AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NLSIU: ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್​

ಜ್ಞಾನಭಾರತಿ ಬಳಿಯಿರುವ ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಎಂದು ಪರಿಗಣಿಸಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ನೀಡುಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ.

NLSIU: ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ಎತ್ತಿಹಿಡಿದ ಸುಪ್ರೀಂ ಕೋರ್ಟ್​
ಸುಪ್ರೀಂ​ ಕೋರ್ಟ್
TV9 Web
| Edited By: |

Updated on:Jul 02, 2021 | 2:10 PM

Share

ನವದೆಹಲಿ/ ಬೆಂಗಳೂರು: ಜ್ಞಾನಭಾರತಿ ಬಳಿಯಿರುವ ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಸ್ಥಳೀಯ ವಿದ್ಯಾರ್ಥಿಗಳು ಎಂದು ಪರಿಗಣಿಸಿ ಕರ್ನಾಟಕ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ನೀಡುಬೇಕು ಎಂಬ ವಾದವನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ಸ್ಥಳೀಯರಾದ ಕರ್ನಾಟಕ ವಿದ್ಯಾರ್ಥಿಗಳಿಗೆ ಇದರಿಂದ ಹೆಚ್ಚಿನ ಒತ್ತು ಸಿಕ್ಕಿದಂತಾಗಿದೆ.

2021-22 ನೇ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಬೆಂಗಳೂರಿನ ನ್ಯಾಷನಲ್​ ಲಾ ಸ್ಕೂಲ್​ ಆಫ್​ ಇಂಡಿಯನ್ ಯೂನಿವರ್ಸಿಟಿ (National Law School of India University -NLSIU Bengaluru) ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಮೀಸಲಾತಿ ನಿಗದಿಪಡಿಸಿ, ಲಾ ಸ್ಕೂಲ್​ ಈಗಾಗಲೇ ಹೊರಡಿಸಿರುವ ಅಧಿಸೂಚನೆಯನ್ನು ತಡೆಹಿಡಿಯುವುದಿಲ್ಲ ಎಂದು ಜಸ್ಟೀಸ್​ ನಾಗೇಶ್ವರರಾವ್​ ಮತ್ತು ಜಸ್ಟೀಸ್ ರವೀಂದ್ರ ಭಟ್​ ಅವರ ನ್ಯಾಯಪೀಠ ಇಂದು ಆದೇಶ ನೀಡಿದೆ.

ಈ ತೀರ್ಪಿನಿಂದಾಗಿ ಜುಲೈ 23  ಶುಕ್ರವಾರದಂದು ಸಾಮಾನ್ಯ ಪ್ರವೇಶ ಪರೀಕ್ಷೆ (Common Law Admission Test -CLAT) ಈ ಹಿಂದೆ ನಿಗದಿಪಡಿಸಿರುವಂತೆ ನಡೆಯಲಿದೆ ಎಂದೂ ನ್ಯಾಯ ಪೀಠ ಸ್ಪಷ್ಟಪಡಿಸಿದೆ.

ಏನಿದು ವ್ಯಾಜ್ಯ:

 National Law School of India University NLSIU Bengaluru

ಬೆಂಗಳೂರಿನಲ್ಲಿರುವ ನ್ಯಾಷನಲ್​ ಲಾ ಸ್ಕೂಲ್

ಈ ಹಿಂದೆ ಕರ್ನಾಟಕ ಸರ್ಕಾರವು ಸ್ಥಳೀಯ ಕನ್ನಡಿಗರಿಗೆ ಆದ್ಯತೆಯ ಮೇರೆಗೆ ಬೆಂಗಳೂರಿನಲ್ಲಿರುವ ನ್ಯಾಷನಲ್​ ಲಾ ಸ್ಕೂಲ್​ನಲ್ಲಿ ಕಾನೂನು ವಿದ್ಯಾಭ್ಯಾಸಕ್ಕಾಗಿ ಶೇ. 25ರಷ್ಟು ಸೀಟುಗಳನ್ನು ನೀಡಬೇಕು ಎಂದು ತಿದ್ದುಪಡಿ ಕಾಯಿದೆಯನ್ನು ವಿಧಾನಸಭೆಯಲ್ಲಿ ಅಂಗೀಕರಿಸಿತ್ತು. ಆದರೆ ಕರ್ನಾಟಕ ಹೈಕೋರ್ಟ್​ ರಾಜ್ಯ ಸರ್ಕಾರದ ತಿದ್ದುಪಡಿ ಕಾಯಿದೆಯನ್ನು ಕಳೆದ ವರ್ಷ (ಅಕ್ಟೋಬರ್ 2020) ಅನೂರ್ಜಿತಗೊಳಿಸಿತ್ತು.

ಇದರಿಂದ ಕಾನೂನು ವ್ಯಾಸಂಗ ಮಾಡಲು ಇಚ್ಛಿಸುವ ಸ್ಥಳೀಯ ವಿದ್ಯಾರ್ಥಿಗಳಿಗೆ ಅನ್ಯಾವಾಗುತ್ತದೆ. ಕನ್ನಡಿಗರಿಗೆ ಮೀಸಲಾತಿ ನೀಡಲೇಬೇಕು ಎಂದು ಮನವಿ ಮಾಡಿಕೊಂಡ ಕರ್ನಾಟಕ ಸರ್ಕಾರವು ಸುಪ್ರೀಂ ಕೋರ್ಟ್​ ಮೊರೆಹೋಗಿತ್ತು. ಅರ್ಜಿ ಆಲಿಸಿದ ಸುಪ್ರೀಂ ಪೀಠವು ಇಂದು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪಕ್ಕಕ್ಕಿಟ್ಟು, ಈ ಹಿಂದಿನಂತೆ ಸ್ಥಳೀಯರಿಗೆ ಶೇ. 25 ರಷ್ಟು ಮೀಸಲಾತಿ ಇರಲಿ ಎಂದು ಸೂಚಿಸಿದೆ.

ಕರ್ನಾಟಕದಲ್ಲಿ ಮಾನ್ಯತೆ ಪಡೆದ ಕಾಲೇಜುಗಳಲ್ಲಿ ಯಾರು 10 ವರ್ಷ ಕಾಲ ವ್ಯಾಸಂಗ ಮಾಡಿರುತ್ತಾರೋ ಅಂತಹವರನ್ನು ‘ಕರ್ನಾಟಕ ವಿದ್ಯಾರ್ಥಿ’ (Karnataka Student) ಎಂದು ಪರಿಗಣಿಸಲಾಗುತ್ತದೆ.

ಇನ್ನು ಬೆಂಗಳೂರು ನ್ಯಾಷನಲ್​ ಲಾ ಸ್ಕೂಲ್​ನಲ್ಲಿ B.A, LL.B(Hons) ಮತ್ತು LLM ಶಿಕ್ಷಣಕ್ಕೆ ಅನುಕ್ರಮವಾಗಿ 120 ಮತ್ತು 50  ವಿದ್ಯಾರ್ಥಿಗಳಿಗೆ ಮಾತ್ರ ಪ್ರವೇಶಾವಕಾಶ ನಿಗದಿಪಡಿಸಲಾಗಿದೆ.

ಬೆಂಗಳೂರು ನ್ಯಾಷನಲ್​ ಲಾ ಸ್ಕೂಲ್ NLSIU Inclusion and Expansion Plan 2021-2024  ಯೋಜನೆಯಡಿ ಈ ಹಿಂದೆಯೇ  ಕರ್ನಾಟಕ ವಿದ್ಯಾರ್ಥಿಗಳಿಗೆ ಮೇಲಿನ 120 ಮತ್ತು 50  ಸೀಟುಗಳ ಪೈಕಿ ಶೇ. 25ರಷ್ಟನ್ನು ಮೀಸಲು ನಿಗದಿಪಡಿಸಿತ್ತು. ಆದರೆ ಇದರ ವಿರುದ್ಧ ಕರ್ನಾಟಕ ಹೈಕೋರ್ಟ್​ನಲ್ಲಿ ಪ್ರಶ್ನಿಸಲಾಗಿತ್ತು.

(Supreme Court Refuses To Stay NLSIU 25 per cent Reservation For Karnataka Students In 2021-22 Admissions)

Published On - 1:08 pm, Fri, 2 July 21

ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ಬಾಲಿವುಡ್ ಬಿದ್ದೋಯ್ತು, ಇದು ಸ್ಯಾಂಡಲ್​​ವುಡ್ ಸಮಯ: ಡಿಕೆಶಿ
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ