AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ!

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು.

ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ತಡೆಯಾಜ್ಞೆ: ಶಾಸಕ ರಮೇಶ್ ಜಾರಕಿಹೊಳಿಗೆ ತಪ್ಪಲಿಲ್ಲ ಸಂಕಷ್ಟ!
ಪ್ರಾತಿನಿಧಿಕ ಚಿತ್ರ
TV9 Web
| Updated By: ಸಾಧು ಶ್ರೀನಾಥ್​|

Updated on:Feb 18, 2022 | 2:14 PM

Share

ದೆಹಲಿ: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಸಿ.ಡಿ. ಬಹಿರಂಗ ಪ್ರಕರಣದಲ್ಲಿ ಕರ್ನಾಟಕ ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಸಿಡಿ ಪ್ರಕರಣದ ಬಗ್ಗೆ ತನಿಖೆಗೆ ರಚಿಸಿದ್ದ ಎಸ್​ಐಟಿ ತನಿಖೆ ಪ್ರಶ್ನಿಸಿ, ವಿಶೇಷ ತನಿಖಾ ತಂಡ ರಚನೆ ಸರಿಯಿಲ್ಲವೆಂದು ಬಾಧಿತ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದರು. ಪ್ರಕರಣದಲ್ಲಿ ಎಸ್​ಐಟಿ ಬಿ ರಿಪೋರ್ಟ್​ ಸಲ್ಲಿಸಲು ಮುಂದಾಗಿತ್ತು. ಇದೀಗ ಸುಪ್ರೀಂ ತಡೆಯಾಜ್ಞೆಯಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಂಕಷ್ಟ ತಪ್ಪಿದ್ದಲ್ಲ ಎನ್ನುವಂತಾಗಿದೆ.

ಮುಖ್ಯಸ್ಥರ ಅನುಪಸ್ಥಿತಿಯಲ್ಲಿ ಸಿ.ಡಿ. ಪ್ರಕರಣದ ತನಿಖೆಗೆ ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು. ಸರ್ಕಾರ ಸ್ವಯಂಪ್ರೇರಿತವಾಗಿ ಎಸ್​ಐಟಿ ರಚನೆ ಮಾಡಿಲ್ಲ. ಎಸ್​ಐಟಿ ರಚನೆಗೆ ರಾಜಕೀಯ ಒತ್ತಡ ಹೇರಲಾಗಿದೆ. ಇಂತಹ SIT ವರದಿ ಆಧರಿಸಿ ವಿಚಾರಣೆ ನಡೆಸುವುದು ತಪ್ಪು. ಎಸ್​ಐಟಿ ತನಿಖಾ ವರದಿಯ ಮೇಲೆ ನಮಗೆ ನಂಬಿಕೆಯಿಲ್ಲ. ಸಿ.ಡಿ. ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಪಾತ್ರ ಇಲ್ಲವೆಂದು ಸೆಷನ್ಸ್​ ಕೋರ್ಟ್​ಗೆ ವರದಿ ಸಲ್ಲಿಸಲು ಎಸ್​ಐಟಿ ಮುಂದಾಗಿದೆ. ವರದಿ ಸಲ್ಲಿಸಲು ಎಸ್​ಐಟಿಗೆ ಹೈಕೋರ್ಟ್​ ಸಹ ಸೂಚನೆ ನೀಡಿದೆ. ಇದಕ್ಕೆ ತಾವು ಅಸಮ್ಮತಿ ಸೂಚಿಸುವುದಾಗಿ ಬಾಧಿತ ಯುವತಿ ಸುಪ್ರೀಂ ಕೋರ್ಟ್​ಗೆ ಅಲವತ್ತುಕೊಂಡಿದ್ದರು. ಸಂತ್ರಸ್ತ ಯುವತಿಯ ಮನವಿಯನ್ನು ಪುರಸ್ಕರಿಸಿ, ಎಸ್​ಐಟಿ ವರದಿ ಸಲ್ಲಿಕೆಗೆ ಸುಪ್ರೀಂ ಕೋರ್ಟ್ ಇದೀಗ ತಡೆಯಾಜ್ಞೆ ನೀಡಿದೆ.

SIT ರಚನೆ ಸರಿಯಿದೆಯೇ ಎಂಬುದನ್ನ ಮೊದಲು ಖಾತರಿ ಪಡಿಸಿಕೊಳ್ಳಿ: ಸುಪ್ರೀಂ ಕೋರ್ಟ್​  ಈ ಮಧ್ಯೆ SIT ರಚನೆ ಸರಿಯಿದೆಯೇ ಎಂದು ಖಾತರಿ ಪಡಿಸಿಕೊಳ್ಳುವಂತೆ ಕರ್ನಾಟಕ ಹೈಕೋರ್ಟ್​ಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ. ಎಸ್​ಐಟಿ ರಚನೆ ಬಗ್ಗೆ ಹೈಕೋರ್ಟ್​ ತೀರ್ಮಾನಿಸಿದ ಬಳಿಕವಷ್ಟೇ ಸೆಷನ್ಸ್​ ಕೋರ್ಟ್​ನಲ್ಲಿ ಸಿಡಿ ಬಹಿರಂಗ ಪ್ರಕರಣದ ವಿಚಾರಣೆ ನಡೆಯಲಿದೆ. ಸಿ.ಡಿ. ಪ್ರಕರಣದ ವಿಚಾರಣೆ ಮಾರ್ಚ್ 9ರಂದು ಕರ್ನಾಟಕ ಹೈಕೋರ್ಟ್​ನಲ್ಲಿ ನಡೆಯಲಿದೆ.

ಇದನ್ನೂ ಓದಿ: ಸಿಡಿ ಬಹಿರಂಗ ಪ್ರಕರಣ: ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ; ಪ್ರಕರಣದ ಮರುತನಿಖೆ ಕೋರಿ ಅರ್ಜಿ ಸಲ್ಲಿಕೆ

ಇದನ್ನೂ ಓದಿ: ಪ್ರಧಾನಿ ಮೋದಿ- ಅಬು ಧಾಬಿ ದೊರೆ ನಡುವೆ ದ್ವಿಪಕ್ಷೀಯ ಶೃಂಗಸಭೆ ಇಂದು; ಇದಕ್ಕಿದೆ ಹೆಚ್ಚು ಮಹತ್ವ! ಏನದು? ಇಲ್ಲಿದೆ ವಿವರ

Published On - 1:57 pm, Fri, 18 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ