AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದ ಅರ್ಜಿ ವಜಾ, ಜಮೀರ್ ಅಹಮ್ಮದ್ ಖಾನ್ ನಿರಾಳ

ವಸತಿ ಸಚಿವ ಜಮೀರ್ ಅಹಮದ್ ಖಾನ್ ಅವರು ಶಾಸಕರಾಗಿ ಆಯ್ಕೆಯಾಗಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಚುನಾವಣಾ ಗ್ಯಾರಂಟಿಗಳು ಭ್ರಷ್ಟಾಚಾರಕ್ಕೆ‌ ಕಾರಣವಾಗುವುದಿಲ್ಲ ಸಾರ್ವಜನಿಕರಿಗೆ ನೇರವಾಗಿ ಆರ್ಥಿಕ ಸಹಾಯಕವಾಗುತ್ತದೆ ಎಂದು ಹೇಳಿ ಜಮೀರ್ ಅಹಮ್ಮದ್ ಅವರ ಶಾಸಕ ಸ್ಥಾನದಿಂದ​​​ ವಜಾgಒಳಿಸುವಂತೆ ಕೋರಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ ವಜಾಗೊಳಿಸಿ ಆದೇಶ ಹೊರಡಿಸಿದೆ.

ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿದ್ದ ಅರ್ಜಿ ವಜಾ,  ಜಮೀರ್ ಅಹಮ್ಮದ್  ಖಾನ್ ನಿರಾಳ
ಹರೀಶ್ ಜಿ.ಆರ್​.
| Edited By: |

Updated on: May 27, 2024 | 2:54 PM

Share

ನವದೆಹಲಿ/ಬೆಂಗಳೂರು, (ಮೇ 27): ಜಮೀರ್ ಅಹಮದ್ ಖಾನ್ (zameer Ahmed Khan) ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ (supreme court)​ ವಜಾ ಮಾಡಿದೆ. ಉಚಿತ ಗ್ಯಾರಂಟಿಗಳ ಆಮಿಷವೊಡ್ಡುವ ಮೂಲಕ ಜಮೀರ್ ಅಹಮ್ಮದ್ ಖಾನ್ ಅವರು ಚುನಾವಣಾ ಅಕ್ರಮ ಎಸಗಿದ್ದಾರೆ. ಹೀಗಾಗಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಚಾಮರಾಜಪೇಟೆ ನಿವಾಸಿ ಶಶಾಂಕ್ ಜೆ. ಶ್ರೀಧರ್ ಎಂಬುವರ ಅರ್ಜಿ ಸಲ್ಲಿಸಿದ್ದರು. ಇಂದು (ಮೇ 27) ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​​ನ ನ್ಯಾಯಮೂರ್ತಿ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿಸದಸ್ಯ ಪೀಠ, ಚುನಾವಣಾ ಗ್ಯಾರಂಟಿಗಳು ಭ್ರಷ್ಟಾಚಾರಕ್ಕೆ‌ ಕಾರಣವಾಗುವುದಿಲ್ಲ. ಸಾರ್ವಜನಿಕರಿಗೆ ನೇರವಾಗಿ ಆರ್ಥಿಕ ಸಹಾಯಕವಾಗುತ್ತದೆ. ಇದರಿಂದ ಅಭ್ಯರ್ಥಿ ಭ್ರಷ್ಟನಾಗುತ್ತಾನೆ ಎಂಬ ವಾದ ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದೆ.

ರಾಜಕೀಯ ಪಕ್ಷದ ಪ್ರಣಾಳಿಕೆಯಲ್ಲಿನ ಭರವಸೆಗಳು ಜನರಿಗೆ ಸಹಾಯಕವಾಗುತ್ತವೆ. ಸಾರ್ವಜನಿಕರಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಆರ್ಥಿಕ ಸಹಾಯಕ್ಕೆ ಕಾರಣವಾಗುತ್ತವೆ. ಇದರಿಂದ ಆ ಪಕ್ಷದ ಅಭ್ಯರ್ಥಿಯ ಭ್ರಷ್ಟಚಾರಕ್ಕೆ ಕಾರಣವಾಗುತ್ತದೆ ಎಂಬುದು ಸೂಕ್ತವಾದ ವಾದವಲ್ಲ. ಅದನ್ನು ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾಗೊಳಿಸಿದೆ.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ: ಸಚಿವ ಜಮೀರ್ ಅಹ್ಮದ್ ಖಾನ್ ಅರ್ಜಿ ವಜಾಗೊಳಿಸಿದ‌ ಹೈಕೋರ್ಟ್

ಈ ಮೊದಲು ಈ ಅರ್ಜಿ ಕರ್ನಾಟಕ ಹೈಕೋರ್ಟ್ ನಲ್ಲಿ ವಜಾಗೊಂಡಿತ್ತು. ಬಳಿಕ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಮತದಾರ ಶಶಾಂಕ ಜೆ ಶ್ರೀಧರ ಅವರು ಹೈಕೋರ್ಟ್​ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್​ ಸಹ ಅರ್ಜಿಯನ್ನು ವಜಾಗೊಳಿಸಿದೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಅವರಿಗೆ ಬಿಗ್​ ರಿಲೀಫ್ ಸಿಕ್ಕಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?