AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NLSIU: ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್​

ಜ್ಞಾನಭಾರತಿ ಬಳಿಯಿರುವ ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಎಂದು ಪರಿಗಣಿಸಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ನೀಡುಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.

NLSIU: ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್​
ಸುಪ್ರೀಂ​ ಕೋರ್ಟ್
TV9 Web
| Edited By: |

Updated on:Jul 02, 2021 | 2:10 PM

Share

ನವದೆಹಲಿ/ ಬೆಂಗಳೂರು: ಜ್ಞಾನಭಾರತಿ ಬಳಿಯಿರುವ ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಎಂದು ಪರಿಗಣಿಸಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ನೀಡುಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಸ್ಥಳೀಯರಾದ ಕರ್ನಾಟಕ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಒತ್ತು ಸಿಕ್ಕಿದಂತಾಗಿದೆ.

2021-22 ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಬೆಂಗಳೂರಿನ ನ್ಯಾಷನಲ್​ ಲಾ ಸ್ಕೂಲ್​ ಆಫ್​ ಇಂಡಿಯನ್ ಯೂನಿವರ್ಸಿಟಿ (National Law School of India University -NLSIU Bengaluru) ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ನಿಗದಿಪಡಿಸಿ, ಲಾ ಸ್ಕೂಲ್​ ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ತಡೆಹಿಡಿಯುವುದಿಲ್ಲ ಎಂದು ಜಸ್ಟೀಸ್​ ನಾಗೇಶ್ವರರಾವ್​ ಮತ್ತು ಜಸ್ಟೀಸ್ ರವೀಂದ್ರ ಭಟ್​ ಅವರ ನ್ಯಾಯಪೀಠ ಇಂದು ಆದೇಶ ನೀಡಿದೆ.

ಈ ತೀರ್ಪಿನಿಂದಾಗಿ ಜುಲೈ 23  ಶುಕ್ರವಾರದಂದು ಸಾಮಾನ್ಯ ಪ್ರವೇಶ ಪರೀಕ್ಷೆ (Common Law Admission Test -CLAT) ಈ ಹಿಂದೆ ನಿಗದಿಪಡಿಸಿರುವಂತೆ ನಡೆಯಲಿದೆ ಎಂದೂ ನ್ಯಾಯ ಪೀಠ ಸ್ಪಷ್ಟಪಡಿಸಿದೆ.

ಏನಿದು ವ್ಯಾಜ್ಯ:

 National Law School of India University NLSIU Bengaluru

ಬೆಂಗಳೂರಿನಲ್ಲಿರುವ ನ್ಯಾಷನಲ್​ ಲಾ ಸ್ಕೂಲ್

ಈ ಹಿಂದೆ ಕರ್ನಾಟಕ ಸರ್ಕಾರವು ಸ್ಥಳೀಯ ಕನ್ನಡಿಗರಿಗೆ ಆದ್ಯತೆಯ ಮೇರೆಗೆ ಬೆಂಗಳೂರಿನಲ್ಲಿರುವ ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಕಾನೂನು ವಿದ್ಯಾಭ್ಯಾಸಕ್ಕಾಗಿ ಶೇ. 25ರಷ್ಟು ಸೀಟುಗಳನ್ನು ನೀಡಬೇಕು ಎಂದು ತಿದ್ದುಪಡಿ ಕಾಯಿದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿತ್ತು. ಆದರೆ ಕರ್ನಾಟಕ ಹೈಕೋರ್ಟ್​ ರಾಜ್ಯ ಸರ್ಕಾರದ ತಿದ್ದುಪಡಿ ಕಾಯಿದೆಯನ್ನು ಕಳೆದ ವರ್ಷ (ಅಕ್ಟೋಬರ್ 2020) ಅನೂರ್ಜಿತಗೊಳಿಸಿತ್ತು.

ಇದರಿಂದ ಕಾನೂನು ವ್ಯಾಸಂಗ ಮಾಡಲು ಇಚ್ಛಿಸುವ ಸ್ಥಳೀಯ ವಿದ್ಯಾರ್ಥಿಗಳಿಗೆ ಅನ್ಯಾವಾಗುತ್ತದೆ. ಕನ್ನಡಿಗರಿಗೆ ಮೀಸಲಾತಿ ನೀಡಲೇಬೇಕು ಎಂದು ಮನವಿ ಮಾಡಿಕೊಂಡ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್​ ಮೊರೆಹೋಗಿತ್ತು. ಅರ್ಜಿ ಆಲಿಸಿದ ಸುಪ್ರೀಂ ಪೀಠವು ಇಂದು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪಕ್ಕಕ್ಕಿಟ್ಟು, ಈ ಹಿಂದಿನಂತೆ ಸ್ಥಳೀಯರಿಗೆ ಶೇ. 25 ರಷ್ಟು ಮೀಸಲಾತಿ ಇರಲಿ ಎಂದು ಸೂಚಿಸಿದೆ.

ಕರ್ನಾಟಕದಲ್ಲಿ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಯಾರು 10 ವರ್ಷ ಕಾಲ ವ್ಯಾಸಂಗ ಮಾಡಿರುತ್ತಾರೋ ಅಂತಹವರನ್ನು ‘ಕರ್ನಾಟಕ ವಿದ್ಯಾರ್ಥಿ’ (Karnataka Student) ಎಂದು ಪರಿಗಣಿಸಲಾಗುತ್ತದೆ.

ಇನ್ನು ಬೆಂಗಳೂರು ನ್ಯಾಷನಲ್​ ಲಾ ಸ್ಕೂಲ್​ನಲ್ಲಿ B.A, LL.B(Hons) ಮತ್ತು LLM ಶಿಕ್ಷಣಕ್ಕೆ ಅನುಕ್ರಮವಾಗಿ 120 ಮತ್ತು 50  ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ನಿಗದಿಪಡಿಸಲಾಗಿದೆ.

ಬೆಂಗಳೂರು ನ್ಯಾಷನಲ್​ ಲಾ ಸ್ಕೂಲ್ NLSIU Inclusion and Expansion Plan 2021-2024  ಯೋಜನೆಯಡಿ ಈ ಹಿಂದೆಯೇ  ಕರ್ನಾಟಕ ವಿದ್ಯಾರ್ಥಿಗಳಿಗೆ ಮೇಲಿನ 120 ಮತ್ತು 50  ಸೀಟುಗಳ ಪೈಕಿ ಶೇ. 25ರಷ್ಟನ್ನು ಮೀಸಲು ನಿಗದಿಪಡಿಸಿತ್ತು. ಆದರೆ ಇದರ ವಿರುದ್ಧ ಕರ್ನಾಟಕ ಹೈಕೋರ್ಟ್​ನಲ್ಲಿ ಪ್ರಶ್ನಿಸಲಾಗಿತ್ತು.

(Supreme Court Refuses To Stay NLSIU 25 per cent Reservation For Karnataka Students In 2021-22 Admissions)

Published On - 1:08 pm, Fri, 2 July 21

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ