಾರೆ.

ಈ ಆದೇಶವು ಕಬ್ಬು ಬೆಳಗಾರರಿಗೆ ಸಿಕ್ಕ ಜಯವಾಗಿದೆ. ಕಾರ್ಖಾನೆ ಮುಚ್ಚಿಸಲು ಯತ್ನಿಸಿದ್ದವರ ಆಟ ನಡೆಯಲಿಲ್ಲ. ಈ ಐತಿಹಾಸಿಕ ತೀರ್ಪು ರೈತ ಮತ್ತು ಕಾರ್ಮಿಕ ಸಮುದಾಯ ಹಾಗೂ ರಾಜ್ಯದ ಅತ್ಯಂತ ಹಿಂದುಳಿದ ಭಾಗವಾದ ಚಿಂಚೋಳಿ ಭಾಗದ ಆರ್ಥಿಕ ಅಭಿವೃದ್ಧಿಗೆ ನೆರವಾಗಲಿದೆ ಎಂದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:47 pm, Fri, 20 December 24

Follow Us
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!