ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆ: ಸಿಎಂಗೆ ಬಿಗ್​ ರಿಲೀಫ್

2022ರಲ್ಲಿ ಕೊರೋನಾ ನಿಯಮ ಉಲ್ಲಂಘಿಸಿ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ನಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸುಪ್ರೀಂಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ವಿಚಾರಣೆಯನ್ನು ಮುಂದೂಡಿದೆ. ಈ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್​ ರಿಲೀಫ್​ ಸಿಕ್ಕಿದೆ. ಏನಿದು ಪ್ರಕರಣ? ಇಲ್ಲಿದೆ ವಿವರ

ಸಿದ್ದರಾಮಯ್ಯ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಮಧ್ಯಂತರ ತಡೆ: ಸಿಎಂಗೆ ಬಿಗ್​ ರಿಲೀಫ್
ಸುಪ್ರೀಂಕೋರ್ಟ್​, ಸಿದ್ದರಾಮಯ್ಯ
Updated By: ವಿವೇಕ ಬಿರಾದಾರ

Updated on: Apr 30, 2025 | 5:30 PM

ಬೆಂಗಳೂರು, ಏಪ್ರಿಲ್​ 30: ಮುಖ್ಯಮಂತ್ರಿ ಸಿದ್ದರಾಮಯ್ಯ (Siddadamaiah) ಸೇರಿದಂತೆ ಕಾಂಗ್ರೆಸ್​ನ (Congress) ಇತರ ನಾಯಕರಿಗೆ ಸುಪ್ರೀಂಕೋರ್ಟ್​ (Supreme Court) ಬಿಗ್​ ರಿಲೀಫ್​ ನೀಡಿದೆ. 2022 ರಲ್ಲಿ ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್​ನ ಇತರ ನಾಯಕರ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸುಪ್ರೀಂಕೋರ್ಟ್​ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಇತರೆ ನಾಯಕರು ಖಂಡಿಸಿ, ಕೊರೊನಾ ನಿಯಮಗಳನ್ನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಈ ಪ್ರಕರಣ ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್​ಗೆ ಕಾಂಗ್ರೆಸ್​ ನಾಯಕರು ಅರ್ಜಿ ಸಲ್ಲಿಸಿದ್ದರು. ಬುಧವಾರ ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಮಧ್ಯಂತರ ತಡೆಯಾಜ್ಫೆ ನೀಡಿ ವಿಚಾರಣೆ ಮುಂದೂಡಿದೆ.

ಏನಿದು ಪ್ರಕರಣ

ನ್ಯಾಷನಲ್​ ಹೆರಾಲ್ಡ್​ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ಜಾರಿ ನಿರ್ದೇಶನಾಲಯವು ಕಾಂಗ್ರೆಸ್​ ಸಂಸದ ರಾಹುಲ್ ಗಾಂಧಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಇದನ್ನು ವಿರೋಧಿಸಿ ರಾಜ್ಯ ಕಾಂಗ್ರೆಸ್​ ಸಮಿತಿಯು 2022ರ ಜೂನ್​ನಲ್ಲಿ ಪ್ರತಿಭಟನೆ ನಡೆಸಿತ್ತು. ಕರೋನಾ ನಿಯಮಗಳನ್ನು ಉಲ್ಲಂಘಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ಮಾಡಿದ್ದರು. ಹೀಗಾಗಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ
ಬೆಂಗಳೂರು-ಮೈಸೂರು ಹೆದ್ದಾರಿಗೆ ಚನ್ನಪಟ್ಟಣದಲ್ಲಿ ಹೊಸ ಎಂಟ್ರಿ, ಎಕ್ಸಿಟ್​​
‘ಭಾರತವನ್ನು ದ್ವೇಷಿಸುತ್ತೇನೆ’: ವೈದ್ಯೆ ಅಫೀಫ ಫಾತಿಮಾ ದೇಶ ವಿರೋಧಿ ಪೋಸ್ಟ್
ಬೆಳಗಾವಿ: ಸಿದ್ದರಾಮಯ್ಯಗೆ ಕಪ್ಪು ಬಟ್ಟೆ ತೋರಿಸಿದವರು ಅರೆಸ್ಟ್​
ಬೆಳಗಾವಿ: ಭಾಷಣ ವೇಳೆ ಸಿದ್ದರಾಮಯ್ಯಗೆ ಕಪ್ಪು ಬಟ್ಟೆ ಪ್ರದರ್ಶನ

ಇದನ್ನೂ ನೋಡಿ: ಪಾಕಿಸ್ತಾನದ ಪರ ಯಾರೇ ಘೋಷಣೆ ಕೂಗಿದರೂ ಅದು ತಪ್ಪು ಮತ್ತು ದೇಶದ್ರೋಹ: ಸಿದ್ದರಾಮಯ್ಯ, ಸಿಎಂ

ಪ್ರತಿಭಟನೆಯಿಂದ ಸಾರ್ವಜನಿಕರ ನೆಮ್ಮದಿಗೆ ಭಂಗವುಂಟಾಗಿದೆ ಮತ್ತು ಅಧಿಕಾರಿಗಳಿಂದ ಅಗತ್ಯ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಲಾಗಿದೆ ಎಂದು ಆರೋಪಿಸಲಾಗಿತ್ತು. ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಇದೇ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್ ನಂತರ ರದ್ದುಗೊಳಿಸಿತ್ತು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:27 pm, Wed, 30 April 25