AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಚುನಾವಣೆಗೆ ‘ಸುಪ್ರೀಂ’ ತಡೆ

BBMP ಚುನಾವಣೆಗೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಿತು.

BBMP ಚುನಾವಣೆಗೆ ‘ಸುಪ್ರೀಂ’ ತಡೆ
ಸುಪ್ರೀಂ ಕೋರ್ಟ್
Follow us
KUSHAL V
|

Updated on:Dec 18, 2020 | 4:20 PM

ಬೆಂಗಳೂರು: BBMP ಚುನಾವಣೆಗೆ ಸುಪ್ರೀಂ ಕೋರ್ಟ್​ ತಡೆ ನೀಡಿದೆ. ಚುನಾವಣೆ ಮುಂದೂಡುವಿಕೆಗೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿರುವ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದು, ಇದರ ವಿಚಾರಣೆ ಇಂದು ನಡೆಯಿತು.

1976ರ ಕೆಎಂಸಿ ಕಾಯ್ದೆಗೆ (ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆ) ತಿದ್ದುಪಡಿ ತಂದು ಬಿಬಿಎಂಪಿ ವಾರ್ಡ್‌ಗಳ ಸಂಖ್ಯೆಯನ್ನು 243ಕ್ಕೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಬಿಬಿಎಂಪಿ ಚುನಾವಣೆಯನ್ನು ನಡೆಸಿರಲಿಲ್ಲ. ಆದರೆ, ಬಿಬಿಎಂಪಿ ಚುನಾಯಿತ ಕೌನ್ಸಿಲ್ ಅವಧಿ 2020 ಸೆಪ್ಟೆಂಬರ್ 10ಕ್ಕೆ ಮುಗಿದಿತ್ತು. ಚುನಾವಣೆ ನಡೆಸಲು ವಿಳಂಬ ಮಾಡುತ್ತಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್‌ ಮುಖಂಡರಾದ ಎಂ.ಶಿವರಾಜು ಹಾಗೂ ಅಬ್ದುಲ್‌ ವಾಜಿದ್‌ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಇದರ ವಿಚಾರಣೆ ನಡೆಸಿದ್ದ ಹೈಕೋರ್ಟ್‌ನ ವಿಭಾಗೀಯ ಪೀಠವು, ವಾರ್ಡ್‌ವಾರು ಮೀಸಲಾತಿಯ ಅಂತಿಮ ಪಟ್ಟಿ ಪ್ರಕಟವಾದ ಆರು ವಾರಗಳ ಒಳಗೆ ಚುನಾವಣೆ ಪೂರ್ಣಗೊಳಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿತ್ತು.  ಆಗ ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಡಿ. 10ರಂದು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

BBMP ಚುನಾವಣೆ ಮುಂದೂಡುವಿಕೆಗೆ ಸರ್ಕಾರಿ ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ನಾಳೆ ವಿಚಾರಣೆ

Published On - 4:14 pm, Fri, 18 December 20

ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ದೆಹಲಿಯ ಅಕ್ಷರಧಾಮದಲ್ಲಿ ಮಾಕ್ ಡ್ರಿಲ್; ಮತ್ತೆ ಹೊತ್ತಿದ ದೀಪಗಳು
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಮಗಳ ಸಿನಿಮಾ ಪಯಣಕ್ಕೆ ದರ್ಶನ್, ಸುದೀಪ್ ಬೆಂಬಲ ನೆನೆದ ನಟ ಪ್ರೇಮ್
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಭಾರತದ ದಾಳಿಗೆ ಬಲಿಯಾದ ಉಗ್ರರಿಗೆ ಪಾಕಿಸ್ತಾನದ ಧ್ವಜ ಹೊದಿಸಿ ಅಂತ್ಯಕ್ರಿಯೆ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಬೆಂಗಳೂರಿನಲ್ಲಿ ಬ್ಲ್ಯಾಕ್ ಔಟ್: ಕಗ್ಗತ್ತಲಾದ ರಾಜಧಾನಿ, ವಿಡಿಯೋ ನೋಡಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್​ ಸಿಂಧೂರ್: ಭಾರತ ವಿವೇಕಯುತದಿಂದ ಹೆಜ್ಜೆ ಇಟ್ಟಿದೆ, ​ಗುರೂಜಿ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಆಪರೇಷನ್ ಸಿಂಧೂರ್: ಮೋದಿಯ ನಾಯಕತ್ವವ ಕೊಂಡಾಡಿದ ತಾರಾ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್